AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಬರ್ಟ್’ ಬೆಡಗಿ ಆಶಾ ಭಟ್ ಕಡೆಯಿಂದ ಇಲ್ಲ ಹೊಸ ಸಿನಿಮಾ; ಕಾರಣ ಏನು?

ಆಶಾ ಭಟ್ ‘ರಾಬರ್ಟ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ನಂತರ ಹೊಸ ಚಿತ್ರಗಳಲ್ಲಿ ಕಾಣಿಸಿಕೊಂಡಿಲ್ಲ. ಅವರು ತೆಲುಗು ಚಿತ್ರ 'ಒರಿ ದೇವುಡ' ದಲ್ಲಿ ನಟಿಸಿದ್ದರು. ಕನ್ನಡದಲ್ಲಿ ಹೊಸ ಯೋಜನೆಗಳನ್ನು ಘೋಷಿಸಿಲ್ಲ. ಇದಕ್ಕೆ ಕಾರಣ ಅವರು ಪಾತ್ರ ಮತ್ತು ಕಥೆ ಎರಡನ್ನೂ ಇಷ್ಟಪಡಬೇಕು ಎಂದು ಬಯಸುವುದು.

‘ರಾಬರ್ಟ್’ ಬೆಡಗಿ ಆಶಾ ಭಟ್ ಕಡೆಯಿಂದ ಇಲ್ಲ ಹೊಸ ಸಿನಿಮಾ; ಕಾರಣ ಏನು?
ಆಶಾ ಭಟ್
ರಾಜೇಶ್ ದುಗ್ಗುಮನೆ
|

Updated on: May 19, 2025 | 11:25 AM

Share

ಆಶಾ ಭಟ್ (Asha Bhat) ಅವರು ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದಲ್ಲಿ ನಟಿಸಿ ಕನ್ನಡಿಗರಿಗೆ ಹೆಚ್ಚು ಪರಿಚಿತರಾದರು. ಅವರ ಖ್ಯಾತಿ ಆ ಸಮಯದಲ್ಲಿ ಸಾಕಷ್ಟು ಹೆಚ್ಚಿತ್ತು. ಆ ಬಳಿಕ ಅವರು ಯಾವುದೇ ಕನ್ನಡ ಸಿನಿಮಾ ಘೋಷಣೆ ಮಾಡಿಲ್ಲ. ಹೀಗೇಕೆ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಕಾಡುತ್ತಲೇ ಇದೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಈವರೆಗೆ ರಿವೀಲ್ ಮಾಡಿಲ್ಲ. ಹಾಗಾದರೆ ಆಶಾ ಭಟ್ ಹೊಸ ಸಿನಿಮಾ ಘೋಷಣೆ ಮಾಡದೇ ಇರಲು ಕಾರಣ ಏನಿರಬಹುದು ಎಂಬುದರ ಬಗ್ಗೆ ಇಲ್ಲಿದೆ ಒಂದಷ್ಟು ಸಾಧ್ಯಾಸಾಧ್ಯತೆ.

ಆಶಾ ಭಟ್ 2014ರಲ್ಲಿ ‘ಸುಪ್ರಾ ಇಂಟರ್​ನ್ಯಾಷನಲ್’ ಕಿರೀಟ ಸಿಕ್ಕಿತು. ಆಗ ಅವರಿಗೆ 22 ವರ್ಷ ವಯಸ್ಸು. ಈ ಬಿರುದನ್ನು ಪಡೆದ ಮೊದಲ ಭಾರತೀಯ ಮಹಿಳೆ ಇವರು ಅನ್ನೋದು ಮತ್ತೊಂದು ವಿಶೇಷ. ಮಾಡೆಲಿಂಗ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಳಿಕ ಸಾಮಾನ್ಯವಾಗಿ ಚಿತ್ರರಂಗದಲ್ಲಿ ಆಫರ್ ಸಿಗುತ್ತದೆ. ಆಶಾ ಭಟ್​ಗೂ ಹಾಗೆಯೇ ಆಯಿತು.

ಇದನ್ನೂ ಓದಿ
Image
ಶಿವಣ್ಣ-ಗೀತಾ ದಂಪತಿಗೆ ವಿವಾಹ ವಾರ್ಷಿಕೋತ್ಸವ; ಇಲ್ಲಿದೆ ಅಪರೂಪದ ಚಿತ್ರಗಳು
Image
ದರ್ಶನ್-ವಿಜಯಲಕ್ಷ್ಮೀ ವಿವಾಹ ವಾರ್ಷಿಕೋತ್ಸವ; ಮದುವೆ ಆಮಂತ್ರಣ ಪತ್ರ ವೈರಲ್
Image
ಪ್ರತಿಷ್ಠಿತ ಕಾನ್ಸ್ ಫಿಲ್ಮ್​ ಚಿತ್ರೋತ್ಸವದಲ್ಲಿ ಲಕ್ಷ್ಮೀ ನಿವಾಸ ನಟಿ ದಿಶಾ
Image
ಸಿನಿಮಾ ರಿಲೀಸ್​ಗೂ ಮೊದಲೇ ಸೋಲಿನ ಬಗ್ಗೆ ಮಾತನಾಡಿದ ವಿಜಯ್ ದೇವರಕೊಂಡ

2019ರಲ್ಲಿ ರಿಲೀಸ್ ಆದ ಹಿಂದಿಯ ‘ಜಂಗ್ಲೀ’ ಚಿತ್ರದಲ್ಲಿ ಆಶಾ ಭಟ್ ಅವರು ನಟಿಸಿದರು. ಅವರಿಗೆ ಕನ್ನಡ ಸಿನಿಮಾ ಮಾಡಬೇಕು ಎನ್ನುವ ಆಸೆ ಮೊದಲಿನಿಂದಲೂ ಇತ್ತು. ಆ ಆಸೆಯನ್ನು ಅವರು ‘ರಾಬರ್ಟ್’ ಚಿತ್ರದ ಮೂಲಕ ಈಡೇರಿಸಿಕೊಂಡರು. ದರ್ಶನ್ ನಟನೆಯ ಈ ಚಿತ್ರ ಯಶಸ್ಸು ಕಂಡಿತು. ಈ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಪರಿಚಯಗೊಂಡರು.

ಇದನ್ನೂ ಓದಿ: ಲಂಗ ದಾವಣಿ ಧರಿಸಿ ನಲಿದಾಡಿದ ‘ರಾಬರ್ಟ್​’ ನಟಿ ಆಶಾ ಭಟ್​

ಆ ಬಳಿಕ ಅವರು 2022ರಲ್ಲಿ ‘ಒರಿ ದೇವುಡ’ ಚಿತ್ರದ ಮೂಲಕ ತೆಲುಗು ಬಣ್ಣದ ಲೋಕಕ್ಕೆ ಕಾಲಿಟ್ಟರು. ಮೀರಾ ಹೆಸರಿನ ಪಾತ್ರವನ್ನು ಮಾಡಿದರು. ಆ ಬಳಿಕ ಆಶಾ ಭಟ್ ನಟನೆಯ ಯಾವುದೇ ಚಿತ್ರ ರಿಲೀಸ್ ಆಗಿಲ್ಲ. ಅವರು ಹೊಸ ಸಿನಿಮಾ ಬಗ್ಗೆ ಯಾವುದೇ ಘೋಷಣೆ ಕೂಡ ಮಾಡಿಲ್ಲ.

View this post on Instagram

A post shared by Asha Bhat (@asha.bhat)

ಈ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ್ದ ಆಶಾ ಭಟ್ ಅವರು, ಕನ್ನಡ ಚಿತ್ರಗಳನ್ನು ಮಾಡಬೇಕು ಎಂದು ಆಸಕ್ತಿ ತೋರಿಸಿದ್ದರು. ಹಾಗಂದ ಮಾತ್ರಕ್ಕೆ ಅವರು ಸಿಕ್ಕ ಎಲ್ಲಾ ಚಿತ್ರಗಳನ್ನು ಒಪ್ಪಿ ನಟಿಸಲು ರೆಡಿ ಇಲ್ಲ. ಪಾತ್ರ ಹಾಗೂ ಕಥೆ ಎರಡೂ ಇಷ್ಟ ಆಗಬೇಕು. ಈ ಕಾರಣದಿಂದಲೇ ಸೂಕ್ತ ಸ್ಕ್ರಿಪ್ಟ್​ಗಾಗಿ ಅವರು ಕಾಯುತ್ತಾ ಇರಬಹುದು ಎಂಬುದು ಅನೇಕರ ಅಭಿಪ್ರಾಯ. ಸದ್ಯ ಆಶಾ ಭಟ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದು, ವಿವಿಧ ರೀತಿಯ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು