AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮಯೂರಿ; ಮೊದಲ ದಿನವೇ ಮಗನಿಗೆ ಆಕರ್ಷಕ ಗಿಫ್ಟ್​!

2020ರ ಜೂನ್​ನಲ್ಲಿ ತಮ್ಮ ಬಹುಕಾಲದ ಗೆಳಯ ಅರುಣ್​ ಜೊತೆ ಬೆಂಗಳೂರಿನ ದೇವಸ್ಥಾನದಲ್ಲಿ ಮಯೂರಿ ಹಸೆಮಣೆ ಏರಿದ್ದರು. ಈಗ ಅವರು ತಾಯಿಯಾದ ಸಂಭ್ರಮದಲ್ಲಿದ್ದಾರೆ.

ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮಯೂರಿ; ಮೊದಲ ದಿನವೇ ಮಗನಿಗೆ ಆಕರ್ಷಕ ಗಿಫ್ಟ್​!
ನಟಿ ಮಯೂರಿ
ಮದನ್​ ಕುಮಾರ್​
|

Updated on: Mar 16, 2021 | 3:30 PM

Share

ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಖ್ಯಾತಿ ಪಡೆದಿರುವ ನಟಿ ಮಯೂರಿ ಅವರ ಬದುಕಿನಲ್ಲೀಗ ಹೊಸ ಅಧ್ಯಾಯ ಆರಂಭ ಆಗಿದೆ. ಲಾಕ್​ಡೌನ್​ನಲ್ಲಿ ಮದುವೆ ಆಗಿದ್ದ ಅವರು ಈಗ ತಾಯಿ ಆಗಿದ್ದಾರೆ. ಮಾ.15ರಂದು ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಸಂತೋಷದ ಸುದ್ದಿಯನ್ನು ಸೋಶಿಯಲ್​ ಮೀಡಿಯಾ ಮೂಲಕ ಅವರು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

’ಗಂಡುಮಗು ಜನಿಸಿದೆ. ನಮ್ಮ ಮನೆಗೆ ಪುಟಾಣಿ ಆಗಮಿಸಿದ್ದಾನೆ. ಈ ಸುಮಧುರವಾದ ಅನುಭವವನ್ನು ಹೇಳಿಕೊಳ್ಳಲು ಪದಗಳೇ ಇಲ್ಲ. ಇನ್ನೊಂದು ಸುಂದರ ಪಯಣವನ್ನು ಆರಂಭಿಸುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ನನ್ನ ಮೇಲಿರಲಿ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿರುವ ಮಯೂರಿ ಅವರು ಇನ್ನೂ ಮಗುವಿನ ಫೋಟೋ ಬಹಿರಂಗಪಡಿಸಿಲ್ಲ. ಮುದ್ದು ಕಂದನನ್ನು ನೋಡಲು ಅವರ ಫ್ಯಾನ್ಸ್​ ಕಾಯುತ್ತಿದ್ದಾರೆ.

ಸೆಲೆಬ್ರಿಟಿಗಳ ಮಕ್ಕಳು ಸೋಶಿಯಲ್​ ಮೀಡಿಯಾದಲ್ಲಿ ಜನಪ್ರಿಯರಾಗುವುದು ಸಹಜ. ಮಯೂರಿ ಮಗನೂ ಈ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ. ಅಚ್ಚರಿ ಏನೆಂದರೆ, ತಾಯಿಯಾದ ದಿನವೇ ಮಗನಿಗಾಗಿ ಮಯೂರಿ ಒಂದು ಗಿಫ್ಟ್​ ನೀಡಿದ್ದಾರೆ. ಏನದು? ಸೋಶಿಯಲ್​ ಮೀಡಿಯಾ ಅಕೌಂಟ್​! ಹೌದು, ಮಗನಿಗಾಗಿ ಮಯೂರಿ ಒಂದು ಹೊಸ ಇನ್​ಸ್ಟಾಗ್ರಾಮ್​ ಖಾತೆ ತೆರದಿದ್ದಾರೆ. starboii_1111 ಹೆಸರಿನ ಖಾತೆಯಲ್ಲಿ ಮಗನ ಕೈ ಬೆರಳಿನ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ವಿಶೇಷ ಏನೆಂದರೆ, ಈ ಖಾತೆಯನ್ನು ಈಗಾಗಲೇ ಸಾವಿರಾರು ಜನರು ಫಾಲೋ ಮಾಡುತ್ತಿದ್ದಾರೆ.

View this post on Instagram

A post shared by mayuri (@mayurikyatari)

ಕಿರುತೆರೆಯ ‘ಅಶ್ವಿನಿ ನಕ್ಷತ್ರ’ ಸೀರಿಯಲ್​ ಮೂಲಕ ಹೆಚ್ಚು ಖ್ಯಾತಿ ಪಡೆದ ಮಯೂರಿ, ನಂತರ ಸಿನಿಮಾಗೂ ಕಾಲಿಟ್ಟರು. ನಾಗತಿಹಳ್ಳಿ ಚಂದ್ರಶೇಖರ್​ ನಿರ್ದೇಶನದ ‘ಇಷ್ಟಕಾಮ್ಯ’ ಸಿನಿಮಾದಲ್ಲಿ ಗಮನಾರ್ಹ ಪಾತ್ರ ಮಾಡಿದರು. ಇತ್ತೀಚೆಗೆ ಬಿಡುಗಡೆಯಾದ ‘ಪೊಗರು’ ಸಿನಿಮಾದಲ್ಲಿ ಧ್ರುವ ಸರ್ಜಾಗೆ ತಂಗಿಯಾಗಿ ಅವರು ನಟಿಸಿದ್ದಾರೆ. 2020ರ ಜೂನ್​ನಲ್ಲಿ ತಮ್ಮ ಬಹುಕಾಲದ ಗೆಳಯ ಅರುಣ್​ ಜೊತೆ ಬೆಂಗಳೂರಿನ ದೇವಸ್ಥಾನದಲ್ಲಿ ಮಯೂರಿ ಹಸೆಮಣೆ ಏರಿದ್ದರು. ಈಗ ಅವರು ತಾಯಿಯಾದ ಸಂಭ್ರಮದಲ್ಲಿದ್ದಾರೆ. ಹಲವು ಸಿನಿಮಾ ಆಫರ್​ಗಳು ಅವರ ಕೈಯಲ್ಲಿವೆ.

ಇದನ್ನೂ ಓದಿ: ತುಂಬು ಗರ್ಭಿಣಿ ನಟಿ ಮಯೂರಿಗೆ ಹಲ್ವಾ ಜಜರತ್ ತಿನ್ನಿಸಿದ ಹಾಸ್ಯ ನಟ ಸಿಹಿ ಕಹಿ ಚಂದ್ರು..!

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ