AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಪೋಸ್ಟರ್ ಮೂಲಕ ‘ಗಂಧದ ಗುಡಿ’ ರಿಲೀಸ್ ದಿನಾಂಕ ಘೋಷಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್

ಪುನೀತ್​ ರಾಜ್​ಕುಮಾರ್ ನಿಧನ ಹೊಂದಿದ ದಿನಾಂಕಕ್ಕಿಂತ ಒಂದು ದಿನ ಮೊದಲು ಈ ಸಾಕ್ಷ್ಯಚಿತ್ರ ರಿಲೀಸ್​ ಆಗುತ್ತಿದೆ. ಇದು ಥಿಯೇಟರ್​​ನಲ್ಲಿ ರಿಲೀಸ್ ಆಗಲಿರುವ ಪುನೀತ್ ಅವರ ಕೊನೆಯ ಚಿತ್ರ ಆಗಲಿದೆ.

ಹೊಸ ಪೋಸ್ಟರ್ ಮೂಲಕ ‘ಗಂಧದ ಗುಡಿ’ ರಿಲೀಸ್ ದಿನಾಂಕ ಘೋಷಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್
ಗಂಧದ ಗುಡಿ
TV9 Web
| Edited By: |

Updated on:Jul 15, 2022 | 8:38 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar) ಅವರು ರಾಜ್ಯದ ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿಗಳ ಕುರಿತ ಸಾಕ್ಷ್ಯಚಿತ್ರದ ನಿರ್ಮಾಣದಲ್ಲಿ ಅಪಾರ ಆಸಕ್ತಿ ತೋರಿದ್ದರು. ಅವರು ‘ಗಂಧದಗುಡಿ’ (Gandhadagudi) ಹೆಸರಿನ ಡಾಕ್ಯುಮೆಂಟರಿಯನ್ನು ನಿರ್ಮಾಣ ಮಾಡಿದ್ದರು. ಈ ಸಾಕ್ಷ್ಯ ಚಿತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಈಗ ಈ ಡಾಕ್ಯುಮೆಂಟರಿ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಪುನೀತ್ ನಿಧನ ಹೊಂದಿದ ಒಂದು ದಿನಾಂಕಕ್ಕಿಂತ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 28ರಂದು ಈ ಡಾಕ್ಯುಮೆಂಟರಿ ತೆರೆಗೆ ಅಪ್ಪಳಿಸಲಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು, ‘ಅಪ್ಪು ಅವರ ಕೊನೆಯ ಚಿತ್ರ. ಅವರು ಅವರಾಗಿಯೇ ಕಾಣಿಸಿಕೊಂಡಿರುವ ವಿಶಿಷ್ಟ ಕಥನ. ಕರ್ನಾಟಕದ ಅದ್ಭುತ ಜಗತ್ತನ್ನು ಅನ್ವೇಷಿಸುವ ಪಯಣ. ಅವರಿಗೆ ಅಪಾರ ಪ್ರೀತಿಯನ್ನು ಕೊಟ್ಟ ನಾಡಿಗೆ ಅವರ ಪ್ರೀತಿಯ ಕಾಣಿಕೆ’ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್​​ಗೆ ಫ್ಯಾನ್ಸ್ ಭಾವುಕರಾಗಿ ಕಮೆಂಟ್ ಹಾಕುತ್ತಿದ್ದಾರೆ.

ಇದನ್ನೂ ಓದಿ
Image
‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್​ ಆಫ್​ ಡೇಂಜರ್​’; ಧೀರೇನ್ ರಾಮ್​ಕುಮಾರ್
Image
Kishore Pathikonda: ‘ಜೇಮ್ಸ್​’ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
Image
ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್​ರಾಜ್​ಕುಮಾರ್; ಇಲ್ಲಿದೆ ವಿಡಿಯೋ
Image
ಪುನೀತ್​ ನಟನೆಯ ‘ಜೇಮ್ಸ್’ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ರಿಪೋರ್ಟ್​

ಪುನೀತ್ ರಾಜ್​ಕುಮಾರ್ ಅತಿಥಿ ಪಾತ್ರ ಮಾಡಿದ ‘ಲಕ್ಕಿ ಮ್ಯಾನ್​’ ಸಿನಿಮಾ ಆಗಸ್ಟ್ ತಿಂಗಳಲ್ಲಿ ತೆರೆಗೆ ಬರಲಿದೆ. ಹೀಗಾಗಿ ಅವರ ಕೊನೆಯ ಚಿತ್ರ ಎಂದರೆ ‘ಗಂಧದ ಗುಡಿ’. ಪುನೀತ್​ ರಾಜ್​ಕುಮಾರ್ ನಿಧನ ಹೊಂದಿದ ದಿನಾಂಕಕ್ಕಿಂತ ಒಂದು ದಿನ ಮೊದಲು ಈ ಸಾಕ್ಷ್ಯಚಿತ್ರ ರಿಲೀಸ್​ ಆಗುತ್ತಿದೆ. ಇದು ಥಿಯೇಟರ್​​ನಲ್ಲಿ ರಿಲೀಸ್ ಆಗಲಿರುವ ಪುನೀತ್ ಅವರ ಕೊನೆಯ ಚಿತ್ರ ಆಗಲಿದೆ. ಈ ಕಾರಣಕ್ಕೆ ಫ್ಯಾನ್ಸ್ ಭಾವನಾತ್ಮಕವಾಗಿ ಕನೆಕ್ಟ್ ಆಗುತ್ತಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಟ್ವಿಟರ್ ಖಾತೆಯಿಂದ ಬ್ಲೂಟಿಕ್ ಮಾಯ; ಕಾರಣ ಏನು?

ಪುನೀತ್​ ರಾಜ್​ಕುಮಾರ್​ ಅವರ ‘ಪಿಆರ್​ಕೆ ಸ್ಟುಡಿಯೋಸ್​’ ಮೂಲಕ ‘ಗಂಧದಗುಡಿ’ ನಿರ್ಮಾಣ ಆಗಿದೆ. ಈ ಡಾಕ್ಯುಮೆಂಟರಿಯ ಟೈಟಲ್​ಅನ್ನು ನವೆಂಬರ್ 2021ಕ್ಕೆ ರಿಲೀಸ್ ಮಾಡಲು ಪುನೀತ್ ಅವರು ಚಿಂತನೆ ನಡೆಸಿದ್ದರು. ಆದರೆ, ಅವರು 2021ರ ಅಕ್ಟೋಬರ್ 29ರಂದು ನಿಧನರಾದರು. ಈಗ ಇದನ್ನು ರಿಲೀಸ್ ಮಾಡುವ ಜವಾಬ್ದಾರಿಯನ್ನು ಅಶ್ವಿನಿ ಅವರು ತೆಗೆದುಕೊಂಡಿದ್ದಾರೆ.

Published On - 7:15 pm, Fri, 15 July 22

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ