AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪೂರ್ಣ ಮಕ್ಕಳ ಸಿನಿಮಾ ಮಾಡಲು ಹೊರಟ ಆರ್ಯವರ್ಧನ್​; ‘ತುಂಟರು’ ಸಖತ್ ಪೋಲಿ

ಆರ್ಯವರ್ಧನ್ ಅವರು ‘ತುಂಟರು’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಸುಮಾರು 45 ರಿಂದ 50 ಮಕ್ಕಳು ಅಭಿನಯಿಸುತ್ತಿದ್ದಾರೆ ಅನ್ನೋದು ವಿಶೇಷ.

ಸಂಪೂರ್ಣ ಮಕ್ಕಳ ಸಿನಿಮಾ ಮಾಡಲು ಹೊರಟ ಆರ್ಯವರ್ಧನ್​; ‘ತುಂಟರು’ ಸಖತ್ ಪೋಲಿ
ತುಂಟರು ಸಿನಿಮಾ ತಂಡ
ರಾಜೇಶ್ ದುಗ್ಗುಮನೆ
|

Updated on:May 16, 2023 | 10:30 AM

Share

ಚಿತ್ರರಂಗದಲ್ಲಿ ಪ್ರಯೋಗಾತ್ಮಕ ಸಿನಿಮಾಗಳಿಗೇನೂ ಕೊರತೆ ಇಲ್ಲ. ಅನೇಕ ರೀತಿಯ ಪ್ರಯೋಗಾತ್ಮಕ ಸಿನಿಮಾಗಳು ಈಗಾಗಲೇ ಬಂದು ಹೋಗಿವೆ. ಸಂಪೂರ್ಣ ಮಕ್ಕಳ ಚಿತ್ರಗಳೂ ಅಲ್ಲೊಂದು, ಇಲ್ಲೊಂದು ಸಿದ್ಧಗೊಳ್ಳುತ್ತವೆ. ಈಗಾಗಲೇ ಎರಡು ಸಿನಿಮಾಗಳನ್ನು ಮಾಡಿದ ಅನುಭವ ಇರುವ ನಿರ್ದೇಶಕ ಆರ್ಯವರ್ಧನ್ (Aryavardhan) ಅವರು ಈಗ ಮತ್ತೊಂದು ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಲು ರೆಡಿ ಆಗಿದ್ದಾರೆ. ಇದು ಸಂಪೂರ್ಣವಾಗಿ ಮಕ್ಕಳ ಸಿನಿಮಾ ಅನ್ನೋದು ವಿಶೇಷ. ಇಲ್ಲಿ ಹೀರೋ-ಹೀರೋಯಿನ್​ನಿಂದ ಹಿಡಿದು ಪೋಷಕ ಪಾತ್ರದವರೆಗೆ ಎಲ್ಲರೂ ಮಕ್ಕಳೇ ಅನ್ನೋದು ವಿಶೇಷ. ಈ ಚಿತ್ರಕ್ಕೆ ‘ತುಂಟರು’ ಎಂದು ಶೀರ್ಷಿಕೆ ಇಡಲಾಗಿದೆ.

ಇತ್ತೀಚೆಗೆ ಚಿತ್ರಕ್ಕೆ ಮುಹೂರ್ತ ನಡೆದಿದ್ದು, ಬಳಿಕ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿತು. ಅನುರಾಗ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ‘ತುಂಟರು’ ಸಿನಿಮಾ ನಿರ್ಮಾಣ ಆಗುತ್ತಿದೆ. ಕೆಂಗೇರಿಯ ನವದುರ್ಗಿ ಶ್ರೀ ಗಂಗಮ್ಮ ಹಾಗೂ ಶ್ರೀ ಸೊಲ್ಲಾಪುರದಮ್ಮನವರ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಆರ್ಯವರ್ಧನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರಿಗೆ ಮೂರನೇ ಸಿನಿಮಾ. ಈ ಚಿತ್ರದಲ್ಲಿ ಸುಮಾರು 45 ರಿಂದ 50 ಮಕ್ಕಳು ಅಭಿನಯಿಸುತ್ತಿದ್ದಾರೆ. ಚಿತ್ರದ ನಾಯಕ, ನಾಯಕಿ, ಪೋಷಕಪಾತ್ರಗಳಲ್ಲಿ ಮಕ್ಕಳೇ ಕಾಣಿಸಿಕೊಳ್ಳುತ್ತಿದ್ದಾರೆ‌. ‘ತುಂಟರು’ ಚಿತ್ರಕ್ಕೆ ‘ಪೋಲಿ ಹುಡುಗರು’ ಎಂಬ ಅಡಿಬರಹವಿದೆ.

ಇದನ್ನೂ ಓದಿ: ಈ ಸ್ಟಾರ್​​ ನಟರ ಮಕ್ಕಳಿಗೆ ಚಿತ್ರರಂಗದಲ್ಲಿ ಸಿಗಲೇ ಇಲ್ಲ ಯಶಸ್ಸು; ಮಾಡಿದ ಸಿನಿಮಾಗಳೆಲ್ಲ ಫ್ಲಾಪ್

ಮಕ್ಕಳ ಸಿನಿಮಾ ಎಂದ ಮಾತ್ರಕ್ಕೆ ಚಿತ್ರದ ಕಥೆಯೂ ಅದೇ ರೀತಿ ಇಲ್ಲ. ಇದೊಂದು ಲವ್ ಜಾನರ್​ ಸಿನಿಮಾ! ಮೇ 15ರಂದು ಕೆಂಗೇರಿಯ ಕಾಲೋನಿಯೊಂದರಲ್ಲಿ ಚಿತ್ರೀಕರಣ ಆರಂಭ ಆಗಿದೆ. ಮೊದಲ ಹಂತದಲ್ಲಿ 15 ದಿನಗಳ ಕಾಲ ಶೂಟಿಂಗ್ ನಡೆಯಲಿದೆ. ಜೂನ್​ನಲ್ಲಿ ಮಕ್ಕಳಿಗೆ ಶಾಲೆ ಆರಂಭ ಆಗುತ್ತದೆ. ಆ ಬಳಿಕ ಶನಿವಾರ ಹಾಗೂ ಭಾನುವಾರ ಚಿತ್ರೀಕರಣ ಮಾಡಲು ನಿರ್ದೇಶಕ ಆರ್ಯವರ್ಧನ್ ನಿರ್ಧರಿಸಿದ್ದಾರೆ.

ಹರ್ಷ ಕಾಗೋಡ್ ಸಂಗೀತ ನಿರ್ದೇಶನ ಹಾಗೂ ಸೂರ್ಯ ಛಾಯಾಗ್ರಹಣ ‘ತುಂಟರು’ ಚಿತ್ರಕ್ಕಿದೆ. ಸಿನಿಮಾ ಚಿತ್ರೀಕರಣ ಮುಗಿಸಿ, ಬಳಿಕ ಬಹುಬೇಗ ಸಿನಿಮಾ ತೆರೆಗೆ ತರುವ ಪ್ಲ್ಯಾನ್ ಚಿತ್ರತಂಡದ್ದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:02 am, Tue, 16 May 23

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​