AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶಿಕಾ, ದುಷ್ಯಂತ್ ನಟನೆಯ ‘ಗತವೈಭವ’ ಸಿನಿಮಾಗೆ ಶೂಟಿಂಗ್ ಮುಕ್ತಾಯ

‘ಗತವೈಭವ’ ಸಿನಿಮಾದಲ್ಲಿ ದುಷ್ಯಂತ್, ಆಶಿಕಾ ರಂಗನಾಥ್ ಅವರು ಜೋಡಿಯಾಗಿ ಅಭಿನಯಿಸಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ ಈ ಸಿನಿಮಾಗೆ ಅನೇಕ ಲೊಕೇಷನ್​ಗಳಲ್ಲಿ ಚಿತ್ರೀಕರಣ ನಡೆದಿದೆ. ಈ ಚಿತ್ರದಲ್ಲಿ ಸೈಂಟಿಫಿಕ್ ಥ್ರಿಲ್ಲರ್ ಜೊತೆ ಒಂದು ಲವ್​ಸ್ಟೋರಿ ಹೇಳಲು ಸುನಿ ಪ್ಲ್ಯಾನ್ ಮಾಡಿದ್ದಾರೆ. ಚಿತ್ರದ ಕೆಲಸಗಳು ಈಗ ಪೋಸ್ಟ್​ ಪ್ರೊಡಕ್ಷನ್ ಹಂತದಲ್ಲಿವೆ.

ಆಶಿಕಾ, ದುಷ್ಯಂತ್ ನಟನೆಯ ‘ಗತವೈಭವ’ ಸಿನಿಮಾಗೆ ಶೂಟಿಂಗ್ ಮುಕ್ತಾಯ
Ashika Ranganath, Dushyanth
ಮದನ್​ ಕುಮಾರ್​
|

Updated on: Jan 29, 2025 | 6:51 PM

Share

ಪ್ರತಿಯೊಂದು ಸಿನಿಮಾದಲ್ಲೂ ನಿರ್ದೇಶಕ ಸಿಂಪಲ್ ಸುನಿ ಅವರು ಡಿಫರೆಂಟ್​ ಕಥಾವಸ್ತುವನ್ನು ಪ್ರೇಕ್ಷಕರ ಮುಂದಿಡುತ್ತಾರೆ. ಈಗ ಅವರು ‘ಗತವೈಭವ’ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರತಂಡದಿಂದ ಹೊಸದೊಂದು ಅಪ್​ಡೇಟ್​ ಸಿಕ್ಕಿದೆ. ‘ಗತವೈಭವ’ ಸಿನಿಮಾದ ಶೂಟಿಂಗ್ ಮುಕ್ತಾಯ ಆಗಿದೆ. ವಿದೇಶದಲ್ಲಿ ಚಿತ್ರೀಕರಣ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಪೋರ್ಚುಗಲ್ ಹಾಗೂ ಮುಂತಾದ ಕಡೆಗಳಲ್ಲಿ ಶೂಟಿಂಗ್ ಮಾಡಿದೆ ‘ಗತವೈಭವ’ ಚಿತ್ರತಂಡ.

‘ಗತವೈಭವ’ ಸಿನಿಮಾಗೆ 100 ದಿನಗಳ ಕಾಲ್ ಶೀಟ್​ಗಳಲ್ಲಿ ಚಿತ್ರೀಕರಣ ಮುಗಿಸಲಾಗಿದೆ. ಹೊಸ ನಟ ದುಷ್ಯಂತ್ ಮತ್ತು ಆಶಿಕಾ ರಂಗನಾಥ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಶೂಟಿಂಗ್ ಅನುಭವನ್ನು ಚಿತ್ರತಂಡದವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆದಷ್ಟು ಬೇಗ ‘ಗತವೈಭವ’ ಚಿತ್ರವನ್ನು ಬಿಡುಗಡೆ ಮಾಡಲು ಗುರಿ ಇಟ್ಟುಕೊಳ್ಳಲಾಗಿದೆ.

View this post on Instagram

A post shared by Su Ni (@simplesuni)

ಡೈರೆಕ್ಟರ್ ಸಿಂಪಲ್ ಸುನಿ ಅವರು ಎಲ್ಲ ಬಗೆಯ ಸಿನಿಮಾಗಳನ್ನೂ ಪ್ರಯತ್ನಿಸಿದ್ದಾರೆ. ಕಾಮಿಡಿ, ಸೀರಿಯಸ್, ಹಾರರ್, ಫ್ಯಾಂಟಸಿ ಮಂತಾದ ಪ್ರಕಾರಗಳ ಸಿನಿಮಾವನ್ನು ಅವರು ಮಾಡಿದ್ದಾರೆ. ಈಗ ಅವರು ‘ಗತವೈಭವ’ ಸಿನಿಮಾದಲ್ಲಿ ಲವ್‌ಸ್ಟೋರಿಯನ್ನು ಸೈಂಟಿಫಿಕ್ ಥ್ರಿಲ್ಲರ್ ಶೈಲಿಯಲ್ಲಿ ತೆರೆಗೆ ತರುತ್ತಿದ್ದಾರೆ. ಈ ಚಿತ್ರದ ಮೂಲಕ ನಟ ದುಷ್ಯಂತ್ ಅವರು ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ.

ಇದನ್ನೂ ಓದಿ: ಯುರೋಪ್​ನಲ್ಲಿ ಜಾಲಿ ಡ್ರೈವ್ ಮಾಡಿದ ಆಶಿಕಾ ರಂಗನಾಥ್

‘ಗತವೈಭವ’ ಸಿನಿಮಾಗೆ ಸಿಂಪಲ್ ಸುನಿ ಅವರು ಡೈರೆಕ್ಟರ್ ಮಾತ್ರವಲ್ಲ ನಿರ್ಮಾಪಕನೂ ಹೌದು. ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ಬರೆದಿದ್ದಾರೆ. ವಿಲಿಯಂ ಡೇವಿಡ್ ಛಾಯಾಗ್ರಹಣ ಮಾಡಿದ್ದಾರೆ. ಜೂಡಾ ಸ್ಯಾಂಡಿ ಅವರು ಸಂಗೀತ ನೀಡಿದ್ದಾರೆ. ಹಲವು ಕಡೆಗಳಲ್ಲಿ ಈ ಸಿನಿಮಾಗೆ ಶೂಟಿಂಗ್ ಮಾಡಲಾಗಿದೆ. ಮಂಗಳೂರು, ಕೊಡಗು, ಪೋರ್ಚುಗಲ್ ಮುಂತಾದೆಡೆ ಚಿತ್ರೀಕರಣ ನಡೆದಿದೆ. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ