AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ವತಮ್ಮ, ಪುನೀತ್ ಹೆಸರಲ್ಲಿ 2 ಬಂಗಾರದ ಪದಕ ಘೋಷಿಸಿದ ಅಶ್ವಿನಿ; ‘ದೊಡ್ಮನೆ ಯಾವತ್ತಿಗೂ ದೊಡ್ಮನೆ’ ಎಂದ ಅಭಿಮಾನಿಗಳು

Ashwini Puneeth Rajkumar | University of Mysore: ಪ್ರತಿ ವರ್ಷ ಮೈಸೂರು ವಿಶ್ವವಿದ್ಯಾನಿಲಯ ಘಟಿಕೋತ್ಸವದಲ್ಲಿ ಪಾರ್ವತಮ್ಮ ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಎರಡು ಬಂಗಾರದ ಪದಕ ಪ್ರದಾನ ಮಾಡುವುದಾಗಿ ಅಶ್ವಿನಿ ಪುನೀತ್ ರಾಜ್​ಕುಮಾರ್ ತಿಳಿಸಿದ್ದಾರೆ.

ಪಾರ್ವತಮ್ಮ, ಪುನೀತ್ ಹೆಸರಲ್ಲಿ 2 ಬಂಗಾರದ ಪದಕ ಘೋಷಿಸಿದ ಅಶ್ವಿನಿ; ‘ದೊಡ್ಮನೆ ಯಾವತ್ತಿಗೂ ದೊಡ್ಮನೆ’ ಎಂದ ಅಭಿಮಾನಿಗಳು
ಪಾರ್ವತಮ್ಮ ರಾಜ್​ಕುಮಾರ್, ಪುನೀತ್ (ಎಡ ಚಿತ್ರ), ಮೈಸೂರು ವಿವಿಯಿಂದ ಪುನೀತ್ ಪರ ಗೌರವ ಡಾಕ್ಟರೇಟ್ ಸ್ವೀಕರಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್
TV9 Web
| Edited By: |

Updated on:Mar 22, 2022 | 3:38 PM

Share

ಮೈಸೂರು: ಸಿನಿಮಾ ಕ್ಷೇತ್ರದಲ್ಲಿನ ಸಾಧನೆ ಹಾಗೂ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಅವರಿಗೆ ಮೈಸೂರು ವಿಶ್ವವಿದ್ಯಾನಿಲಯವು ಇಂದು ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ಪುನೀತ್ ಪರವಾಗಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಗೌರವವನ್ನು ಸ್ವೀಕರಿಸಿದ್ದಾರೆ. ಪ್ರತಿ ವರ್ಷ ಮೈಸೂರು ವಿಶ್ವವಿದ್ಯಾನಿಲಯ ಘಟಿಕೋತ್ಸವದಲ್ಲಿ ಎರಡು ಬಂಗಾರದ ಪದಕ ಪ್ರದಾನ ಮಾಡುವುದಾಗಿ ಅಶ್ವಿನಿ (Ashwini Puneeth Rajkumar) ಘೋಷಿಸಿದ್ದಾರೆ. ಪಾರ್ವತಮ್ಮ ರಾಜ್​ಕುಮಾರ್ (Parvathamma Rajkumar) ಹಾಗೂ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಪದಕಗಳನ್ನು ಪ್ರದಾನ ಮಾಡಲಾಗುತ್ತದೆ. ಬ್ಯುಸಿನೆಸ್ ಮ್ಯಾನೇಜ್​ಮೆಂಟ್ ವಿಭಾಗದಲ್ಲಿ ಪಾರ್ವತಮ್ಮ ರಾಜ್​ಕುಮಾರ್ ಬಂಗಾರದ ಪದಕ ಹಾಗೂ ಲಲಿತಕಲೆ ವಿಭಾಗದಲ್ಲಿ ಪುನೀತ್ ಪದಕವನ್ನು ಘೋಷಿಸಲಾಗಿದೆ. ಮುಂದಿನ ವರ್ಷದಿಂದ ಈ ವಿಭಾಗಗಳಲ್ಲಿ ಪದಕ ಪ್ರದಾನ ಮಾಡಲಾಗುತ್ತದೆ. ಅಶ್ವಿನಿಯವರ ನಿರ್ಧಾರಕ್ಕೆ ಅಭಿಮಾನಿಗಳು ತೀವ್ರ ಸಂತಸ ಹಂಚಿಕೊಂಡಿದ್ದು, ‘ದೊಡ್ಮನೆ ಎಂದೆಂದಿಗೂ ದೊಡ್ಮನೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹೆಮ್ಮೆಯಿಂದ ಅನಿಸಿಕೆ ಹಂಚಿಕೊಂಡಿದ್ದಾರೆ.

ಡಾ.ರಾಜ್​ಕುಮಾರ್ 46 ವರ್ಷಗಳ ಹಿಂದೆ ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್​ಗೆ ಭಾಜನರಾಗಿದ್ದರು. ಇದೀಗ ಪುನೀತ್​ಗೆ ಮರಣೋತ್ತರವಾಗಿ ಅದೇ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಲಭಿಸಿದೆ. ಈ ವಿಶೇಷ ಕ್ಷಣಕ್ಕೆ ಡಾ.ರಾಜ್​ಕುಮಾರ್ ಕುಟುಂಬದ ಸದಸ್ಯರು ಸಾಕ್ಷಿಯಾಗಿದ್ದರು. ರಾಘವೇಂದ್ರ ರಾಜ್​ಕುಮಾರ್, ಪತ್ನಿ ಮಂಗಳಾ, ಯುವ ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಅವರ ಸಹೋದರಿ ಲಕ್ಷ್ಮೀ ಗೋವಿಂದರಾಜು, ವಿನಯ್ ರಾಜ್‌ಕುಮಾರ್, ಧನ್ಯಾ ರಾಮ್‌ಕುಮಾರ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಗೌರವ ಡಾಕ್ಟರೇಟ್ ಪಡೆದ ಕುರಿತು ಅಶ್ವಿನಿ ಪುನೀತ್ ರಾಜ್​ಕುಮಾರ್ ಟ್ವೀಟ್ ಮಾಡಿ, ‘‘ಕುಟುಂಬ, ಅಭಿಮಾನಿಗಳು ಹಾಗೂ ಸ್ನೇಹಿತರ ಪರವಾಗಿ ಪುನೀತ್​ ರಾಜ್​ಕುಮಾರ್ ಅವರ ಗೌರವ ಡಾಕ್ಟರೇಟ್ ಸ್ವೀಕರಿಸಲಾಯಿತು. ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪ್ರೀತಿಪೂರ್ವಕ ವಂದನೆಗಳು’’ ಎಂದು ಬರೆದಿದ್ದಾರೆ.

ಅಶ್ವಿನಿ ಪುನೀತ್ ರಾಜ್​ಕುಮಾರ್ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಮೈಸೂರು ವಿಶ್ವವಿದ್ಯಾಲಯದ 102ನೇ ಘಟಿಕೋತ್ಸವದಲ್ಲಿ 28,581 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. 213 ವಿದ್ಯಾರ್ಥಿಗಳಿಗೆ ಪದಕ‌ ಪ್ರದಾನ ಮಾಡಲಾಯಿತು.

ಇದನ್ನೂ ಓದಿ:

ಪುನೀತ್​ಗೆ​ ಮೈಸೂರು ವಿವಿಯಿಂದ ಡಾಕ್ಟರೇಟ್​; ಕಾರ್ಯಕ್ರಮದಲ್ಲಿ ರಾಜ್​ ಕುಟುಂಬ ಭಾಗಿ

ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದ ನಟ ಜಗ್ಗೇಶ್​-ಪರಿಮಳಾ ಮದುವೆಗೆ ಈಗ 38 ವರ್ಷ; ಇಲ್ಲಿದೆ ಅಚ್ಚರಿಯ ಸ್ಟೋರಿ

Published On - 3:38 pm, Tue, 22 March 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್