‘ಚುಟು ಚುಟು’ ಜೋಡಿಯ ‘ಅವತಾರ ಪುರುಷ’; ಸುನಿ-ಪುಷ್ಕರ್​ ಕಟ್ಟಿಕೊಟ್ಟ ಚಿತ್ರದಲ್ಲಿ ಏನೆಲ್ಲ ಇರಲಿದೆ?

Avatar Purusha Movie: ಶರಣ್​ ಎಂದರೆ ಕಾಮಿಡಿಗೆ ಫೇಮಸ್. ನಿರ್ದೇಶಕ ಸಿಂಪಲ್​ ಸುನಿ ಅವರು ತಮ್ಮದೇ ಶೈಲಿಯ ಸಿನಿಮಾಗಳಿಂದ ಗುರುತಿಸಿಕೊಂಡವರು. ಅವರಿಬ್ಬರ ಕಾಂಬಿನೇಷನ್​ನಲ್ಲಿ ‘ಅವತಾರ ಪುರುಷ’ ಮೂಡಿಬಂದಿದ್ದು, ಪುಷ್ಕರ್​ ಮಲ್ಲಿಕಾರ್ಜುನಯ್ಯ ಬಂಡವಾಳ ಹೂಡಿದ್ದಾರೆ.

‘ಚುಟು ಚುಟು’ ಜೋಡಿಯ ‘ಅವತಾರ ಪುರುಷ’; ಸುನಿ-ಪುಷ್ಕರ್​ ಕಟ್ಟಿಕೊಟ್ಟ ಚಿತ್ರದಲ್ಲಿ ಏನೆಲ್ಲ ಇರಲಿದೆ?
ಶರಣ್​, ಆಶಿಕಾ, ಪುಷ್ಕರ್​, ಸುನಿ
Follow us
| Updated By: ಮದನ್​ ಕುಮಾರ್​

Updated on:Nov 22, 2021 | 1:37 PM

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಅವತಾರ ಪುರುಷ’ (Avatar Purusha Movie) ಸಹ ಹೈಪ್​ ಸೃಷ್ಟಿ ಮಾಡಿದೆ. ಸಿಂಪಲ್​ ಸುನಿ (Simple Suni) ನಿರ್ದೇಶನ ಮಾಡಿರುವ ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಪುಷ್ಕರ್​ ಮಲ್ಲಿಕಾರ್ಜುನಯ್ಯ (Pushkar Mallikarjunaiah) ನಿರ್ಮಿಸಿದ್ದಾರೆ. ಆಶಿಕಾ ರಂಗನಾಥ್​ (Ashika Ranganath) ಮತ್ತು ಶರಣ್​ (Sharan) ಜೋಡಿಯಾಗಿ ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದು, ವಿಲಿಯಮ್​ ಡೇವಿಡ್​ ಛಾಯಾಗ್ರಹಣ ಮಾಡಿದ್ದಾರೆ. ತಾಂತ್ರಿಕವಾಗಿ ತುಂಬ ಶ್ರೀಮಂತವಾಗಿ ಮೂಡಿಬಂದಿರುವ ‘ಅವತಾರ ಪುರುಷ’ ಚಿತ್ರ ಡಿ.10ರಂದು ದೇಶಾದ್ಯಂತ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಹತ್ತು ಹಲವು ವಿಶೇಷಗಳಿವೆ. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿರುವ ಚಿತ್ರತಂಡ ಆ ಎಲ್ಲ ವಿಶೇಷತೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

‘ಅವತಾರ ಪುರುಷ’ ಸಿನಿಮಾದಲ್ಲಿ ನಟ ಶರಣ್​ ಅವರು ಜ್ಯೂನಿಯರ್​ ಆರ್ಟಿಸ್ಟ್​ ಪಾತ್ರ ಮಾಡಿದ್ದಾರೆ. ಹಾಗಾಗಿ ಅವರು ಹಲವು ಗೆಟಪ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶೂಟಿಂಗ್​ ನಡೆಯುವಾಗ ರಿಯಲ್​ ಲೈಫ್​ನಲ್ಲಿ ಆಶಿಕಾಗೆ ಶರಣ್​ ಅವರು ನಟನೆ ಹೇಳಿಕೊಟ್ಟಿದ್ದಾರೆ. ಆದರೆ ತೆರೆಮೇಲೆ ಶರಣ್​ಗೆ ನಟನೆ ಹೇಳಿಕೊಡುವ ಹುಡುಗಿಯ ಪಾತ್ರದಲ್ಲಿ ಆಶಿಕಾ ಅಭಿನಯಿಸಿದ್ದಾರೆ. ಈ ಹಿಂದೆ ‘ರ‍್ಯಾಂಬೊ 2’ ಸಿನಿಮಾದಲ್ಲಿ ‘ಚುಟುಚುಟು ಅಂತೈತಿ’ ಎಂದು ಮೋಡಿ ಮಾಡಿದ್ದ ಈ ಜೋಡಿ ಈಗ ‘ಅವತಾರ ಪುರುಷ’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರುತ್ತಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಬಹಳ ಹಿಂದೆಯೇ ‘ಅವತಾರ ಪುರುಷ’ ಸಿನಿಮಾ ತೆರೆಕಾಣಬೇಕಿತ್ತು. ಆದರೆ ಕೊವಿಡ್​ ಕಾರಣದಿಂದ ತಡವಾಗಿದೆ. ಅಂತಿಮವಾಗಿ ಈ ವರ್ಷವೇ ಚಿತ್ರ ರಿಲೀಸ್​ ಆಗುತ್ತಿರುವುದು ಶರಣ್​ ಅವರಿಗೆ ಖುಷಿ ನೀಡಿದೆ. ಕಷ್ಟದ ಸಂದರ್ಭದಲ್ಲಿಯೂ ಈ ಸಿನಿಮಾಗೆ ಯಾವುದೇ ಕೊರತೆ ಆಗದಂತೆ ನೋಡಿಕೊಂಡಿರುವ ನಿರ್ಮಾಪಕರಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಶರಣ್​ ಎಂದರೆ ಕಾಮಿಡಿಗೆ ಫೇಮಸ್. ಇನ್ನು, ಸುನಿ ಅವರು ತಮ್ಮದೇ ಶೈಲಿಯ ಸಿನಿಮಾಗಳಿಂದ ಗುರುತಿಸಿಕೊಂಡವರು. ಈಗ ಅವರಿಬ್ಬರ ಕಾಂಬಿನೇಷನ್​ನಲ್ಲಿ ‘ಅವತಾರ ಪುರುಷ’ ಮೂಡಿಬಂದಿದ್ದು ಪ್ರೇಕ್ಷಕರಿಗೆ ಹೊಸ ಬಗೆಯ ಮನರಂಜನೆ ಸಿಗಲಿದೆ ಎಂಬ ಭರವಸೆ ನೀಡಿದೆ ಚಿತ್ರತಂಡ. ವಿಶೇಷ ಏನೆಂದರೆ, ಈ ಸಿನಿಮಾದಲ್ಲಿ ಸಾಕಷ್ಟು ಜನ ಅನುಭವಿ ಕಲಾವಿದರು ನಟಿಸಿದ್ದಾರೆ. ಶ್ರೀನಗರ ಕಿಟ್ಟಿ ಒಂದು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸಾಯಿ ಕುಮಾರ್​, ಆಶುತೋಷ್​ ರಾಣಾ, ಸುಧಾರಾಣಿ ಮುಂತಾದ ಕಲಾವಿದರ ಬಳಗ ಈ ಚಿತ್ರದಲ್ಲಿದೆ. ಎಲ್ಲರನ್ನೂ ಒಂದೇ ಸಿನಿಮಾದಲ್ಲಿ ಸೇರಿಸಿದ ಖ್ಯಾತ ಪುಷ್ಕರ್​ ಮಲ್ಲಿಕಾರ್ಜುನಯ್ಯ ಅವರಿಗೆ ಸಲ್ಲುತ್ತದೆ. 2 ಪಾರ್ಟ್​ಗಳಲ್ಲಿ ‘ಅವತಾರ ಪುರುಷ’ ಮೂಡಿಬಂದಿದೆ. ಮೊದಲ ಪಾರ್ಟ್ ಬಿಡುಗಡೆಯಾಗಿ 101ನೇ ದಿನಕ್ಕೆ ಎರಡನೇ ಪಾರ್ಟ್​ ಬಿಡುಗಡೆ ಮಾಡುವುದಾಗಿ ಪುಷ್ಕರ್​ ಮಲ್ಲಿಕಾರ್ಜುನಯ್ಯ ಹೇಳಿದ್ದಾರೆ.

ಇದನ್ನೂ ಓದಿ:

‘ಅವತಾರ ಪುರುಷ’ದಲ್ಲಿ ಶರಣ್​ಗೆ ಎಷ್ಟು ಅವತಾರ? ಅವರು ಹೇಳಿದ್ದು ಇಷ್ಟು

Puneeth Rajkumar: ಪುನೀತ್ ಸರ್ ಜೊತೆ ನಟಿಸೋ ಕನಸು ಕನಸಾಗೇ ಉಳಿಯಿತು; ಭಾವುಕರಾದ ನಟಿ ಆಶಿಕಾ ರಂಗನಾಥ್

Published On - 1:15 pm, Mon, 22 November 21

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?