AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HBD Ashika Ranganath: ನೀವಂದುಕೊಂಡಂತೆ ಇಲ್ಲ ಆಶಿಕಾ ರಂಗನಾಥ್​; ಬರ್ತ್​ಡೇ ದಿನವೇ ಬಯಲಾಯ್ತು ಇನ್ನೊಂದು ಮುಖ

Ashika Ranganath Birthday: ಮದಗಜ ತಂಡ ಈ ಹಿಂದೆ ಬಿಡುಗಡೆ ಮಾಡಿದ್ದ ಪೋಸ್ಟರ್​ನಲ್ಲಿ ಆಶಿಕಾ ರಂಗನಾಥ್​ ಹಳ್ಳಿ ಹುಡುಗಿಯ ಗೆಟ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈಗ ಬಿಂದಾಸ್​ ಆಗಿ ಸಿಗರೇಟು ಸೇದುತ್ತಿರುವ ಈ ಫೋಸ್ಟರ್​ ನೋಡಿ ಸ್ವತಃ ಅವರ ಅಭಿಮಾನಿಗಳು ಅಚ್ಚರಿ ಪಡುವಂತಾಗಿದೆ.

HBD Ashika Ranganath: ನೀವಂದುಕೊಂಡಂತೆ ಇಲ್ಲ ಆಶಿಕಾ ರಂಗನಾಥ್​; ಬರ್ತ್​ಡೇ ದಿನವೇ ಬಯಲಾಯ್ತು ಇನ್ನೊಂದು ಮುಖ
ಆಶಿಕಾ ರಂಗನಾಥ್
TV9 Web
| Edited By: |

Updated on:Aug 05, 2021 | 9:00 AM

Share

ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿಯರಲ್ಲಿ ಆಶಿಕಾ ರಂಗನಾಥ್​ ಹೆಸರು ಕೂಡ ಮುಂಚೂಣಿಯಲ್ಲಿ ಕೇಳಿಬರುತ್ತದೆ. ಈಗಾಗಲೇ ಹಲವು ಸಿನಿಮಾಗಳ ಮೂಲಕ ಗಮನ ಸೆಳೆದಿರುವ ಅವರ ಕೈಯಲ್ಲಿ ಸದ್ಯ ಅನೇಕ ಆಫರ್​ಗಳಿವೆ. ಚಂದನವನದ ಸ್ಟಾರ್​ ಹೀರೋಗಳಿಗೆ ನಾಯಕಿಯಾಗಿ ಅವರು ಮುಂದುವರಿಯುತ್ತಿದ್ದಾರೆ. ಇಂದು (ಆ.5) ಅವರಿಗೆ ಜನ್ಮದಿನದ ಸಂಭ್ರಮ. ಆ ಪ್ರಯುಕ್ತ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಶುಭಕೋರುತ್ತಿದ್ದಾರೆ. ಆಶಿಕಾ ನಟಿಸುತ್ತಿರುವ ‘ಮದಗಜ’ ಸಿನಿಮಾದಿಂದ ಅವರ ಒಂದು ಹೊಸ ಪೋಸ್ಟರ್​ ರಿಲೀಸ್​ ಆಗಿದ್ದು ಅಚ್ಚರಿ ಮೂಡಿಸುವಂತಿದೆ. ಅದರಲ್ಲಿ ಆಶಿಕಾ ರಂಗನಾಥ್​ ಸಿಗರೇಟ್​ ಸೇದುತ್ತ ಶಾಕ್​ ನೀಡಿದ್ದಾರೆ!

ಹೌದು, ಇಷ್ಟು ದಿನ ಆಶಿಕಾ ರಂಗನಾಥ್​ ಅವರು ಈ ರೀತಿ ಕಾಣಿಸಿಕೊಂಡಿರಲಿಲ್ಲ. ಗ್ಲಾಮರಸ್​ ಆಗಿದ್ದರೂ ಕೂಡ ಮುಗ್ಧ ಹುಡುಗಿಯ ಲುಕ್​ನಲ್ಲಿ ಮನಸೆಳೆಯುತ್ತಿದ್ದ ಅವರು ಈಗ ಏಕಾಏಕಿ ಬೋಲ್ಡ್​ ಆಗಿದ್ದಾರೆ. ಈ ಮೊದಲು ಮದಗಜ ತಂಡ ಬಿಡುಗಡೆ ಮಾಡಿದ್ದ ಪೋಸ್ಟರ್​ನಲ್ಲಿ ಅವರು ಹಳ್ಳಿ ಹುಡುಗಿಯ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈಗ ಪಕ್ಕಾ ಮಾಡರ್ನ್​ ಹುಡುಗಿ ವೇಷ ತಾಳಿದ್ದಾರೆ. ಅಲ್ಲದೇ, ಬಿಂದಾಸ್​ ಆಗಿ ಸಿಗರೇಟು ಸೇದುತ್ತಿರುವ ಈ ಫೋಸ್ಟರ್​ ನೋಡಿ ಸ್ವತಃ ಅವರ ಅಭಿಮಾನಿಗಳು ಅಚ್ಚರಿ ಪಡುವಂತಾಗಿದೆ.

‘ಮದಗಜ’ ಚಿತ್ರಕ್ಕೆ ‘ಅಯೋಗ್ಯ’ ಖ್ಯಾತಿಯ ಮಹೇಶ್​ ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ‘ರೋರಿಂಗ್​ ಸ್ಟಾರ್’ ಶ್ರೀಮುರಳಿ ನಟನೆಯ ಈ ಸಿನಿಮಾ ಮೇಲೆ ಸಿನಿಪ್ರಿಯರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಟೀಸರ್​ಗಳ ಮೂಲಕ ಈ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ಅದನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ಆಶಿಕಾ ಅವರ ಈ ಹೊಸ ಪೋಸ್ಟರ್​ ಅನಾವರಣಗೊಂಡಿದೆ.

ಕೊರೊನಾ ಹಾವಳಿ ಇರುವ ಕಾರಣ ಇಂದು ಆಶಿಕಾ ರಂಗನಾಥ್​ ಅವರು ಅಭಿಮಾನಿಗಳನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ಆ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿದ್ದಾರೆ. ‘ಪ್ರಸ್ತುತ ಪರಿಸ್ಥಿತಿ ಮತ್ತು ನನ್ನ ಚಿತ್ರೀಕರಣ ವೇಳಾಪಟ್ಟಿಯಿಂದಾಗಿ ನಿಮ್ಮನ್ನು ಭೇಟಿಯಾಗಲು ಸಾಧ್ಯವಿಲ್ಲ. ನಿಮ್ಮ ಭೇಟಿಯಾಗದೇ ಇರುವುದು ಮತ್ತು ಈ ವಿಶೇಷ ದಿನವನ್ನು ನಿಮ್ಮೆಲ್ಲರೊಂದಿಗೆ ಆಚರಿಸದೇ ಇರುವುದು ನನಗೆ ತುಂಬಾ ದುಃಖ ತಂದಿದೆ. ಆದರೆ ಅದು ಎಲ್ಲರ ಆರೋಗ್ಯ ಮತ್ತು ಸುರಕ್ಷತೆಗಾಗಿ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಣೆಯಾದವರ ಬಗ್ಗೆ ಚಿತ್ರದಲ್ಲಿ ತುಂಬ ಹಾಟ್​ ಆಗಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್

ಇದನ್ನೂ ಓದಿ: ತೆಲುಗು ಚಿತ್ರರಂಗದಲ್ಲಿ ಸುದೀಪ್​ ನೆಚ್ಚಿನ ಹೀರೋ ಯಾರು? ವೈರಲ್​ ಆಗುತ್ತಿದೆ ಒಂದು ವಿಡಿಯೋ

Published On - 8:55 am, Thu, 5 August 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು