AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಗೆ ತೆರಳಿದ ಆಶಿಕಾ ರಂಗನಾಥ್

ಕನ್ನಡ ಚಿತ್ರರಂಗದ ಪ್ರಮುಖರಿಗೆ ರಶ್ಮಿಕಾ ಮಂದಣ್ಣ ಅವರು ಮದುವೆಯ ಆಹ್ವಾನ ನೀಡಿಲ್ಲ. ಆದರೆ ಆಶಿಕಾ ರಂಗನಾಥ್ ಅವರನ್ನು ಆಹ್ವಾನಿಸಿದ್ದು, ಈಗಾಗಲೇ ಅವರು ಉದಯಪುರಕ್ಕೆ ತೆರಳಿದ್ದಾರೆ. ಫೆಬ್ರವರಿ 26ರಂದು ಅದ್ದೂರಿಯಾಗಿ ಮದುವೆ ನಡೆಯಲಿದೆ. ಕೆಲವೇ ಮಂದಿಗೆ ಆಹ್ವಾನ ನೀಡಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಗೆ ತೆರಳಿದ ಆಶಿಕಾ ರಂಗನಾಥ್
Vijay Deverakonda, Rashmika Mandanna, Ashika Ranganath
ಮದನ್​ ಕುಮಾರ್​
|

Updated on: Feb 24, 2026 | 10:35 PM

Share

ಖ್ಯಾತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಜೊತೆ ಅವರು ಸಪ್ತಪದಿ ತುಳಿಯಲಿದ್ದಾರೆ. ಈ ಹೈ-ಪ್ರೊಫೈಲ್ ಮದುವೆಗೆ ಯಾರೆಲ್ಲ ಬರಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಇದೆ. ಮೂಲಗಳ ಪ್ರಕಾರ ಕೇವಲ 100 ಮಂದಿಗೆ ಮಾತ್ರ ಆಹ್ವಾನ ನೀಡಲಾಗಿದೆ. ವಿಶೇಷ ಏನೆಂದರೆ, ಕನ್ನಡದ ನಟಿ ಆಶಿಕಾ ರಂಗನಾಥ್ (Ashika Ranganath) ಅವರಿಗೆ ಆಹ್ವಾನ ಬಂದಿದೆ. ಈಗಾಗಲೇ ಅವರು ಮದುವೆಗೆ ತೆರಳಿದ್ದಾರೆ. ಫೆಬ್ರವರಿ 26ರಂದು ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮದುವೆ ನಡೆಯಲಿದೆ.

ರಶ್ಮಿಕಾ ಮಂದಣ್ಣ ಅವರು ಚಿತ್ರರಂಗಕ್ಕೆ ಕಾಲಿಟ್ಟ ದಿನಗಳಿಂದಲೂ ಆಶಿಕಾ ರಂಗನಾಥ್ ಜೊತೆ ಸ್ನೇಹ ಹೊಂದಿದ್ದಾರೆ. ಅಲ್ಲದೇ, ಕನ್ನಡದಲ್ಲಿ ಮಿಂಚಿದ ಬಳಿಕ ಈ ಇಬ್ಬರೂ ಕೂಡ ತೆಲುಗು ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಆತ್ಮೀಯ ಗೆಳತಿಯನ್ನು ರಶ್ಮಿಕಾ ಮಂದಣ್ಣ ಅವರು ಆಹ್ವಾನಿಸಿದ್ದಾರೆ. ಹಾಗಾಗಿ ಆಶಿಕಾ ಈಗಾಗಲೇ ಉದಯಪುರ ತಲುಪಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ಇರುವ ಖಾಸಗಿ ಹೋಟೆಲ್​​ನಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ನಡೆಯಲಿದೆ. ಇವರಿಬ್ಬರು ಪ್ಯಾನ್ ಇಂಡಿಯಾ ಸ್ಟಾರ್​ಗಳು. ಹಾಗಾಗಿ ಎಲ್ಲ ಭಾಷೆಯ ಚಿತ್ರರಂಗದಲ್ಲೂ ಅವರಿಗೆ ಸ್ನೇಹಿತರಿದ್ದಾರೆ. ಆದರೂ ಕೂಡ ಆಯ್ದ ಕೆಲವು ವ್ಯಕ್ತಿಗಳಿಗೆ ಮಾತ್ರ ಮದುವೆಯ ಆಮಂತ್ರಣವನ್ನು ನೀಡಲಾಗಿದೆ.

ಕನ್ನಡ ಚಿತ್ರರಂಗದ ಹಲವರು ಜೊತೆ ರಶ್ಮಿಕಾ ಮಂದಣ್ಣ ಕೆಲಸ ಮಾಡಿದ್ದಾರೆ. ‘ಕಿರಿಕ್ ಪಾರ್ಟಿ’, ‘ಅಂಜನಿಪುತ್ರ’, ‘ಚಮಕ್’, ‘ಪೊಗರು’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಹಾಗಾಗಿ ಕನ್ನಡ ಚಿತ್ರರಂಗದ ಯಾವೆಲ್ಲ ಸೆಲೆಬ್ರಿಟಿಗಳಿಗೆ ಅವರು ಆಹ್ವಾನ ನೀಡಬಹುದು ಎಂಬ ಕೌತುಕ ಅಭಿಮಾನಿಗಳಿಗೆ ಇತ್ತು. ಸದ್ಯಕ್ಕೆ ಆಶಿಕಾ ರಂಗನಾಥ್ ಮಾತ್ರ ಈ ಮದುವೆಗೆ ಹಾಜರಿ ಹಾಕುತ್ತಾರೆ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ರಶ್ಮಿಕಾ, ವಿಜಯ್ ಮದುವೆಗೆ 100 ಮಂದಿಗೆ ಆಹ್ವಾನ: ಅತಿಥಿಗಳಿಗೆ ಜಪಾನೀಸ್ ಖಾದ್ಯ

ರಶ್ಮಿಕಾ ಮಂದಣ್ಣ ಮದುವೆಗೆ ಅಲ್ಲು ಅರ್ಜುನ್, ಸುಕುಮಾರ್, ರಣಬೀರ್ ಕಪೂರ್ ಮುಂತಾದವರು ಹಾಜರಿ ಹಾಕುವ ನಿರೀಕ್ಷೆ ಇದೆ. ನಿರ್ದೇಶಕ ತರುಣ್ ಭಾಸ್ಕರ್, ರಾಹುಲ್ ರವೀಂದ್ರನ್, ಇಶಾ ರೆಬ್ಬಾ, ಆಶಿಕಾ ರಂಗನಾಥ್ ಅವರು ಈಗಾಗಲೇ ಉದಯಪುರವನ್ನು ತಲುಪಿದ್ದಾರೆ. ಅವರ ಫೋಟೋಗಳು ವೈರಲ್ ಆಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು
ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು