Ashika Ranganath: ವೇದಿಕೆ ಮೇಲೆ ಆಶಿಕಾ ರಂಗನಾಥ್ ಡ್ಯಾನ್ಸ್ ನೋಡಿ ಫಿದಾ ಆದ ತೆಲುಗು ಮಂದಿ

ಈಗಾಗಲೇ ತೆಲುಗು ಚಿತ್ರರಂಗಕ್ಕೆ ಆಶಿಕಾ ಪರಿಚಯಗೊಂಡಿದ್ದಾರೆ. ‘ನಾ ಸಾಮಿ ರಂಗ’ ಚಿತ್ರದ ಮೂಲಕ ಅವರು ಗೆಲ್ಲುವ ಭರವಸೆಯಲ್ಲಿದ್ದಾರೆ. . ಈ ಚಿತ್ರದ ಬಳಿಕ ಅವರಿಗೆ ಬೇಡಿಕೆ ಹೆಚ್ಚಾಗಲಿದೆ ಎಂದು ನಿರ್ದೇಶಕರು ಭರವಸೆ ವ್ಯಕ್ತಪಡಿಸಿದ್ದರು.

Ashika Ranganath: ವೇದಿಕೆ ಮೇಲೆ ಆಶಿಕಾ ರಂಗನಾಥ್ ಡ್ಯಾನ್ಸ್ ನೋಡಿ ಫಿದಾ ಆದ ತೆಲುಗು ಮಂದಿ
ಆಶಿಕಾ
Follow us
|

Updated on:Jan 11, 2024 | 7:11 AM

ನಟಿ ಆಶಿಕಾ ರಂಗನಾಥ್ (Ashika Ranganath) ಅವರು ನಟನೆಯ ಜೊತೆಗೆ ಡ್ಯಾನ್ಸ್ ಮೂಲಕವೂ ಫೇಮಸ್ ಆಗಿದ್ದಾರೆ. ‘ಪಟಾಕಿ ಪೋರಿ..’ ಅಂಥ ಹಿಟ್ ಹಾಡುಗಳಲ್ಲಿ ಆಶಿಕಾ ಹೆಜ್ಜೆ ಹಾಕಿದ್ದಾರೆ. ಈಗ ಅವರು ತೆಲುಗಿನಲ್ಲಿ ಮಿಂಚಲು ರೆಡಿ ಆಗಿದ್ದಾರೆ. ‘ನಾ ಸಾಮಿ ರಂಗ’ ಚಿತ್ರದಲ್ಲಿ ಆಶಿಕಾ ರಂಗನಾಥ್ ನಟಿಸಿದ್ದಾರೆ. ಈ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಇತ್ತೀಚೆಗೆ ನಡೆಯಿತು. ಇದರಲ್ಲಿ ಭಾಗಿ ಆದ ತಂಡ ಸಾಕಷ್ಟು ಮನರಂಜನೆ ನೀಡಿದೆ. ಈ ವೇಳೆ ಆಶಿಕಾ ರಂಗನಾಥ್ ಅವರ ಡ್ಯಾನ್ಸ್ ನೋಡಿ ಎಲ್ಲರೂ ಖುಷಿಪಟ್ಟಿದ್ದಾರೆ.

2016ರಲ್ಲಿ ರಿಲೀಸ್ ಆದ ‘ಕ್ರೇಜಿ ಬಾಯ್’ ಚಿತ್ರದಿಂದ ಆಶಿಕಾ ರಂಗನಾಥ್ ಚಿತ್ರರಂಗಕ್ಕೆ ಬಂದರು. ಆ ಬಳಿಕ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಈಗಾಗಲೇ ‘ಅಮಿಗೋಸ್’ ಚಿತ್ರದ ಮೂಲಕ ಅವರು ತೆಲುಗು ಚಿತ್ರರಂಗಕ್ಕೆ ಪರಿಚಯಗೊಂಡಿದ್ದಾರೆ. ಈ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ಸಿಕ್ಕಿತು. ಈಗ ‘ನಾ ಸಾಮಿ ರಂಗ’ ಚಿತ್ರದ ಮೂಲಕ ಅವರು ಗೆಲ್ಲುವ ಭರವಸೆಯಲ್ಲಿದ್ದಾರೆ.

ವೇದಿಕೆ ಕೆಳಗೆ ಕುಳಿತಿದ್ದ ಆಶಿಕಾ ರಂಗನಾಥ್ ಅವರನ್ನು ವೇದಿಕೆ ಮೇಲೆ ಕರೆತರಲಾಯಿತು. ಆ ಬಳಿಕ ಅವರು ನಿರ್ದೇಶಕ ವಿಜಯ್ ಬಿನ್ನಿ ಜೊತೆ ಸಖಥ್ ಆಗಿ ಡ್ಯಾನ್ಸ್ ಮಾಡಿದರು. ಇದನ್ನು ನೋಡಿ ಪ್ರೇಕ್ಷಕರು ಇಷ್ಟಪಟ್ಟರು. ಆಶಿಕಾ ಅವರ ಟ್ಯಾಲೆಂಟ್ ಜನರಿಗೆ ಇಷ್ಟ ಆಗುತ್ತಿದೆ. ಆಶಿಕಾ ರಂಗನಾಥ್ ಅವರ ಬಗ್ಗೆ ಇತ್ತೀಚೆಗೆ ನಿರ್ದೇಶಕರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಈ ಚಿತ್ರದ ಬಳಿಕ ಅವರಿಗೆ ಬೇಡಿಕೆ ಹೆಚ್ಚಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಸಂಕ್ರಾಂತಿ ಬಳಿಕ ತೆಲುಗಿನಲ್ಲಿ ಬದಲಾಗುತ್ತೆ ಆಶಿಕಾ ರಂಗನಾಥ್​ ಅದೃಷ್ಟ

‘ನಾ ಸಾಮಿ ರಂಗ’ ಚಿತ್ರದಲ್ಲಿ ಅಕ್ಕಿನೇನಿ ನಾಗಾರ್ಜುನ ಅವರಿಗೆ ಆಶಿಕಾ ಜೊತೆಯಾಗಿದ್ದಾರೆ. ಸಂಕ್ರಾಂತಿ ಪ್ರಯುಕ್ತ ಜನವರಿ 14ರಂದು ಚಿತ್ರ ರಿಲೀಸ್ ಆಗುತ್ತಿದೆ. ಈ ಚಿತ್ರದ ಜೊತೆ ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ (ಜನವರಿ 12), ‘ಹನುಮಾನ್’ (ಜನವರಿ 12) ರಿಲೀಸ್ ಆಗುತ್ತಿವೆ. ಈ ಸಿನಿಮಾಗಳ ಜೊತೆ ‘ನಾ ಸಾಮಿ ರಂಗ’ ಪೈಪೋಟಿ ನೀಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:08 am, Thu, 11 January 24

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ