AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HBD Ashika Ranganath: ನೀವಂದುಕೊಂಡಂತೆ ಇಲ್ಲ ಆಶಿಕಾ ರಂಗನಾಥ್​; ಬರ್ತ್​ಡೇ ದಿನವೇ ಬಯಲಾಯ್ತು ಇನ್ನೊಂದು ಮುಖ

Ashika Ranganath Birthday: ಮದಗಜ ತಂಡ ಈ ಹಿಂದೆ ಬಿಡುಗಡೆ ಮಾಡಿದ್ದ ಪೋಸ್ಟರ್​ನಲ್ಲಿ ಆಶಿಕಾ ರಂಗನಾಥ್​ ಹಳ್ಳಿ ಹುಡುಗಿಯ ಗೆಟ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈಗ ಬಿಂದಾಸ್​ ಆಗಿ ಸಿಗರೇಟು ಸೇದುತ್ತಿರುವ ಈ ಫೋಸ್ಟರ್​ ನೋಡಿ ಸ್ವತಃ ಅವರ ಅಭಿಮಾನಿಗಳು ಅಚ್ಚರಿ ಪಡುವಂತಾಗಿದೆ.

HBD Ashika Ranganath: ನೀವಂದುಕೊಂಡಂತೆ ಇಲ್ಲ ಆಶಿಕಾ ರಂಗನಾಥ್​; ಬರ್ತ್​ಡೇ ದಿನವೇ ಬಯಲಾಯ್ತು ಇನ್ನೊಂದು ಮುಖ
ಆಶಿಕಾ ರಂಗನಾಥ್
TV9 Web
| Edited By: |

Updated on:Aug 05, 2021 | 9:00 AM

Share

ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿಯರಲ್ಲಿ ಆಶಿಕಾ ರಂಗನಾಥ್​ ಹೆಸರು ಕೂಡ ಮುಂಚೂಣಿಯಲ್ಲಿ ಕೇಳಿಬರುತ್ತದೆ. ಈಗಾಗಲೇ ಹಲವು ಸಿನಿಮಾಗಳ ಮೂಲಕ ಗಮನ ಸೆಳೆದಿರುವ ಅವರ ಕೈಯಲ್ಲಿ ಸದ್ಯ ಅನೇಕ ಆಫರ್​ಗಳಿವೆ. ಚಂದನವನದ ಸ್ಟಾರ್​ ಹೀರೋಗಳಿಗೆ ನಾಯಕಿಯಾಗಿ ಅವರು ಮುಂದುವರಿಯುತ್ತಿದ್ದಾರೆ. ಇಂದು (ಆ.5) ಅವರಿಗೆ ಜನ್ಮದಿನದ ಸಂಭ್ರಮ. ಆ ಪ್ರಯುಕ್ತ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಶುಭಕೋರುತ್ತಿದ್ದಾರೆ. ಆಶಿಕಾ ನಟಿಸುತ್ತಿರುವ ‘ಮದಗಜ’ ಸಿನಿಮಾದಿಂದ ಅವರ ಒಂದು ಹೊಸ ಪೋಸ್ಟರ್​ ರಿಲೀಸ್​ ಆಗಿದ್ದು ಅಚ್ಚರಿ ಮೂಡಿಸುವಂತಿದೆ. ಅದರಲ್ಲಿ ಆಶಿಕಾ ರಂಗನಾಥ್​ ಸಿಗರೇಟ್​ ಸೇದುತ್ತ ಶಾಕ್​ ನೀಡಿದ್ದಾರೆ!

ಹೌದು, ಇಷ್ಟು ದಿನ ಆಶಿಕಾ ರಂಗನಾಥ್​ ಅವರು ಈ ರೀತಿ ಕಾಣಿಸಿಕೊಂಡಿರಲಿಲ್ಲ. ಗ್ಲಾಮರಸ್​ ಆಗಿದ್ದರೂ ಕೂಡ ಮುಗ್ಧ ಹುಡುಗಿಯ ಲುಕ್​ನಲ್ಲಿ ಮನಸೆಳೆಯುತ್ತಿದ್ದ ಅವರು ಈಗ ಏಕಾಏಕಿ ಬೋಲ್ಡ್​ ಆಗಿದ್ದಾರೆ. ಈ ಮೊದಲು ಮದಗಜ ತಂಡ ಬಿಡುಗಡೆ ಮಾಡಿದ್ದ ಪೋಸ್ಟರ್​ನಲ್ಲಿ ಅವರು ಹಳ್ಳಿ ಹುಡುಗಿಯ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈಗ ಪಕ್ಕಾ ಮಾಡರ್ನ್​ ಹುಡುಗಿ ವೇಷ ತಾಳಿದ್ದಾರೆ. ಅಲ್ಲದೇ, ಬಿಂದಾಸ್​ ಆಗಿ ಸಿಗರೇಟು ಸೇದುತ್ತಿರುವ ಈ ಫೋಸ್ಟರ್​ ನೋಡಿ ಸ್ವತಃ ಅವರ ಅಭಿಮಾನಿಗಳು ಅಚ್ಚರಿ ಪಡುವಂತಾಗಿದೆ.

‘ಮದಗಜ’ ಚಿತ್ರಕ್ಕೆ ‘ಅಯೋಗ್ಯ’ ಖ್ಯಾತಿಯ ಮಹೇಶ್​ ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ‘ರೋರಿಂಗ್​ ಸ್ಟಾರ್’ ಶ್ರೀಮುರಳಿ ನಟನೆಯ ಈ ಸಿನಿಮಾ ಮೇಲೆ ಸಿನಿಪ್ರಿಯರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಟೀಸರ್​ಗಳ ಮೂಲಕ ಈ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ಅದನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ಆಶಿಕಾ ಅವರ ಈ ಹೊಸ ಪೋಸ್ಟರ್​ ಅನಾವರಣಗೊಂಡಿದೆ.

ಕೊರೊನಾ ಹಾವಳಿ ಇರುವ ಕಾರಣ ಇಂದು ಆಶಿಕಾ ರಂಗನಾಥ್​ ಅವರು ಅಭಿಮಾನಿಗಳನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ಆ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿದ್ದಾರೆ. ‘ಪ್ರಸ್ತುತ ಪರಿಸ್ಥಿತಿ ಮತ್ತು ನನ್ನ ಚಿತ್ರೀಕರಣ ವೇಳಾಪಟ್ಟಿಯಿಂದಾಗಿ ನಿಮ್ಮನ್ನು ಭೇಟಿಯಾಗಲು ಸಾಧ್ಯವಿಲ್ಲ. ನಿಮ್ಮ ಭೇಟಿಯಾಗದೇ ಇರುವುದು ಮತ್ತು ಈ ವಿಶೇಷ ದಿನವನ್ನು ನಿಮ್ಮೆಲ್ಲರೊಂದಿಗೆ ಆಚರಿಸದೇ ಇರುವುದು ನನಗೆ ತುಂಬಾ ದುಃಖ ತಂದಿದೆ. ಆದರೆ ಅದು ಎಲ್ಲರ ಆರೋಗ್ಯ ಮತ್ತು ಸುರಕ್ಷತೆಗಾಗಿ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಣೆಯಾದವರ ಬಗ್ಗೆ ಚಿತ್ರದಲ್ಲಿ ತುಂಬ ಹಾಟ್​ ಆಗಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್

ಇದನ್ನೂ ಓದಿ: ತೆಲುಗು ಚಿತ್ರರಂಗದಲ್ಲಿ ಸುದೀಪ್​ ನೆಚ್ಚಿನ ಹೀರೋ ಯಾರು? ವೈರಲ್​ ಆಗುತ್ತಿದೆ ಒಂದು ವಿಡಿಯೋ

Published On - 8:55 am, Thu, 5 August 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ