AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಮಾವ, ಅಶ್ವಿನಿ ತಂದೆ ಹೃದಯಾಘಾತದಿಂದ ನಿಧನ; ರಾಜ್​ ಕುಟುಂಬದಲ್ಲಿ ಮತ್ತೆ ಆವರಿಸಿದ ದುಃಖ

ರಾಜ್​ಕುಮಾರ್​ ಕುಟುಂಬದಲ್ಲಿ ಮತ್ತೆ ಸೂತಕದ ವಾತಾವರಣ ನಿರ್ಮಾಣ ಆಗಿದೆ. ಪುನೀತ್ ರಾಜ್​ಕುಮಾರ್​ ಮಾವ, ಅಶ್ವಿನಿ ಅವರ ತಂದೆ ರೇವನಾಥ್​ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪುನೀತ್ ಮಾವ, ಅಶ್ವಿನಿ ತಂದೆ ಹೃದಯಾಘಾತದಿಂದ ನಿಧನ; ರಾಜ್​ ಕುಟುಂಬದಲ್ಲಿ ಮತ್ತೆ ಆವರಿಸಿದ ದುಃಖ
ಅಶ್ವಿನಿ - ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on:Feb 20, 2022 | 4:34 PM

Share

ಪುನೀತ್ ರಾಜ್​ಕುಮಾರ್​ ಮಾವ ಭಾಗಮನೆ ರೇವನಾಥ್​ ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ಇಂದು (ಫೆ.20) ಅವರ ನಿಧನದಿಂದ (Revanath Death) ದೊಡ್ಮನೆಯಲ್ಲಿ ಶೋಕ ಮಡುಗಟ್ಟಿದೆ. ಅಶ್ವಿನಿ ಪುನೀತ್​ ರಾಜ್​ಕುಮಾರ್ (Ashwini Puneeth Rajkumar)​ ಅವರ ತಂದೆ ಭಾಗಮನೆ ರೇವನಾಥ್​ ಅವರಿಗೆ 78 ವರ್ಷ ವಯಸ್ಸಾಗಿತ್ತು. 20 ವರ್ಷಗಳ ಹಿಂದೆ ಅವರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಎನ್​ಹೆಚ್​ಎಐ ಮುಖ್ಯ ಇಂಜಿನಿಯರ್​ ಆಗಿ ರೇವನಾಥ್​ ಕೆಲಸ ಮಾಡಿದ್ದರು. ಪುನೀತ್​ ರಾಜ್​ಕುಮಾರ್​ ನಿಧನದ ನಂತರ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಅವರು ನಿಧನ ಹೊಂದಿದ್ದಾರೆ. ಕೆಲವೇ ತಿಂಗಳ ಹಿಂದೆ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು ಅಶ್ವಿನಿ ಅವರಿಗೆ ತೀವ್ರ ಆಘಾತ ಉಂಟು ಮಾಡಿತ್ತು. ಆ ನೋವು ಇನ್ನೂ ಹಸಿಯಾಗಿ ಇರುವಾಗಲೇ ಮತ್ತೊಂದು ಶಾಕ್ ಎದುರಾಗಿದೆ.

ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರ ಸ್ಥಿತಿ ಕಂಡು ಅಭಿಮಾನಿಗಳು ಮರುಗುತ್ತಿದ್ದಾರೆ. ಕೆಲವೇ ತಿಂಗಳ ಅಂತರದಲ್ಲಿ ಪತಿ ಮತ್ತು ತಂದೆಯನ್ನು ಅವರು ಕಳೆದುಕೊಳ್ಳುವಂತಾಗಿದ್ದು ನಿಜಕ್ಕೂ ದುಃಖದ ಸಂಗತಿ. ಪತಿಯ ಅಗಲಿಕೆಯ ನೋವನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಮರೆಯಲು ಸಾಧ್ಯವಿಲ್ಲ. ಅದರ ನಡುವೆಯೂ ಅವರು ಪುನೀತ್ ಬಿಟ್ಟುಹೋದ ಕೆಲಸಗಳನ್ನು ಪೂರ್ಣಗೊಳಿಸುವಲ್ಲಿ ಗಮನ ಹರಿಸಿದ್ದರು. ಅಷ್ಟರಲ್ಲಾಗಲೇ ತಂದೆಯ ನಿಧನದಿಂದ ಅವರಿಗೆ ಮತ್ತೆ ಆಘಾತ ಎದುರಾಗಿದೆ.

ಡಾ. ರಾಜ್​ಕುಮಾರ್​ ಕುಟುಂಬದ ರೀತಿಯೇ ರೇವನಾಥ್ ಫ್ಯಾಮಿಲಿ ಕೂಡ ನೇತ್ರದಾನಕ್ಕೆ ಮುಂದಾಗಿದ್ದಾರೆ. ಅಳಿಯ ಪುನೀತ್​ ರಾಜ್​ಕುಮಾರ್​ ರೀತಿ ರೇವನಾಥ್​ ಕೂಡ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ನೇತ್ರದಾನಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ರಾಜ್​ಕುಮಾರ್ ಐ ಬ್ಯಾಂಕ್ ಸಿಬ್ಬಂದಿಗಳು ಎಂ.ಎಸ್​. ರಾಮಯ್ಯ ಆಸ್ಪತ್ರೆಗೆ ಆಗಮಿಸಿದ್ದಾರೆ.

ಭಾನುವಾರ ಬೆಳಗ್ಗೆ ವಾಕ್ ಮಾಡುವಾಗ ರೇವನಾಥ್​ ಕುಸಿದು ಬಿದ್ದಿದ್ದರು. ನಂತರ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ನೇತ್ರದಾನದ ಬಳಿಕ ಬೆಂಗಳೂರಿನ ಆರ್​ಟಿ ನಗರದ ನಿವಾಸ ಅಥವಾ ಚಿಕ್ಕಮಗಳೂರಿಗೆ ಅವರ ಮೃತದೇಹ ರವಾನೆ ಆಗುವ ಸಾಧ್ಯತೆ ಇದೆ.

ಸದಾ ಫಿಟ್​ ಆಗಿರುತ್ತಿದ್ದ ಪುನೀತ್​ ರಾಜ್​ಕುಮಾರ್​ ಅವರಿಗೆ ಹಾರ್ಟ್​ ಅಟ್ಯಾಕ್​ ಆಗಲಿದೆ ಎಂದು ಯಾರೂ ಊಹಿಸಿರಲಿಲ್ಲ. ಆದರೆ ವಿಧಿಯ ಕ್ರೂರತೆಗೆ ಅವರು ಇಹಲೋಕ ತ್ಯಜಿಸುವಂತಾಯಿತು. ಆ ಘಟನೆ ನಡೆದ ಬಳಿಕ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಸೇರಿದಂತೆ ಪುನೀತ್​ ಅವರ ಇಡೀ ಕುಟುಂಬ ಕಣ್ಣೀರಿನಲ್ಲಿ ಕೈತೊಳೆದಿತ್ತು. ಅದರಲ್ಲೂ ಪುನೀತ್​ ಪತ್ನಿ ಅಶ್ವಿನಿ ಅವರಿಗೆ ಆದ ನೋವನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಎಲ್ಲರೂ ಅವರಿಗೆ ಸಾಂತ್ವನ ಹೇಳುತ್ತಿದ್ದಾರೆ. ಪರಭಾಷೆಯ ಅನೇಕ ಸ್ಟಾರ್​ ಕಲಾವಿದರು ಮತ್ತು ತಂತ್ರಜ್ಞರು ಪುನೀತ್​ ನಿವಾಸಕ್ಕೆ ಭೇಟಿ ನೀಡಿ, ಅಶ್ವಿನಿಗೆ ಧೈರ್ಯ ತುಂಬುತ್ತಿದ್ದಾರೆ. ಇನ್ನೇನು ಅವರು ಸಹಜ ಸ್ಥಿತಿಗೆ ಮರಳಲಿದ್ದಾರೆ ಎನ್ನುವಾಗಲೇ ಅವರ ಕುಟುಂಬದಲ್ಲಿ ಮತ್ತೊಂದು ಸಾವು ಸಂಭವಿಸಿದೆ. ತಂದೆಯ ನಿಧನದಿಂದ ಅಶ್ವಿನಿ ಅವರಿಗೆ ತೀವ್ರ ನೋವಾಗಿದೆ.

ಇದನ್ನೂ ಓದಿ:

‘ಕಲಾತಪಸ್ವಿ’ ರಾಜೇಶ್​ ಅಂತ್ಯಸಂಸ್ಕಾರ; ಮಾವನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಅರ್ಜುನ್​ ಸರ್ಜಾ

‘ಒಬ್ಬರಾದ ಮೇಲೆ ಒಬ್ಬರು ಹೋಗುತ್ತಿದ್ದಾರೆ’; ರಾಜೇಶ್​ ನಿಧನಕ್ಕೆ ಕಂಬನಿ ಮಿಡಿದ ಎಸ್​. ನಾರಾಯಣ್​

Published On - 3:37 pm, Sun, 20 February 22

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ