AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashwini Puneeth: ನಿಂತಿಲ್ಲ ಅಶ್ವಿನಿ, ಶಿವಣ್ಣನ​ ಕಣ್ಣೀರು; ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅತ್ತ ಪುನೀತ್​ ಕುಟುಂಬ

Puneeth Namana: ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್​​ವುಡ್​​ನ ನೂರಾರು ಕಲಾವಿದರು ಆಗಮಿಸಿದ್ದಾರೆ. ವಿಶಾಲ್​ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ.

Ashwini Puneeth: ನಿಂತಿಲ್ಲ ಅಶ್ವಿನಿ, ಶಿವಣ್ಣನ​ ಕಣ್ಣೀರು; ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅತ್ತ ಪುನೀತ್​ ಕುಟುಂಬ
TV9 Web
| Edited By: |

Updated on:Nov 16, 2021 | 4:34 PM

Share

ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ. ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ. ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್​​ವುಡ್​​ನ ನೂರಾರು ಕಲಾವಿದರು ಆಗಮಿಸಿದ್ದಾರೆ. ವಿಶಾಲ್​ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಹಾಗೂ ಶಿವರಾಜ್​ಕುಮಾರ್​ ಅತ್ತಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳ ಕರುಳು ಕಿವುಚಿದಂತಾಗಿದೆ.

2000 ಜನರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಸಿಎಂ, ಮಾಜಿ ಸಿಎಂ ಹಾಗೂ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.  ಬೆಂಗಳೂರಿನ ಅರಮನೆ‌ ಮೈದಾನದ ಗಾಯತ್ರಿ ವಿಹಾರ್​​ನಲ್ಲಿ ‘ಪುನೀತ ನಮನ‌’ ಕಾರ್ಯಕ್ರಮ ನಡೆಯುತ್ತಿದೆ.

ಪುನೀತ ನಮನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಿನಿಮಾ ಶೂಟಿಂಗ್​​ಗೆ ಬ್ರೇಕ್ ಹಾಕಲಾಗಿದೆ. ಚಿತ್ರಪ್ರದರ್ಶನ ಹೊರತುಪಡಿಸಿ ಯಾವ ಸಿನಿಮಾ ಕೆಲಸಗಳು ನಡೆಯುವುದಿಲ್ಲ. ಕಾರ್ಯಕ್ರಮಕ್ಕೆ‌ ಎಲ್ಲರೂ ಬರಲಿ ಅನ್ನೋ ಉದ್ದೇಶದಿಂದ‌ ಈ ನಿರ್ಧಾರ ಮಾಡಲಾಗಿದೆ.  ಪುನೀತ ನಮನದಲ್ಲಿ ಮನರಂಜನೆಗೆ ಯಾವುದೇ ಅವಕಾಶ‌‌ ಇಲ್ಲದೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಮಧ್ಯಾಹ್ನ ಮೂರು ಗಂಟೆಗೆ ಕಾರ್ಯಕ್ರಮ ಆರಂಭಗೊಂಡು ಸಂಜೆ ಆರು ಗಂಟೆಗೆ ಕಾರ್ಯಕ್ರಮ ಮುಕ್ತಾಯವಾಗಲಿದೆ.

ಇದನ್ನೂ ಓದಿ: ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​

 Khushbu: ಬೆಂಗಳೂರಿಗೆ ಆಗಮಿಸಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೆ ಸಾಂತ್ವನ ಹೇಳಿದ ಖುಷ್ಬೂ

Published On - 4:18 pm, Tue, 16 November 21

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ