AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ರಸ್ತೆಗೆ ಅಪ್ಪು ಹೆಸರು; ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಪ್ರತಿಕ್ರಿಯೆ ಏನು?

Ashwini Puneeth: ರಸ್ತೆ ಪಕ್ಕದಲ್ಲಿ ಅಪ್ಪು ಭಾವಚಿತ್ರ ಹಾಕಿ ‘ಡಾ||ಪುನೀತ್ ರಾಜ್​ಕುಮಾರ್ ರಸ್ತೆ’ ಎಂದು ಬರೆದಿರುವ ಗ್ರಾಫಿಕ್ಸ್​ ಫೋಟೋವನ್ನು ಅಶ್ವಿನಿ ಪುನೀತ್ ಅವರು ಪೋಸ್ಟ್ ಮಾಡಿದ್ದಾರೆ.

ಬೆಂಗಳೂರು ರಸ್ತೆಗೆ ಅಪ್ಪು ಹೆಸರು; ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಪ್ರತಿಕ್ರಿಯೆ ಏನು?
ಪುನೀತ್ ರಾಜ್​ಕುಮಾರ್ ರಸ್ತೆ
ರಾಜೇಶ್ ದುಗ್ಗುಮನೆ
|

Updated on:Feb 08, 2023 | 10:01 AM

Share

ಬೆಂಗಳೂರಿನ ಮೈಸೂರು ರಸ್ತೆಯಿಂದ ವೆಗಾಸಿಟಿ ಮಾಲ್ ಜಂಕ್ಷನ್​ವರೆಗಿನ 12 ಕಿ.ಮೀ ರಸ್ತೆಗೆ ಪುನೀತ್ ರಾಜ್​ಕುಮಾರ್ (Puneeth Rajkumar) ಅವರ ಹೆಸರು ಇಡಲಾಗಿದೆ. ಇದು ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ. ಪುನೀತ್ ಕುಟುಂಬ ಕೂಡ ಈ ವಿಚಾರದಲ್ಲಿ ಸಂತಸ ವ್ಯಕ್ತಪಡಿಸಿದೆ. ಚಿತ್ರರಂಗದ ಅನೇಕರು ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ. ಈಗ ಪುನೀತ್​ ರಾಜ್​ಕುಮಾರ್ ಪತ್ನಿ ಅಶ್ವಿನಿ (Ashwini Puneeth) ಅವರು ಕೂಡ ಸರ್ಕಾರಕ್ಕೆ ಕೃತಜ್ಞತೆ ತಿಳಿಸಿದ್ದಾರೆ.

ರಸ್ತೆ ಪಕ್ಕದಲ್ಲಿ ಅಪ್ಪು ಭಾವಚಿತ್ರ ಹಾಕಿ ‘ಡಾ||ಪುನೀತ್ ರಾಜ್​ಕುಮಾರ್ ರಸ್ತೆ’ ಎಂದು ಬರೆದಿರುವ ಗ್ರಾಫಿಕ್ಸ್​ ಫೋಟೋವನ್ನು ಅಶ್ವಿನಿ ಪುನೀತ್ ಅವರು ಪೋಸ್ಟ್ ಮಾಡಿದ್ದಾರೆ. ಜೊತೆಗೆ ‘ಕರ್ನಾಟಕ ಸರ್ಕಾರಕ್ಕೆ ನಮ್ಮ ಹೃತ್ಪೂರ್ವಕ ಕೃತಜ್ಞತೆಗಳು’ ಎಂದು ಅವರು ಹೇಳಿದ್ದಾರೆ. ಇದರ ಕೆಳಭಾಗದಲ್ಲಿ ಅವರು ಪತ್ರ ಒಂದನ್ನು ಬರೆದು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ
Image
Puneeth Rajkumar: ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಪುನೀತ್​ ರಾಜ್​ಕುಮಾರ್​ ಜೀವನದ ವಿವರ: ಫ್ಯಾನ್ಸ್​ಗೆ ಹೆಮ್ಮೆ
Image
Puneeth Rajkumar: ನಟಿ ಆಶಾರಾಣಿ ಸೀರೆ ಮೇಲೆ ಪುನೀತ್​ ಭಾವಚಿತ್ರ; ಇದು ಅಭಿಮಾನದ ಡಿಸೈನ್​
Image
Kantara: ‘ಕಾಂತಾರ’ ಶಿವನ ಪಾತ್ರದಲ್ಲಿ ಪುನೀತ್​; ಹೇಗಿದೆ ನೋಡಿ ಅಭಿಮಾನಿ ಕಲ್ಪನೆಯಲ್ಲಿ ಮೂಡಿದ ಪೋಸ್ಟರ್​
Image
Puneeth Rajkumar: ಪುನೀತ್​ ಮೇಲೆ RSS ಕಾರ್ಯಕರ್ತೆ ಗಂಭೀರ ಆರೋಪ; ಮೌನ ಮುರಿಯಬೇಕಿದೆ ರಿಷಬ್​ ಶೆಟ್ಟಿ

‘ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಯಂಡಹಳ್ಳಿ ಜಂಕ್ಷನ್​ನಿಂದ ವೆಗಾಸಿಟಿ ಮಾಲ್ ಜಂಕ್ಷನ್​ವರೆಗಿನ 12 ಕಿ.ಮೀ. ಹೊರ ವರ್ತುಲ ರಸ್ತೆಯನ್ನು ಅಪ್ಪು ಗೌರವಾರ್ಥ ‘ಡಾ|| ಪುನೀತ್ ರಾಜ್‌ಕುಮಾರ್ ರಸ್ತೆ’ಯನ್ನು ಲೋಕಾರ್ಪಣೆ ಮಾಡಿದಕ್ಕಾಗಿ ನಮ್ಮ ಹೃತ್ಪೂರ್ವಕ ಕೃತಜ್ಞತೆಗಳು. ಈ ಮೂಲಕ ಅಪ್ಪು ಅವರನ್ನು ನಮ್ಮನಡುವೆ ಸದಾ ಜೀವಂತವಾಗಿರಿಸಿದ್ದಕ್ಕಾಗಿ ರಾಜ್ಯ ಸರ್ಕಾರ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಚಿತ್ರರಂಗದ ಬಂಧುಗಳು ಮತ್ತು ಅವರ ಅಸಂಖ್ಯಾತ ಅಭಿಮಾನಿಗಳಿಗೆ ಎಂದೆಂದಿಗೂ ಚಿರಋಣಿ’ ಎಂದು ಅಶ್ವಿನಿ ಅವರು ಬರೆದುಕೊಂಡಿದ್ದಾರೆ.

ಫೆಬ್ರವರಿ 7ರಂದು ಪದ್ಮನಾಭ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುನೀತ್ ರಾಜ್​ಕುಮಾರ್ ರಸ್ತೆ ಉದ್ಘಾಟನೆ ಆಯಿತು. ಸಿಎಂ ಬೊಮ್ಮಾಯಿ ಅವರು ಈ ರಸ್ತೆಗೆ ಮರುನಾಮಕರಣ ಮಾಡಿದರು. ಆ ಬಳಿಕ ಹಲವು ಮನರಂಜನಾ ಕಾರ್ಯಗಳು ನಡೆದವು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್​ಕುಮಾರ್ ಕುಟುಂಬ, ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಹಾಜರಿ ಹಾಕಿದ್ದರು. ಮಾರ್ಚ್​ ವೇಳೆಗೆ ಅಂಬರೀಷ್ ಅವರ ಸ್ಮಾರಕ ಉದ್ಘಾಟನೆ ಮಾಡುವ ಭರವಸೆಯನ್ನು ಸಿಎಂ ಬೊಮ್ಮಾಯಿ ಅವರು ನೀಡಿದ್ದಾರೆ. ಇದು ಅಂಬರೀಷ್ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Wed, 8 February 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ