AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪೂರ್ಣ ಮಕ್ಕಳ ಸಿನಿಮಾ ಮಾಡಲು ಹೊರಟ ಆರ್ಯವರ್ಧನ್​; ‘ತುಂಟರು’ ಸಖತ್ ಪೋಲಿ

ಆರ್ಯವರ್ಧನ್ ಅವರು ‘ತುಂಟರು’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಸುಮಾರು 45 ರಿಂದ 50 ಮಕ್ಕಳು ಅಭಿನಯಿಸುತ್ತಿದ್ದಾರೆ ಅನ್ನೋದು ವಿಶೇಷ.

ಸಂಪೂರ್ಣ ಮಕ್ಕಳ ಸಿನಿಮಾ ಮಾಡಲು ಹೊರಟ ಆರ್ಯವರ್ಧನ್​; ‘ತುಂಟರು’ ಸಖತ್ ಪೋಲಿ
ತುಂಟರು ಸಿನಿಮಾ ತಂಡ
ರಾಜೇಶ್ ದುಗ್ಗುಮನೆ
|

Updated on:May 16, 2023 | 10:30 AM

Share

ಚಿತ್ರರಂಗದಲ್ಲಿ ಪ್ರಯೋಗಾತ್ಮಕ ಸಿನಿಮಾಗಳಿಗೇನೂ ಕೊರತೆ ಇಲ್ಲ. ಅನೇಕ ರೀತಿಯ ಪ್ರಯೋಗಾತ್ಮಕ ಸಿನಿಮಾಗಳು ಈಗಾಗಲೇ ಬಂದು ಹೋಗಿವೆ. ಸಂಪೂರ್ಣ ಮಕ್ಕಳ ಚಿತ್ರಗಳೂ ಅಲ್ಲೊಂದು, ಇಲ್ಲೊಂದು ಸಿದ್ಧಗೊಳ್ಳುತ್ತವೆ. ಈಗಾಗಲೇ ಎರಡು ಸಿನಿಮಾಗಳನ್ನು ಮಾಡಿದ ಅನುಭವ ಇರುವ ನಿರ್ದೇಶಕ ಆರ್ಯವರ್ಧನ್ (Aryavardhan) ಅವರು ಈಗ ಮತ್ತೊಂದು ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಲು ರೆಡಿ ಆಗಿದ್ದಾರೆ. ಇದು ಸಂಪೂರ್ಣವಾಗಿ ಮಕ್ಕಳ ಸಿನಿಮಾ ಅನ್ನೋದು ವಿಶೇಷ. ಇಲ್ಲಿ ಹೀರೋ-ಹೀರೋಯಿನ್​ನಿಂದ ಹಿಡಿದು ಪೋಷಕ ಪಾತ್ರದವರೆಗೆ ಎಲ್ಲರೂ ಮಕ್ಕಳೇ ಅನ್ನೋದು ವಿಶೇಷ. ಈ ಚಿತ್ರಕ್ಕೆ ‘ತುಂಟರು’ ಎಂದು ಶೀರ್ಷಿಕೆ ಇಡಲಾಗಿದೆ.

ಇತ್ತೀಚೆಗೆ ಚಿತ್ರಕ್ಕೆ ಮುಹೂರ್ತ ನಡೆದಿದ್ದು, ಬಳಿಕ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿತು. ಅನುರಾಗ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ‘ತುಂಟರು’ ಸಿನಿಮಾ ನಿರ್ಮಾಣ ಆಗುತ್ತಿದೆ. ಕೆಂಗೇರಿಯ ನವದುರ್ಗಿ ಶ್ರೀ ಗಂಗಮ್ಮ ಹಾಗೂ ಶ್ರೀ ಸೊಲ್ಲಾಪುರದಮ್ಮನವರ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಆರ್ಯವರ್ಧನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರಿಗೆ ಮೂರನೇ ಸಿನಿಮಾ. ಈ ಚಿತ್ರದಲ್ಲಿ ಸುಮಾರು 45 ರಿಂದ 50 ಮಕ್ಕಳು ಅಭಿನಯಿಸುತ್ತಿದ್ದಾರೆ. ಚಿತ್ರದ ನಾಯಕ, ನಾಯಕಿ, ಪೋಷಕಪಾತ್ರಗಳಲ್ಲಿ ಮಕ್ಕಳೇ ಕಾಣಿಸಿಕೊಳ್ಳುತ್ತಿದ್ದಾರೆ‌. ‘ತುಂಟರು’ ಚಿತ್ರಕ್ಕೆ ‘ಪೋಲಿ ಹುಡುಗರು’ ಎಂಬ ಅಡಿಬರಹವಿದೆ.

ಇದನ್ನೂ ಓದಿ: ಈ ಸ್ಟಾರ್​​ ನಟರ ಮಕ್ಕಳಿಗೆ ಚಿತ್ರರಂಗದಲ್ಲಿ ಸಿಗಲೇ ಇಲ್ಲ ಯಶಸ್ಸು; ಮಾಡಿದ ಸಿನಿಮಾಗಳೆಲ್ಲ ಫ್ಲಾಪ್

ಮಕ್ಕಳ ಸಿನಿಮಾ ಎಂದ ಮಾತ್ರಕ್ಕೆ ಚಿತ್ರದ ಕಥೆಯೂ ಅದೇ ರೀತಿ ಇಲ್ಲ. ಇದೊಂದು ಲವ್ ಜಾನರ್​ ಸಿನಿಮಾ! ಮೇ 15ರಂದು ಕೆಂಗೇರಿಯ ಕಾಲೋನಿಯೊಂದರಲ್ಲಿ ಚಿತ್ರೀಕರಣ ಆರಂಭ ಆಗಿದೆ. ಮೊದಲ ಹಂತದಲ್ಲಿ 15 ದಿನಗಳ ಕಾಲ ಶೂಟಿಂಗ್ ನಡೆಯಲಿದೆ. ಜೂನ್​ನಲ್ಲಿ ಮಕ್ಕಳಿಗೆ ಶಾಲೆ ಆರಂಭ ಆಗುತ್ತದೆ. ಆ ಬಳಿಕ ಶನಿವಾರ ಹಾಗೂ ಭಾನುವಾರ ಚಿತ್ರೀಕರಣ ಮಾಡಲು ನಿರ್ದೇಶಕ ಆರ್ಯವರ್ಧನ್ ನಿರ್ಧರಿಸಿದ್ದಾರೆ.

ಹರ್ಷ ಕಾಗೋಡ್ ಸಂಗೀತ ನಿರ್ದೇಶನ ಹಾಗೂ ಸೂರ್ಯ ಛಾಯಾಗ್ರಹಣ ‘ತುಂಟರು’ ಚಿತ್ರಕ್ಕಿದೆ. ಸಿನಿಮಾ ಚಿತ್ರೀಕರಣ ಮುಗಿಸಿ, ಬಳಿಕ ಬಹುಬೇಗ ಸಿನಿಮಾ ತೆರೆಗೆ ತರುವ ಪ್ಲ್ಯಾನ್ ಚಿತ್ರತಂಡದ್ದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:02 am, Tue, 16 May 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​