AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮಯೂರಿ; ಮೊದಲ ದಿನವೇ ಮಗನಿಗೆ ಆಕರ್ಷಕ ಗಿಫ್ಟ್​!

2020ರ ಜೂನ್​ನಲ್ಲಿ ತಮ್ಮ ಬಹುಕಾಲದ ಗೆಳಯ ಅರುಣ್​ ಜೊತೆ ಬೆಂಗಳೂರಿನ ದೇವಸ್ಥಾನದಲ್ಲಿ ಮಯೂರಿ ಹಸೆಮಣೆ ಏರಿದ್ದರು. ಈಗ ಅವರು ತಾಯಿಯಾದ ಸಂಭ್ರಮದಲ್ಲಿದ್ದಾರೆ.

ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮಯೂರಿ; ಮೊದಲ ದಿನವೇ ಮಗನಿಗೆ ಆಕರ್ಷಕ ಗಿಫ್ಟ್​!
ನಟಿ ಮಯೂರಿ
ಮದನ್​ ಕುಮಾರ್​
|

Updated on: Mar 16, 2021 | 3:30 PM

Share

ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಖ್ಯಾತಿ ಪಡೆದಿರುವ ನಟಿ ಮಯೂರಿ ಅವರ ಬದುಕಿನಲ್ಲೀಗ ಹೊಸ ಅಧ್ಯಾಯ ಆರಂಭ ಆಗಿದೆ. ಲಾಕ್​ಡೌನ್​ನಲ್ಲಿ ಮದುವೆ ಆಗಿದ್ದ ಅವರು ಈಗ ತಾಯಿ ಆಗಿದ್ದಾರೆ. ಮಾ.15ರಂದು ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಸಂತೋಷದ ಸುದ್ದಿಯನ್ನು ಸೋಶಿಯಲ್​ ಮೀಡಿಯಾ ಮೂಲಕ ಅವರು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

’ಗಂಡುಮಗು ಜನಿಸಿದೆ. ನಮ್ಮ ಮನೆಗೆ ಪುಟಾಣಿ ಆಗಮಿಸಿದ್ದಾನೆ. ಈ ಸುಮಧುರವಾದ ಅನುಭವವನ್ನು ಹೇಳಿಕೊಳ್ಳಲು ಪದಗಳೇ ಇಲ್ಲ. ಇನ್ನೊಂದು ಸುಂದರ ಪಯಣವನ್ನು ಆರಂಭಿಸುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ನನ್ನ ಮೇಲಿರಲಿ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿರುವ ಮಯೂರಿ ಅವರು ಇನ್ನೂ ಮಗುವಿನ ಫೋಟೋ ಬಹಿರಂಗಪಡಿಸಿಲ್ಲ. ಮುದ್ದು ಕಂದನನ್ನು ನೋಡಲು ಅವರ ಫ್ಯಾನ್ಸ್​ ಕಾಯುತ್ತಿದ್ದಾರೆ.

ಸೆಲೆಬ್ರಿಟಿಗಳ ಮಕ್ಕಳು ಸೋಶಿಯಲ್​ ಮೀಡಿಯಾದಲ್ಲಿ ಜನಪ್ರಿಯರಾಗುವುದು ಸಹಜ. ಮಯೂರಿ ಮಗನೂ ಈ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ. ಅಚ್ಚರಿ ಏನೆಂದರೆ, ತಾಯಿಯಾದ ದಿನವೇ ಮಗನಿಗಾಗಿ ಮಯೂರಿ ಒಂದು ಗಿಫ್ಟ್​ ನೀಡಿದ್ದಾರೆ. ಏನದು? ಸೋಶಿಯಲ್​ ಮೀಡಿಯಾ ಅಕೌಂಟ್​! ಹೌದು, ಮಗನಿಗಾಗಿ ಮಯೂರಿ ಒಂದು ಹೊಸ ಇನ್​ಸ್ಟಾಗ್ರಾಮ್​ ಖಾತೆ ತೆರದಿದ್ದಾರೆ. starboii_1111 ಹೆಸರಿನ ಖಾತೆಯಲ್ಲಿ ಮಗನ ಕೈ ಬೆರಳಿನ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ವಿಶೇಷ ಏನೆಂದರೆ, ಈ ಖಾತೆಯನ್ನು ಈಗಾಗಲೇ ಸಾವಿರಾರು ಜನರು ಫಾಲೋ ಮಾಡುತ್ತಿದ್ದಾರೆ.

View this post on Instagram

A post shared by mayuri (@mayurikyatari)

ಕಿರುತೆರೆಯ ‘ಅಶ್ವಿನಿ ನಕ್ಷತ್ರ’ ಸೀರಿಯಲ್​ ಮೂಲಕ ಹೆಚ್ಚು ಖ್ಯಾತಿ ಪಡೆದ ಮಯೂರಿ, ನಂತರ ಸಿನಿಮಾಗೂ ಕಾಲಿಟ್ಟರು. ನಾಗತಿಹಳ್ಳಿ ಚಂದ್ರಶೇಖರ್​ ನಿರ್ದೇಶನದ ‘ಇಷ್ಟಕಾಮ್ಯ’ ಸಿನಿಮಾದಲ್ಲಿ ಗಮನಾರ್ಹ ಪಾತ್ರ ಮಾಡಿದರು. ಇತ್ತೀಚೆಗೆ ಬಿಡುಗಡೆಯಾದ ‘ಪೊಗರು’ ಸಿನಿಮಾದಲ್ಲಿ ಧ್ರುವ ಸರ್ಜಾಗೆ ತಂಗಿಯಾಗಿ ಅವರು ನಟಿಸಿದ್ದಾರೆ. 2020ರ ಜೂನ್​ನಲ್ಲಿ ತಮ್ಮ ಬಹುಕಾಲದ ಗೆಳಯ ಅರುಣ್​ ಜೊತೆ ಬೆಂಗಳೂರಿನ ದೇವಸ್ಥಾನದಲ್ಲಿ ಮಯೂರಿ ಹಸೆಮಣೆ ಏರಿದ್ದರು. ಈಗ ಅವರು ತಾಯಿಯಾದ ಸಂಭ್ರಮದಲ್ಲಿದ್ದಾರೆ. ಹಲವು ಸಿನಿಮಾ ಆಫರ್​ಗಳು ಅವರ ಕೈಯಲ್ಲಿವೆ.

ಇದನ್ನೂ ಓದಿ: ತುಂಬು ಗರ್ಭಿಣಿ ನಟಿ ಮಯೂರಿಗೆ ಹಲ್ವಾ ಜಜರತ್ ತಿನ್ನಿಸಿದ ಹಾಸ್ಯ ನಟ ಸಿಹಿ ಕಹಿ ಚಂದ್ರು..!

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​