AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಹುಟ್ಟುಹಬ್ಬಕ್ಕೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಗೈರು, ಕಾರಣವೇನು?

Ashwini Puneeth Rajkumar: ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದಂದು ಅಪ್ಪು ಅವರ ಸ್ಮಾರಕಕ್ಕೆ ದೊಡ್ಮನೆಯ ಹಲವು ಸದಸ್ಯರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಆದರೆ ಅಪ್ಪುರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಬಂದಿರಲಿಲ್ಲ. ಇದಕ್ಕೆ ಕಾರಣವೂ ಇದೆ.

ಪುನೀತ್ ಹುಟ್ಟುಹಬ್ಬಕ್ಕೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಗೈರು, ಕಾರಣವೇನು?
ಮಂಜುನಾಥ ಸಿ.
|

Updated on: Mar 17, 2024 | 1:19 PM

Share

ದಿವಂಗತ ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಅವರ 49ನೇ ವರ್ಷದ ಹುಟ್ಟುಹಬ್ಬ ಇಂದು. ಅವರಿಲ್ಲದಿದ್ದರೂ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಬಹು ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ದೊಡ್ಮನೆ ಕುಟುಂಬದವರು ಸಹ ಕಂಠೀರವ ಸ್ಟುಡಿಯೋದ ಪುನೀತ್ ಸಮಾಧಿಗೆ ಭೇಟಿ ನೀಡಿ ಪೊಜೆ ಸಲ್ಲಿಸಿದ್ದಾರೆ. ರಾಘವೇಂದ್ರ ರಾಜ್​ಕುಮಾರ್, ಅವರ ಪತ್ನಿ ಪೂರ್ಣಿಮಾ, ವಿನಯ್ ರಾಜ್​ಕುಮಾರ್, ಯುವ ರಾಜ್​ಕುಮಾರ್ ಇನ್ನೂ ಹಲವರು ಸಮಾಧಿಗೆ ಭೇಟಿ ನೀಡಿದ್ದರು. ಪುನೀತ್ ರಾಜ್​ಕುಮಾರ್ ಎರಡನೇ ಪುತ್ರಿ ಸಹ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಆದರೆ ಪುನೀತ್​ರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಪೂಜೆಯಲ್ಲಿ ಭಾಗವಹಿಸಿರಲಿಲ್ಲ. ಅದಕ್ಕೆ ಕಾರಣವೂ ಇದೆ.

ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಅಪ್ಪು ಹುಟ್ಟುಹಬ್ಬವನ್ನು ಅಥವಾ ಅಪ್ಪುಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮವನ್ನು ಮಿಸ್ ಮಾಡಿಕೊಳ್ಳುವುದಿಲ್ಲ. ಆದರೆ ಇಂದು ಪುನೀತ್​ರ ಹುಟ್ಟುಹಬ್ಬಕ್ಕೆ ಅಶ್ವಿನಿ ಅವರು ಗೈರಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ಅವರ ಪುತ್ರಿ, ಪೂಜೆ ಕಾರ್ಯಕ್ರಮಗಳನ್ನು ಮಾಡಿದರು. ರಾಘವೇಂದ್ರ ರಾಜ್​ಕುಮಾರ್ ಹಾಗೂ ಅವರ ಕುಟುಂಬದವರು ಕಾರ್ಯಗಳನ್ನು ನೆರವೇರಿಸಿದರು.

ಅಸಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಅಸಲಿಗೆ ಬೆಂಗಳೂರಿನಲ್ಲಿಲ್ಲ. ಅವರು ಮುಂಬೈಗೆ ತೆರಳಿದ್ದಾರೆ. ಸಿನಿಮಾ ಕೆಲಸಕ್ಕಲ್ಲ, ಬದಲಿಗೆ ದೊಡ್ಮನೆಯ ಕುಲದೇವತೆಯ ಪೂಜೆಗೆ. ದೊಡ್ಮನೆಯ ಕುಲದೇವತೆ ವಜ್ರೇಶ್ವರಿ ದೇವಿಯ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪುನೀತ್​ರ ಹುಟ್ಟುಹಬ್ಬದ ದಿನದಂದೇ ಮುಂಬೈನ ವಜ್ರೇಶ್ವರಿ ದೇವಾಲಯಕ್ಕೆ ತೆರಳಿ ಪೂಜೆ ಮಾಡಿಸಿದ್ದಾರೆ. ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಚಿತ್ರರಂಗದಲ್ಲಿ ದಿಟ್ಟ ಹೆಜ್ಜೆಯೊಂದನ್ನು ಇಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದ್ದು, ಇದೇ ಕಾರಣಕ್ಕೆ ವಜ್ರೇಶ್ವರಿ ದೇವಿಗೆ ವಿಶೇಷ ಪೂಜೆ ಮಾಡಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ಜಾಕಿ’ ಸಿನಿಮಾ ನೋಡಲು ಬಂದು ಚಿತ್ರಮಂದಿರದಲ್ಲಿ ಭಾವುಕರಾಗಿ ನಿಂತ ಅಶ್ವಿನಿ ಪುನೀತ್​ ರಾಜ್​ಕುಮಾರ್​

ಈಗಾಗಲೇ ಪಿಆರ್​ಕೆ ಪ್ರೊಡಕ್ಷನ್ ಹಾಗೂ ಪಿಆರ್​ಕೆ ಆಡಿಯೋಸ್ ಅನ್ನು ನೋಡಿಕೊಳ್ಳುತ್ತಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಇನ್ನು ಮುಂದೆ ವಜ್ರೇಶ್ವರಿ ಕಂಬೈನ್ಸ್ ಅನ್ನೂ ಸಹ ನೋಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಅಪ್ಪು ಹುಟ್ಟುಹಬ್ಬದಂದೇ ವಜ್ರೇಶ್ವರಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸುತ್ತಿದ್ದಾರೆ. ಪಿಆರ್​ಕೆ ಸ್ಟುಡಿಯೋಸ್​ನ ಸಿಬ್ಬಂದಿಯನ್ನು ಸಹ ಮುಂಬೈಗೆ ಅಶ್ವಿನಿ ಕರೆಸಿಕೊಳ್ಳುತ್ತಿದ್ದು, ವಿಶೇಷ ಪೂಜೆ ಮಾಡಿಸುತ್ತಿದ್ದಾರೆ.

ಪುನೀತ್ ಅಗಲಿಕೆ ಬಳಿಕ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಪಿಆರ್​ಕೆ ಪ್ರೊಡಕ್ಷನ್​ನ ಸಂಪೂರ್ಣ ಜವಾಬ್ದಾರಿ ಹೊತ್ತುಕೊಂಡಿದ್ದು, ‘ಗಂಧದ ಗುಡಿ’ ಸಿನಿಮಾ ಬಿಡುಗಡೆ ಮಾಡಿಸಿ ದೊಡ್ಡ ಹಿಟ್ ಸಿನಿಮಾ ಆಗುವಂತೆ ಮಾಡಿದರು. ಅದಾದ ಬಳಿಕ ಕೆಲ ತಿಂಗಳ ಹಿಂದೆ ಮಹಿಳಾ ಶಕ್ತಿಯ ಕತೆ ಹೇಳುವ ‘ಆಚಾರ್ ಆಂಡ್ ಕೋ’ ಸಿನಿಮಾ ನಿರ್ಮಾಣ ಮಾಡಿ ಬಿಡುಗಡೆ ಮಾಡಿದರು. ಆ ಸಿನಿಮಾ ಸಹ ಹಿಟ್ ಎನಿಸಿಕೊಂಡಿತು. ಇದೀಗ ‘ಓ 2’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದು, ಬಿಡುಗಡೆ ಇನ್ನೂ ಆಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ