Ashwini Puneeth: ನಿಂತಿಲ್ಲ ಅಶ್ವಿನಿ, ಶಿವಣ್ಣನ​ ಕಣ್ಣೀರು; ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅತ್ತ ಪುನೀತ್​ ಕುಟುಂಬ

Puneeth Namana: ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್​​ವುಡ್​​ನ ನೂರಾರು ಕಲಾವಿದರು ಆಗಮಿಸಿದ್ದಾರೆ. ವಿಶಾಲ್​ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ.

Ashwini Puneeth: ನಿಂತಿಲ್ಲ ಅಶ್ವಿನಿ, ಶಿವಣ್ಣನ​ ಕಣ್ಣೀರು; ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅತ್ತ ಪುನೀತ್​ ಕುಟುಂಬ
Follow us
| Updated By: ರಾಜೇಶ್ ದುಗ್ಗುಮನೆ

Updated on:Nov 16, 2021 | 4:34 PM

ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ. ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ. ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್​​ವುಡ್​​ನ ನೂರಾರು ಕಲಾವಿದರು ಆಗಮಿಸಿದ್ದಾರೆ. ವಿಶಾಲ್​ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಹಾಗೂ ಶಿವರಾಜ್​ಕುಮಾರ್​ ಅತ್ತಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳ ಕರುಳು ಕಿವುಚಿದಂತಾಗಿದೆ.

2000 ಜನರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಸಿಎಂ, ಮಾಜಿ ಸಿಎಂ ಹಾಗೂ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.  ಬೆಂಗಳೂರಿನ ಅರಮನೆ‌ ಮೈದಾನದ ಗಾಯತ್ರಿ ವಿಹಾರ್​​ನಲ್ಲಿ ‘ಪುನೀತ ನಮನ‌’ ಕಾರ್ಯಕ್ರಮ ನಡೆಯುತ್ತಿದೆ.

ಪುನೀತ ನಮನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಿನಿಮಾ ಶೂಟಿಂಗ್​​ಗೆ ಬ್ರೇಕ್ ಹಾಕಲಾಗಿದೆ. ಚಿತ್ರಪ್ರದರ್ಶನ ಹೊರತುಪಡಿಸಿ ಯಾವ ಸಿನಿಮಾ ಕೆಲಸಗಳು ನಡೆಯುವುದಿಲ್ಲ. ಕಾರ್ಯಕ್ರಮಕ್ಕೆ‌ ಎಲ್ಲರೂ ಬರಲಿ ಅನ್ನೋ ಉದ್ದೇಶದಿಂದ‌ ಈ ನಿರ್ಧಾರ ಮಾಡಲಾಗಿದೆ.  ಪುನೀತ ನಮನದಲ್ಲಿ ಮನರಂಜನೆಗೆ ಯಾವುದೇ ಅವಕಾಶ‌‌ ಇಲ್ಲದೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಮಧ್ಯಾಹ್ನ ಮೂರು ಗಂಟೆಗೆ ಕಾರ್ಯಕ್ರಮ ಆರಂಭಗೊಂಡು ಸಂಜೆ ಆರು ಗಂಟೆಗೆ ಕಾರ್ಯಕ್ರಮ ಮುಕ್ತಾಯವಾಗಲಿದೆ.

ಇದನ್ನೂ ಓದಿ: ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​

 Khushbu: ಬೆಂಗಳೂರಿಗೆ ಆಗಮಿಸಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೆ ಸಾಂತ್ವನ ಹೇಳಿದ ಖುಷ್ಬೂ

Published On - 4:18 pm, Tue, 16 November 21

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ