AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಪೋಸ್ಟರ್ ಮೂಲಕ ‘ಗಂಧದ ಗುಡಿ’ ರಿಲೀಸ್ ದಿನಾಂಕ ಘೋಷಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್

ಪುನೀತ್​ ರಾಜ್​ಕುಮಾರ್ ನಿಧನ ಹೊಂದಿದ ದಿನಾಂಕಕ್ಕಿಂತ ಒಂದು ದಿನ ಮೊದಲು ಈ ಸಾಕ್ಷ್ಯಚಿತ್ರ ರಿಲೀಸ್​ ಆಗುತ್ತಿದೆ. ಇದು ಥಿಯೇಟರ್​​ನಲ್ಲಿ ರಿಲೀಸ್ ಆಗಲಿರುವ ಪುನೀತ್ ಅವರ ಕೊನೆಯ ಚಿತ್ರ ಆಗಲಿದೆ.

ಹೊಸ ಪೋಸ್ಟರ್ ಮೂಲಕ ‘ಗಂಧದ ಗುಡಿ’ ರಿಲೀಸ್ ದಿನಾಂಕ ಘೋಷಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್
ಗಂಧದ ಗುಡಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jul 15, 2022 | 8:38 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar) ಅವರು ರಾಜ್ಯದ ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿಗಳ ಕುರಿತ ಸಾಕ್ಷ್ಯಚಿತ್ರದ ನಿರ್ಮಾಣದಲ್ಲಿ ಅಪಾರ ಆಸಕ್ತಿ ತೋರಿದ್ದರು. ಅವರು ‘ಗಂಧದಗುಡಿ’ (Gandhadagudi) ಹೆಸರಿನ ಡಾಕ್ಯುಮೆಂಟರಿಯನ್ನು ನಿರ್ಮಾಣ ಮಾಡಿದ್ದರು. ಈ ಸಾಕ್ಷ್ಯ ಚಿತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಈಗ ಈ ಡಾಕ್ಯುಮೆಂಟರಿ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಪುನೀತ್ ನಿಧನ ಹೊಂದಿದ ಒಂದು ದಿನಾಂಕಕ್ಕಿಂತ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಈ ಡಾಕ್ಯುಮೆಂಟರಿ ತೆರೆಗೆ ಅಪ್ಪಳಿಸಲಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು, ‘ಅಪ್ಪು ಅವರ ಕೊನೆಯ ಚಿತ್ರ. ಅವರು ಅವರಾಗಿಯೇ ಕಾಣಿಸಿಕೊಂಡಿರುವ ವಿಶಿಷ್ಟ ಕಥನ. ಕರ್ನಾಟಕದ ಅದ್ಭುತ ಜಗತ್ತನ್ನು ಅನ್ವೇಷಿಸುವ ಪಯಣ. ಅವರಿಗೆ ಅಪಾರ ಪ್ರೀತಿಯನ್ನು ಕೊಟ್ಟ ನಾಡಿಗೆ ಅವರ ಪ್ರೀತಿಯ ಕಾಣಿಕೆ’ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್​​ಗೆ ಫ್ಯಾನ್ಸ್ ಭಾವುಕರಾಗಿ ಕಮೆಂಟ್ ಹಾಕುತ್ತಿದ್ದಾರೆ.

ಇದನ್ನೂ ಓದಿ
Image
‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್​ ಆಫ್​ ಡೇಂಜರ್​’; ಧೀರೇನ್ ರಾಮ್​ಕುಮಾರ್
Image
Kishore Pathikonda: ‘ಜೇಮ್ಸ್​’ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
Image
ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್​ರಾಜ್​ಕುಮಾರ್; ಇಲ್ಲಿದೆ ವಿಡಿಯೋ
Image
ಪುನೀತ್​ ನಟನೆಯ ‘ಜೇಮ್ಸ್’ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ರಿಪೋರ್ಟ್​

ಪುನೀತ್ ರಾಜ್​ಕುಮಾರ್ ಅತಿಥಿ ಪಾತ್ರ ಮಾಡಿದ ‘ಲಕ್ಕಿ ಮ್ಯಾನ್​’ ಸಿನಿಮಾ ಆಗಸ್ಟ್ ತಿಂಗಳಲ್ಲಿ ತೆರೆಗೆ ಬರಲಿದೆ. ಹೀಗಾಗಿ ಅವರ ಕೊನೆಯ ಚಿತ್ರ ಎಂದರೆ ‘ಗಂಧದ ಗುಡಿ’. ಪುನೀತ್​ ರಾಜ್​ಕುಮಾರ್ ನಿಧನ ಹೊಂದಿದ ದಿನಾಂಕಕ್ಕಿಂತ ಒಂದು ದಿನ ಮೊದಲು ಈ ಸಾಕ್ಷ್ಯಚಿತ್ರ ರಿಲೀಸ್​ ಆಗುತ್ತಿದೆ. ಇದು ಥಿಯೇಟರ್​​ನಲ್ಲಿ ರಿಲೀಸ್ ಆಗಲಿರುವ ಪುನೀತ್ ಅವರ ಕೊನೆಯ ಚಿತ್ರ ಆಗಲಿದೆ. ಈ ಕಾರಣಕ್ಕೆ ಫ್ಯಾನ್ಸ್ ಭಾವನಾತ್ಮಕವಾಗಿ ಕನೆಕ್ಟ್ ಆಗುತ್ತಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಟ್ವಿಟರ್ ಖಾತೆಯಿಂದ ಬ್ಲೂಟಿಕ್ ಮಾಯ; ಕಾರಣ ಏನು?

ಪುನೀತ್​ ರಾಜ್​ಕುಮಾರ್​ ಅವರ ‘ಪಿಆರ್​ಕೆ ಸ್ಟುಡಿಯೋಸ್​’ ಮೂಲಕ ‘ಗಂಧದಗುಡಿ’ ನಿರ್ಮಾಣ ಆಗಿದೆ. ಈ ಡಾಕ್ಯುಮೆಂಟರಿಯ ಟೈಟಲ್​ಅನ್ನು ನವೆಂಬರ್ 2021ಕ್ಕೆ ರಿಲೀಸ್ ಮಾಡಲು ಪುನೀತ್ ಅವರು ಚಿಂತನೆ ನಡೆಸಿದ್ದರು. ಆದರೆ, ಅವರು 2021ರ ಅಕ್ಟೋಬರ್ 29ರಂದು ನಿಧನರಾದರು. ಈಗ ಇದನ್ನು ರಿಲೀಸ್ ಮಾಡುವ ಜವಾಬ್ದಾರಿಯನ್ನು ಅಶ್ವಿನಿ ಅವರು ತೆಗೆದುಕೊಂಡಿದ್ದಾರೆ.

Published On - 7:15 pm, Fri, 15 July 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ