AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮಯೂರಿ; ಮೊದಲ ದಿನವೇ ಮಗನಿಗೆ ಆಕರ್ಷಕ ಗಿಫ್ಟ್​!

2020ರ ಜೂನ್​ನಲ್ಲಿ ತಮ್ಮ ಬಹುಕಾಲದ ಗೆಳಯ ಅರುಣ್​ ಜೊತೆ ಬೆಂಗಳೂರಿನ ದೇವಸ್ಥಾನದಲ್ಲಿ ಮಯೂರಿ ಹಸೆಮಣೆ ಏರಿದ್ದರು. ಈಗ ಅವರು ತಾಯಿಯಾದ ಸಂಭ್ರಮದಲ್ಲಿದ್ದಾರೆ.

ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮಯೂರಿ; ಮೊದಲ ದಿನವೇ ಮಗನಿಗೆ ಆಕರ್ಷಕ ಗಿಫ್ಟ್​!
ನಟಿ ಮಯೂರಿ
Follow us
ಮದನ್​ ಕುಮಾರ್​
|

Updated on: Mar 16, 2021 | 3:30 PM

ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಖ್ಯಾತಿ ಪಡೆದಿರುವ ನಟಿ ಮಯೂರಿ ಅವರ ಬದುಕಿನಲ್ಲೀಗ ಹೊಸ ಅಧ್ಯಾಯ ಆರಂಭ ಆಗಿದೆ. ಲಾಕ್​ಡೌನ್​ನಲ್ಲಿ ಮದುವೆ ಆಗಿದ್ದ ಅವರು ಈಗ ತಾಯಿ ಆಗಿದ್ದಾರೆ. ಮಾ.15ರಂದು ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಸಂತೋಷದ ಸುದ್ದಿಯನ್ನು ಸೋಶಿಯಲ್​ ಮೀಡಿಯಾ ಮೂಲಕ ಅವರು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

’ಗಂಡುಮಗು ಜನಿಸಿದೆ. ನಮ್ಮ ಮನೆಗೆ ಪುಟಾಣಿ ಆಗಮಿಸಿದ್ದಾನೆ. ಈ ಸುಮಧುರವಾದ ಅನುಭವವನ್ನು ಹೇಳಿಕೊಳ್ಳಲು ಪದಗಳೇ ಇಲ್ಲ. ಇನ್ನೊಂದು ಸುಂದರ ಪಯಣವನ್ನು ಆರಂಭಿಸುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ನನ್ನ ಮೇಲಿರಲಿ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿರುವ ಮಯೂರಿ ಅವರು ಇನ್ನೂ ಮಗುವಿನ ಫೋಟೋ ಬಹಿರಂಗಪಡಿಸಿಲ್ಲ. ಮುದ್ದು ಕಂದನನ್ನು ನೋಡಲು ಅವರ ಫ್ಯಾನ್ಸ್​ ಕಾಯುತ್ತಿದ್ದಾರೆ.

ಸೆಲೆಬ್ರಿಟಿಗಳ ಮಕ್ಕಳು ಸೋಶಿಯಲ್​ ಮೀಡಿಯಾದಲ್ಲಿ ಜನಪ್ರಿಯರಾಗುವುದು ಸಹಜ. ಮಯೂರಿ ಮಗನೂ ಈ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ. ಅಚ್ಚರಿ ಏನೆಂದರೆ, ತಾಯಿಯಾದ ದಿನವೇ ಮಗನಿಗಾಗಿ ಮಯೂರಿ ಒಂದು ಗಿಫ್ಟ್​ ನೀಡಿದ್ದಾರೆ. ಏನದು? ಸೋಶಿಯಲ್​ ಮೀಡಿಯಾ ಅಕೌಂಟ್​! ಹೌದು, ಮಗನಿಗಾಗಿ ಮಯೂರಿ ಒಂದು ಹೊಸ ಇನ್​ಸ್ಟಾಗ್ರಾಮ್​ ಖಾತೆ ತೆರದಿದ್ದಾರೆ. starboii_1111 ಹೆಸರಿನ ಖಾತೆಯಲ್ಲಿ ಮಗನ ಕೈ ಬೆರಳಿನ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ವಿಶೇಷ ಏನೆಂದರೆ, ಈ ಖಾತೆಯನ್ನು ಈಗಾಗಲೇ ಸಾವಿರಾರು ಜನರು ಫಾಲೋ ಮಾಡುತ್ತಿದ್ದಾರೆ.

View this post on Instagram

A post shared by mayuri (@mayurikyatari)

ಕಿರುತೆರೆಯ ‘ಅಶ್ವಿನಿ ನಕ್ಷತ್ರ’ ಸೀರಿಯಲ್​ ಮೂಲಕ ಹೆಚ್ಚು ಖ್ಯಾತಿ ಪಡೆದ ಮಯೂರಿ, ನಂತರ ಸಿನಿಮಾಗೂ ಕಾಲಿಟ್ಟರು. ನಾಗತಿಹಳ್ಳಿ ಚಂದ್ರಶೇಖರ್​ ನಿರ್ದೇಶನದ ‘ಇಷ್ಟಕಾಮ್ಯ’ ಸಿನಿಮಾದಲ್ಲಿ ಗಮನಾರ್ಹ ಪಾತ್ರ ಮಾಡಿದರು. ಇತ್ತೀಚೆಗೆ ಬಿಡುಗಡೆಯಾದ ‘ಪೊಗರು’ ಸಿನಿಮಾದಲ್ಲಿ ಧ್ರುವ ಸರ್ಜಾಗೆ ತಂಗಿಯಾಗಿ ಅವರು ನಟಿಸಿದ್ದಾರೆ. 2020ರ ಜೂನ್​ನಲ್ಲಿ ತಮ್ಮ ಬಹುಕಾಲದ ಗೆಳಯ ಅರುಣ್​ ಜೊತೆ ಬೆಂಗಳೂರಿನ ದೇವಸ್ಥಾನದಲ್ಲಿ ಮಯೂರಿ ಹಸೆಮಣೆ ಏರಿದ್ದರು. ಈಗ ಅವರು ತಾಯಿಯಾದ ಸಂಭ್ರಮದಲ್ಲಿದ್ದಾರೆ. ಹಲವು ಸಿನಿಮಾ ಆಫರ್​ಗಳು ಅವರ ಕೈಯಲ್ಲಿವೆ.

ಇದನ್ನೂ ಓದಿ: ತುಂಬು ಗರ್ಭಿಣಿ ನಟಿ ಮಯೂರಿಗೆ ಹಲ್ವಾ ಜಜರತ್ ತಿನ್ನಿಸಿದ ಹಾಸ್ಯ ನಟ ಸಿಹಿ ಕಹಿ ಚಂದ್ರು..!

ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ