AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashwini Puneeth: ನಿಂತಿಲ್ಲ ಅಶ್ವಿನಿ, ಶಿವಣ್ಣನ​ ಕಣ್ಣೀರು; ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅತ್ತ ಪುನೀತ್​ ಕುಟುಂಬ

Puneeth Namana: ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್​​ವುಡ್​​ನ ನೂರಾರು ಕಲಾವಿದರು ಆಗಮಿಸಿದ್ದಾರೆ. ವಿಶಾಲ್​ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ.

Ashwini Puneeth: ನಿಂತಿಲ್ಲ ಅಶ್ವಿನಿ, ಶಿವಣ್ಣನ​ ಕಣ್ಣೀರು; ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅತ್ತ ಪುನೀತ್​ ಕುಟುಂಬ
TV9 Web
| Edited By: |

Updated on:Nov 16, 2021 | 4:34 PM

Share

ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ. ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ. ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್​​ವುಡ್​​ನ ನೂರಾರು ಕಲಾವಿದರು ಆಗಮಿಸಿದ್ದಾರೆ. ವಿಶಾಲ್​ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಹಾಗೂ ಶಿವರಾಜ್​ಕುಮಾರ್​ ಅತ್ತಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳ ಕರುಳು ಕಿವುಚಿದಂತಾಗಿದೆ.

2000 ಜನರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಸಿಎಂ, ಮಾಜಿ ಸಿಎಂ ಹಾಗೂ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.  ಬೆಂಗಳೂರಿನ ಅರಮನೆ‌ ಮೈದಾನದ ಗಾಯತ್ರಿ ವಿಹಾರ್​​ನಲ್ಲಿ ‘ಪುನೀತ ನಮನ‌’ ಕಾರ್ಯಕ್ರಮ ನಡೆಯುತ್ತಿದೆ.

ಪುನೀತ ನಮನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಿನಿಮಾ ಶೂಟಿಂಗ್​​ಗೆ ಬ್ರೇಕ್ ಹಾಕಲಾಗಿದೆ. ಚಿತ್ರಪ್ರದರ್ಶನ ಹೊರತುಪಡಿಸಿ ಯಾವ ಸಿನಿಮಾ ಕೆಲಸಗಳು ನಡೆಯುವುದಿಲ್ಲ. ಕಾರ್ಯಕ್ರಮಕ್ಕೆ‌ ಎಲ್ಲರೂ ಬರಲಿ ಅನ್ನೋ ಉದ್ದೇಶದಿಂದ‌ ಈ ನಿರ್ಧಾರ ಮಾಡಲಾಗಿದೆ.  ಪುನೀತ ನಮನದಲ್ಲಿ ಮನರಂಜನೆಗೆ ಯಾವುದೇ ಅವಕಾಶ‌‌ ಇಲ್ಲದೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಮಧ್ಯಾಹ್ನ ಮೂರು ಗಂಟೆಗೆ ಕಾರ್ಯಕ್ರಮ ಆರಂಭಗೊಂಡು ಸಂಜೆ ಆರು ಗಂಟೆಗೆ ಕಾರ್ಯಕ್ರಮ ಮುಕ್ತಾಯವಾಗಲಿದೆ.

ಇದನ್ನೂ ಓದಿ: ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​

 Khushbu: ಬೆಂಗಳೂರಿಗೆ ಆಗಮಿಸಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೆ ಸಾಂತ್ವನ ಹೇಳಿದ ಖುಷ್ಬೂ

Published On - 4:18 pm, Tue, 16 November 21

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ