AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HBD Ashika Ranganath: ನೀವಂದುಕೊಂಡಂತೆ ಇಲ್ಲ ಆಶಿಕಾ ರಂಗನಾಥ್​; ಬರ್ತ್​ಡೇ ದಿನವೇ ಬಯಲಾಯ್ತು ಇನ್ನೊಂದು ಮುಖ

Ashika Ranganath Birthday: ಮದಗಜ ತಂಡ ಈ ಹಿಂದೆ ಬಿಡುಗಡೆ ಮಾಡಿದ್ದ ಪೋಸ್ಟರ್​ನಲ್ಲಿ ಆಶಿಕಾ ರಂಗನಾಥ್​ ಹಳ್ಳಿ ಹುಡುಗಿಯ ಗೆಟ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈಗ ಬಿಂದಾಸ್​ ಆಗಿ ಸಿಗರೇಟು ಸೇದುತ್ತಿರುವ ಈ ಫೋಸ್ಟರ್​ ನೋಡಿ ಸ್ವತಃ ಅವರ ಅಭಿಮಾನಿಗಳು ಅಚ್ಚರಿ ಪಡುವಂತಾಗಿದೆ.

HBD Ashika Ranganath: ನೀವಂದುಕೊಂಡಂತೆ ಇಲ್ಲ ಆಶಿಕಾ ರಂಗನಾಥ್​; ಬರ್ತ್​ಡೇ ದಿನವೇ ಬಯಲಾಯ್ತು ಇನ್ನೊಂದು ಮುಖ
ಆಶಿಕಾ ರಂಗನಾಥ್
TV9 Web
| Edited By: |

Updated on:Aug 05, 2021 | 9:00 AM

Share

ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿಯರಲ್ಲಿ ಆಶಿಕಾ ರಂಗನಾಥ್​ ಹೆಸರು ಕೂಡ ಮುಂಚೂಣಿಯಲ್ಲಿ ಕೇಳಿಬರುತ್ತದೆ. ಈಗಾಗಲೇ ಹಲವು ಸಿನಿಮಾಗಳ ಮೂಲಕ ಗಮನ ಸೆಳೆದಿರುವ ಅವರ ಕೈಯಲ್ಲಿ ಸದ್ಯ ಅನೇಕ ಆಫರ್​ಗಳಿವೆ. ಚಂದನವನದ ಸ್ಟಾರ್​ ಹೀರೋಗಳಿಗೆ ನಾಯಕಿಯಾಗಿ ಅವರು ಮುಂದುವರಿಯುತ್ತಿದ್ದಾರೆ. ಇಂದು (ಆ.5) ಅವರಿಗೆ ಜನ್ಮದಿನದ ಸಂಭ್ರಮ. ಆ ಪ್ರಯುಕ್ತ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಶುಭಕೋರುತ್ತಿದ್ದಾರೆ. ಆಶಿಕಾ ನಟಿಸುತ್ತಿರುವ ‘ಮದಗಜ’ ಸಿನಿಮಾದಿಂದ ಅವರ ಒಂದು ಹೊಸ ಪೋಸ್ಟರ್​ ರಿಲೀಸ್​ ಆಗಿದ್ದು ಅಚ್ಚರಿ ಮೂಡಿಸುವಂತಿದೆ. ಅದರಲ್ಲಿ ಆಶಿಕಾ ರಂಗನಾಥ್​ ಸಿಗರೇಟ್​ ಸೇದುತ್ತ ಶಾಕ್​ ನೀಡಿದ್ದಾರೆ!

ಹೌದು, ಇಷ್ಟು ದಿನ ಆಶಿಕಾ ರಂಗನಾಥ್​ ಅವರು ಈ ರೀತಿ ಕಾಣಿಸಿಕೊಂಡಿರಲಿಲ್ಲ. ಗ್ಲಾಮರಸ್​ ಆಗಿದ್ದರೂ ಕೂಡ ಮುಗ್ಧ ಹುಡುಗಿಯ ಲುಕ್​ನಲ್ಲಿ ಮನಸೆಳೆಯುತ್ತಿದ್ದ ಅವರು ಈಗ ಏಕಾಏಕಿ ಬೋಲ್ಡ್​ ಆಗಿದ್ದಾರೆ. ಈ ಮೊದಲು ಮದಗಜ ತಂಡ ಬಿಡುಗಡೆ ಮಾಡಿದ್ದ ಪೋಸ್ಟರ್​ನಲ್ಲಿ ಅವರು ಹಳ್ಳಿ ಹುಡುಗಿಯ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈಗ ಪಕ್ಕಾ ಮಾಡರ್ನ್​ ಹುಡುಗಿ ವೇಷ ತಾಳಿದ್ದಾರೆ. ಅಲ್ಲದೇ, ಬಿಂದಾಸ್​ ಆಗಿ ಸಿಗರೇಟು ಸೇದುತ್ತಿರುವ ಈ ಫೋಸ್ಟರ್​ ನೋಡಿ ಸ್ವತಃ ಅವರ ಅಭಿಮಾನಿಗಳು ಅಚ್ಚರಿ ಪಡುವಂತಾಗಿದೆ.

‘ಮದಗಜ’ ಚಿತ್ರಕ್ಕೆ ‘ಅಯೋಗ್ಯ’ ಖ್ಯಾತಿಯ ಮಹೇಶ್​ ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ‘ರೋರಿಂಗ್​ ಸ್ಟಾರ್’ ಶ್ರೀಮುರಳಿ ನಟನೆಯ ಈ ಸಿನಿಮಾ ಮೇಲೆ ಸಿನಿಪ್ರಿಯರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಟೀಸರ್​ಗಳ ಮೂಲಕ ಈ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ಅದನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ಆಶಿಕಾ ಅವರ ಈ ಹೊಸ ಪೋಸ್ಟರ್​ ಅನಾವರಣಗೊಂಡಿದೆ.

ಕೊರೊನಾ ಹಾವಳಿ ಇರುವ ಕಾರಣ ಇಂದು ಆಶಿಕಾ ರಂಗನಾಥ್​ ಅವರು ಅಭಿಮಾನಿಗಳನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ಆ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿದ್ದಾರೆ. ‘ಪ್ರಸ್ತುತ ಪರಿಸ್ಥಿತಿ ಮತ್ತು ನನ್ನ ಚಿತ್ರೀಕರಣ ವೇಳಾಪಟ್ಟಿಯಿಂದಾಗಿ ನಿಮ್ಮನ್ನು ಭೇಟಿಯಾಗಲು ಸಾಧ್ಯವಿಲ್ಲ. ನಿಮ್ಮ ಭೇಟಿಯಾಗದೇ ಇರುವುದು ಮತ್ತು ಈ ವಿಶೇಷ ದಿನವನ್ನು ನಿಮ್ಮೆಲ್ಲರೊಂದಿಗೆ ಆಚರಿಸದೇ ಇರುವುದು ನನಗೆ ತುಂಬಾ ದುಃಖ ತಂದಿದೆ. ಆದರೆ ಅದು ಎಲ್ಲರ ಆರೋಗ್ಯ ಮತ್ತು ಸುರಕ್ಷತೆಗಾಗಿ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಣೆಯಾದವರ ಬಗ್ಗೆ ಚಿತ್ರದಲ್ಲಿ ತುಂಬ ಹಾಟ್​ ಆಗಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್

ಇದನ್ನೂ ಓದಿ: ತೆಲುಗು ಚಿತ್ರರಂಗದಲ್ಲಿ ಸುದೀಪ್​ ನೆಚ್ಚಿನ ಹೀರೋ ಯಾರು? ವೈರಲ್​ ಆಗುತ್ತಿದೆ ಒಂದು ವಿಡಿಯೋ

Published On - 8:55 am, Thu, 5 August 21

Follow Us
Web contact
Web contact

TV9 Kannada

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?