AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೀರೋ ಹೊಂಡಾ’ ಏರಿ ಬಂದ ಶರಣ್​-ಆಶಿಕಾ; ಕಲರ್​ ಫುಲ್​ ಸೆಟ್​ನಲ್ಲಿ ಮಸ್ತ್​ ಡ್ಯಾನ್ಸ್​

​ ‘ಚುಟು ಚುಟು..’ ಸಾಂಗ್ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈಗ ‘ಅವತಾರ ಪುರುಷ’ ಸಿನಿಮಾದಲ್ಲೂ ಉತ್ತರ ಕರ್ನಾಟಕ ಸಾಂಗ್​ ಬಳಕೆ ಮಾಡಿಕೊಳ್ಳಲಾಗಿದೆ.

‘ಹೀರೋ ಹೊಂಡಾ’ ಏರಿ ಬಂದ ಶರಣ್​-ಆಶಿಕಾ; ಕಲರ್​ ಫುಲ್​ ಸೆಟ್​ನಲ್ಲಿ ಮಸ್ತ್​ ಡ್ಯಾನ್ಸ್​
ಆಶಿಕಾ-ಶರಣ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Apr 02, 2022 | 2:51 PM

Share

ಶರಣ್​ (Sharan) ಹಾಗೂ ಆಶಿಕಾ ರಂಗನಾಥ್​ ನಟನೆಯ ‘ಅವತಾರ ಪುರುಷ’ ಸಿನಿಮಾ ನಾನಾ ಕಾರಣಗಳಿಗೆ ಸದ್ದು ಮಾಡುತ್ತಿದೆ. ಈವರೆಗೆ ಚಿತ್ರದ ಎರಡು ಟೀಸರ್​ಗಳು ರಿಲೀಸ್ ಆಗಿದ್ದು, ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಇಂದು (ಏಪ್ರಿಲ್ 2) ಯುಗಾದಿ ಹಬ್ಬ. ಈ ವಿಶೇಷ ದಿನದಂದು ‘ಅವತಾರ ಪುರುಷ’ ಸಿನಿಮಾದ (Avatara Purusha) ‘ಹೀರೋ ಹೊಂಡಾ..’ (Hero Honda) ವಿಡಿಯೋ ಸಾಂಗ್ ರಿಲೀಸ್ ಆಗಿದೆ. ಕಲರ್​ಫುಲ್​ ಸೆಟ್​ನಲ್ಲಿ, ಶರಣ್-ಆಶಿಕಾ​ ಮಸ್ತ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ. ಸದ್ಯ, ಈ ವಿಡಿಯೋಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

‘ರ‍್ಯಾಂಬೊ 2’ ಸಿನಿಮಾದಲ್ಲಿ ಶರಣ್​ ಹಾಗೂ ಆಶಿಕಾ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದಲ್ಲಿ ಇವರ ಕಾಂಬಿನೇಷನ್ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಅದೇ ರೀತಿ, ಈ ಸಿನಿಮಾದಲ್ಲಿದ್ದ ಉತ್ತರ ಕರ್ನಾಟಕದ ಸಾಂಗ್​ ‘ಚುಟು ಚುಟು..’ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. 2018ರಲ್ಲಿ ರಿಲೀಸ್ ಆದ ಈ ಹಾಡು ಒಂದಲ್ಲ, ಎರಡಲ್ಲ ಬರೋಬ್ಬರಿ 15 ಕೋಟಿ ಬಾರಿ ವೀಕ್ಷಣೆ ಕಂಡಿದೆ. ಜನರು ಈ ಹಾಡನ್ನು ಎಷ್ಟು ಇಷ್ಟಪಟ್ಟಿದ್ದಾರೆ ಎಂಬುದಕ್ಕೆ ವೀವ್ಸ್​ ಸಾಕ್ಷಿ. ಈಗ ‘ಅವತಾರ ಪುರುಷ’ ಸಿನಿಮಾದಲ್ಲೂ ಉತ್ತರ ಕರ್ನಾಟಕ ಸಾಂಗ್​ ಬಳಕೆ ಮಾಡಿಕೊಳ್ಳಲಾಗಿದೆ.

‘ಹೀರೋ ಹೊಂಡ’ ಹೆಸರಿನ ಸಾಂಗ್​ ‘ಅವತಾರ ಪುರುಷ’ ಸಿನಿಮಾದಲ್ಲಿದೆ. ಈ ಹಾಡಿಗಾಗಿ ಕಲರ್​​​ಫುಲ್ ಸೆಟ್​ ಹಾಕಲಾಗಿದ್ದು, ಶರಣ್​ ಹಾಗೂ ಆಶಿಕಾ ರಂಗನಾಥ್​ ಸಖತ್​ ಆಗಿ ಸ್ಟೆಪ್​ ಹಾಕಿದ್ದಾರೆ. ಆಶಿಕಾ ರಂಗನಾಥ್​ ಅವರ ಗ್ಲಾಮರಸ್ ಲುಕ್ ಪ್ರೇಕ್ಷಕರಿಗೆ ಇಷ್ಟವಾಗಿದೆ. ‘ಚುಟು ಚುಟು..’ ಹಾಡಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದರು. ವಿಶೇಷ ಎಂದರೆ, ‘ಹೀರೋ ಹೊಂಡ..’ ಹಾಡಿಗೂ ಅವರದ್ದೇ ಸಂಗೀತ ಸಂಯೋಜನೆ ಇದೆ.

ಮೇ 6ರಂದು ‘ಅವತಾರ ಪುರುಷ’ ಸಿನಿಮಾ ತೆರೆಗೆ ಬರುತ್ತಿದೆ. ಪುಷ್ಕರ್ ಫಿಲ್ಮ್ಸ್​ ಅಡಿಯಲ್ಲಿ ಪುಷ್ಕರ್ ಮಲ್ಲಿಕಾರ್ಜುನಯ್ಯ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸುನಿ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವಿಲಿಯಂ ಡೇವಿಡ್​ ಚಿತ್ರದ ಛಾಯಾಗ್ರಹಣ ಜವಾಬ್ದಾರಿ ನಿಭಾಯಿಸಿದ್ದಾರೆ.

ಇದನ್ನೂ ಓದಿ: ರಿಸರ್ಚ್​ ಮಾಡಿ ಫೀಲ್ಡ್​ಗೆ ಇಳಿದ ಸುನಿ; ‘ಅವತಾರ ಪುರುಷ’ ಟೀಸರ್​ನಲ್ಲಿ ಮತ್ತೊಂದು ಮುಖ ಅನಾವರಣ ‘ಅವತಾರ ಪುರುಷ’ ಪ್ರಚಾರಕ್ಕೆ ಬಳಕೆ ಆಗ್ತಿದೆ ‘ಆರ್​ಸಿಬಿ’ ಮ್ಯಾಚ್​; ಸಿಂಪಲ್ ಸುನಿಯ ಹೊಸ ಐಡಿಯಾ

Published On - 2:48 pm, Sat, 2 April 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ