ಪುನೀತ್ ಹುಟ್ಟುಹಬ್ಬಕ್ಕೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಗೈರು, ಕಾರಣವೇನು?

|

Updated on: Mar 17, 2024 | 1:19 PM

Ashwini Puneeth Rajkumar: ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದಂದು ಅಪ್ಪು ಅವರ ಸ್ಮಾರಕಕ್ಕೆ ದೊಡ್ಮನೆಯ ಹಲವು ಸದಸ್ಯರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಆದರೆ ಅಪ್ಪುರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಬಂದಿರಲಿಲ್ಲ. ಇದಕ್ಕೆ ಕಾರಣವೂ ಇದೆ.

ಪುನೀತ್ ಹುಟ್ಟುಹಬ್ಬಕ್ಕೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಗೈರು, ಕಾರಣವೇನು?
Follow us on

ದಿವಂಗತ ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಅವರ 49ನೇ ವರ್ಷದ ಹುಟ್ಟುಹಬ್ಬ ಇಂದು. ಅವರಿಲ್ಲದಿದ್ದರೂ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಬಹು ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ದೊಡ್ಮನೆ ಕುಟುಂಬದವರು ಸಹ ಕಂಠೀರವ ಸ್ಟುಡಿಯೋದ ಪುನೀತ್ ಸಮಾಧಿಗೆ ಭೇಟಿ ನೀಡಿ ಪೊಜೆ ಸಲ್ಲಿಸಿದ್ದಾರೆ. ರಾಘವೇಂದ್ರ ರಾಜ್​ಕುಮಾರ್, ಅವರ ಪತ್ನಿ ಪೂರ್ಣಿಮಾ, ವಿನಯ್ ರಾಜ್​ಕುಮಾರ್, ಯುವ ರಾಜ್​ಕುಮಾರ್ ಇನ್ನೂ ಹಲವರು ಸಮಾಧಿಗೆ ಭೇಟಿ ನೀಡಿದ್ದರು. ಪುನೀತ್ ರಾಜ್​ಕುಮಾರ್ ಎರಡನೇ ಪುತ್ರಿ ಸಹ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಆದರೆ ಪುನೀತ್​ರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಪೂಜೆಯಲ್ಲಿ ಭಾಗವಹಿಸಿರಲಿಲ್ಲ. ಅದಕ್ಕೆ ಕಾರಣವೂ ಇದೆ.

ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಅಪ್ಪು ಹುಟ್ಟುಹಬ್ಬವನ್ನು ಅಥವಾ ಅಪ್ಪುಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮವನ್ನು ಮಿಸ್ ಮಾಡಿಕೊಳ್ಳುವುದಿಲ್ಲ. ಆದರೆ ಇಂದು ಪುನೀತ್​ರ ಹುಟ್ಟುಹಬ್ಬಕ್ಕೆ ಅಶ್ವಿನಿ ಅವರು ಗೈರಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ಅವರ ಪುತ್ರಿ, ಪೂಜೆ ಕಾರ್ಯಕ್ರಮಗಳನ್ನು ಮಾಡಿದರು. ರಾಘವೇಂದ್ರ ರಾಜ್​ಕುಮಾರ್ ಹಾಗೂ ಅವರ ಕುಟುಂಬದವರು ಕಾರ್ಯಗಳನ್ನು ನೆರವೇರಿಸಿದರು.

ಅಸಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಅಸಲಿಗೆ ಬೆಂಗಳೂರಿನಲ್ಲಿಲ್ಲ. ಅವರು ಮುಂಬೈಗೆ ತೆರಳಿದ್ದಾರೆ. ಸಿನಿಮಾ ಕೆಲಸಕ್ಕಲ್ಲ, ಬದಲಿಗೆ ದೊಡ್ಮನೆಯ ಕುಲದೇವತೆಯ ಪೂಜೆಗೆ. ದೊಡ್ಮನೆಯ ಕುಲದೇವತೆ ವಜ್ರೇಶ್ವರಿ ದೇವಿಯ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪುನೀತ್​ರ ಹುಟ್ಟುಹಬ್ಬದ ದಿನದಂದೇ ಮುಂಬೈನ ವಜ್ರೇಶ್ವರಿ ದೇವಾಲಯಕ್ಕೆ ತೆರಳಿ ಪೂಜೆ ಮಾಡಿಸಿದ್ದಾರೆ. ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಚಿತ್ರರಂಗದಲ್ಲಿ ದಿಟ್ಟ ಹೆಜ್ಜೆಯೊಂದನ್ನು ಇಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದ್ದು, ಇದೇ ಕಾರಣಕ್ಕೆ ವಜ್ರೇಶ್ವರಿ ದೇವಿಗೆ ವಿಶೇಷ ಪೂಜೆ ಮಾಡಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ಜಾಕಿ’ ಸಿನಿಮಾ ನೋಡಲು ಬಂದು ಚಿತ್ರಮಂದಿರದಲ್ಲಿ ಭಾವುಕರಾಗಿ ನಿಂತ ಅಶ್ವಿನಿ ಪುನೀತ್​ ರಾಜ್​ಕುಮಾರ್​

ಈಗಾಗಲೇ ಪಿಆರ್​ಕೆ ಪ್ರೊಡಕ್ಷನ್ ಹಾಗೂ ಪಿಆರ್​ಕೆ ಆಡಿಯೋಸ್ ಅನ್ನು ನೋಡಿಕೊಳ್ಳುತ್ತಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಇನ್ನು ಮುಂದೆ ವಜ್ರೇಶ್ವರಿ ಕಂಬೈನ್ಸ್ ಅನ್ನೂ ಸಹ ನೋಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಅಪ್ಪು ಹುಟ್ಟುಹಬ್ಬದಂದೇ ವಜ್ರೇಶ್ವರಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸುತ್ತಿದ್ದಾರೆ. ಪಿಆರ್​ಕೆ ಸ್ಟುಡಿಯೋಸ್​ನ ಸಿಬ್ಬಂದಿಯನ್ನು ಸಹ ಮುಂಬೈಗೆ ಅಶ್ವಿನಿ ಕರೆಸಿಕೊಳ್ಳುತ್ತಿದ್ದು, ವಿಶೇಷ ಪೂಜೆ ಮಾಡಿಸುತ್ತಿದ್ದಾರೆ.

ಪುನೀತ್ ಅಗಲಿಕೆ ಬಳಿಕ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಪಿಆರ್​ಕೆ ಪ್ರೊಡಕ್ಷನ್​ನ ಸಂಪೂರ್ಣ ಜವಾಬ್ದಾರಿ ಹೊತ್ತುಕೊಂಡಿದ್ದು, ‘ಗಂಧದ ಗುಡಿ’ ಸಿನಿಮಾ ಬಿಡುಗಡೆ ಮಾಡಿಸಿ ದೊಡ್ಡ ಹಿಟ್ ಸಿನಿಮಾ ಆಗುವಂತೆ ಮಾಡಿದರು. ಅದಾದ ಬಳಿಕ ಕೆಲ ತಿಂಗಳ ಹಿಂದೆ ಮಹಿಳಾ ಶಕ್ತಿಯ ಕತೆ ಹೇಳುವ ‘ಆಚಾರ್ ಆಂಡ್ ಕೋ’ ಸಿನಿಮಾ ನಿರ್ಮಾಣ ಮಾಡಿ ಬಿಡುಗಡೆ ಮಾಡಿದರು. ಆ ಸಿನಿಮಾ ಸಹ ಹಿಟ್ ಎನಿಸಿಕೊಂಡಿತು. ಇದೀಗ ‘ಓ 2’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದು, ಬಿಡುಗಡೆ ಇನ್ನೂ ಆಗಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ