AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಮಾವ, ಅಶ್ವಿನಿ ತಂದೆ ಹೃದಯಾಘಾತದಿಂದ ನಿಧನ; ರಾಜ್​ ಕುಟುಂಬದಲ್ಲಿ ಮತ್ತೆ ಆವರಿಸಿದ ದುಃಖ

ರಾಜ್​ಕುಮಾರ್​ ಕುಟುಂಬದಲ್ಲಿ ಮತ್ತೆ ಸೂತಕದ ವಾತಾವರಣ ನಿರ್ಮಾಣ ಆಗಿದೆ. ಪುನೀತ್ ರಾಜ್​ಕುಮಾರ್​ ಮಾವ, ಅಶ್ವಿನಿ ಅವರ ತಂದೆ ರೇವನಾಥ್​ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪುನೀತ್ ಮಾವ, ಅಶ್ವಿನಿ ತಂದೆ ಹೃದಯಾಘಾತದಿಂದ ನಿಧನ; ರಾಜ್​ ಕುಟುಂಬದಲ್ಲಿ ಮತ್ತೆ ಆವರಿಸಿದ ದುಃಖ
ಅಶ್ವಿನಿ - ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on:Feb 20, 2022 | 4:34 PM

Share

ಪುನೀತ್ ರಾಜ್​ಕುಮಾರ್​ ಮಾವ ಭಾಗಮನೆ ರೇವನಾಥ್​ ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ಇಂದು (ಫೆ.20) ಅವರ ನಿಧನದಿಂದ (Revanath Death) ದೊಡ್ಮನೆಯಲ್ಲಿ ಶೋಕ ಮಡುಗಟ್ಟಿದೆ. ಅಶ್ವಿನಿ ಪುನೀತ್​ ರಾಜ್​ಕುಮಾರ್ (Ashwini Puneeth Rajkumar)​ ಅವರ ತಂದೆ ಭಾಗಮನೆ ರೇವನಾಥ್​ ಅವರಿಗೆ 78 ವರ್ಷ ವಯಸ್ಸಾಗಿತ್ತು. 20 ವರ್ಷಗಳ ಹಿಂದೆ ಅವರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಎನ್​ಹೆಚ್​ಎಐ ಮುಖ್ಯ ಇಂಜಿನಿಯರ್​ ಆಗಿ ರೇವನಾಥ್​ ಕೆಲಸ ಮಾಡಿದ್ದರು. ಪುನೀತ್​ ರಾಜ್​ಕುಮಾರ್​ ನಿಧನದ ನಂತರ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಅವರು ನಿಧನ ಹೊಂದಿದ್ದಾರೆ. ಕೆಲವೇ ತಿಂಗಳ ಹಿಂದೆ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು ಅಶ್ವಿನಿ ಅವರಿಗೆ ತೀವ್ರ ಆಘಾತ ಉಂಟು ಮಾಡಿತ್ತು. ಆ ನೋವು ಇನ್ನೂ ಹಸಿಯಾಗಿ ಇರುವಾಗಲೇ ಮತ್ತೊಂದು ಶಾಕ್ ಎದುರಾಗಿದೆ.

ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರ ಸ್ಥಿತಿ ಕಂಡು ಅಭಿಮಾನಿಗಳು ಮರುಗುತ್ತಿದ್ದಾರೆ. ಕೆಲವೇ ತಿಂಗಳ ಅಂತರದಲ್ಲಿ ಪತಿ ಮತ್ತು ತಂದೆಯನ್ನು ಅವರು ಕಳೆದುಕೊಳ್ಳುವಂತಾಗಿದ್ದು ನಿಜಕ್ಕೂ ದುಃಖದ ಸಂಗತಿ. ಪತಿಯ ಅಗಲಿಕೆಯ ನೋವನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಮರೆಯಲು ಸಾಧ್ಯವಿಲ್ಲ. ಅದರ ನಡುವೆಯೂ ಅವರು ಪುನೀತ್ ಬಿಟ್ಟುಹೋದ ಕೆಲಸಗಳನ್ನು ಪೂರ್ಣಗೊಳಿಸುವಲ್ಲಿ ಗಮನ ಹರಿಸಿದ್ದರು. ಅಷ್ಟರಲ್ಲಾಗಲೇ ತಂದೆಯ ನಿಧನದಿಂದ ಅವರಿಗೆ ಮತ್ತೆ ಆಘಾತ ಎದುರಾಗಿದೆ.

ಡಾ. ರಾಜ್​ಕುಮಾರ್​ ಕುಟುಂಬದ ರೀತಿಯೇ ರೇವನಾಥ್ ಫ್ಯಾಮಿಲಿ ಕೂಡ ನೇತ್ರದಾನಕ್ಕೆ ಮುಂದಾಗಿದ್ದಾರೆ. ಅಳಿಯ ಪುನೀತ್​ ರಾಜ್​ಕುಮಾರ್​ ರೀತಿ ರೇವನಾಥ್​ ಕೂಡ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ನೇತ್ರದಾನಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ರಾಜ್​ಕುಮಾರ್ ಐ ಬ್ಯಾಂಕ್ ಸಿಬ್ಬಂದಿಗಳು ಎಂ.ಎಸ್​. ರಾಮಯ್ಯ ಆಸ್ಪತ್ರೆಗೆ ಆಗಮಿಸಿದ್ದಾರೆ.

ಭಾನುವಾರ ಬೆಳಗ್ಗೆ ವಾಕ್ ಮಾಡುವಾಗ ರೇವನಾಥ್​ ಕುಸಿದು ಬಿದ್ದಿದ್ದರು. ನಂತರ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ನೇತ್ರದಾನದ ಬಳಿಕ ಬೆಂಗಳೂರಿನ ಆರ್​ಟಿ ನಗರದ ನಿವಾಸ ಅಥವಾ ಚಿಕ್ಕಮಗಳೂರಿಗೆ ಅವರ ಮೃತದೇಹ ರವಾನೆ ಆಗುವ ಸಾಧ್ಯತೆ ಇದೆ.

ಸದಾ ಫಿಟ್​ ಆಗಿರುತ್ತಿದ್ದ ಪುನೀತ್​ ರಾಜ್​ಕುಮಾರ್​ ಅವರಿಗೆ ಹಾರ್ಟ್​ ಅಟ್ಯಾಕ್​ ಆಗಲಿದೆ ಎಂದು ಯಾರೂ ಊಹಿಸಿರಲಿಲ್ಲ. ಆದರೆ ವಿಧಿಯ ಕ್ರೂರತೆಗೆ ಅವರು ಇಹಲೋಕ ತ್ಯಜಿಸುವಂತಾಯಿತು. ಆ ಘಟನೆ ನಡೆದ ಬಳಿಕ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಸೇರಿದಂತೆ ಪುನೀತ್​ ಅವರ ಇಡೀ ಕುಟುಂಬ ಕಣ್ಣೀರಿನಲ್ಲಿ ಕೈತೊಳೆದಿತ್ತು. ಅದರಲ್ಲೂ ಪುನೀತ್​ ಪತ್ನಿ ಅಶ್ವಿನಿ ಅವರಿಗೆ ಆದ ನೋವನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಎಲ್ಲರೂ ಅವರಿಗೆ ಸಾಂತ್ವನ ಹೇಳುತ್ತಿದ್ದಾರೆ. ಪರಭಾಷೆಯ ಅನೇಕ ಸ್ಟಾರ್​ ಕಲಾವಿದರು ಮತ್ತು ತಂತ್ರಜ್ಞರು ಪುನೀತ್​ ನಿವಾಸಕ್ಕೆ ಭೇಟಿ ನೀಡಿ, ಅಶ್ವಿನಿಗೆ ಧೈರ್ಯ ತುಂಬುತ್ತಿದ್ದಾರೆ. ಇನ್ನೇನು ಅವರು ಸಹಜ ಸ್ಥಿತಿಗೆ ಮರಳಲಿದ್ದಾರೆ ಎನ್ನುವಾಗಲೇ ಅವರ ಕುಟುಂಬದಲ್ಲಿ ಮತ್ತೊಂದು ಸಾವು ಸಂಭವಿಸಿದೆ. ತಂದೆಯ ನಿಧನದಿಂದ ಅಶ್ವಿನಿ ಅವರಿಗೆ ತೀವ್ರ ನೋವಾಗಿದೆ.

ಇದನ್ನೂ ಓದಿ:

‘ಕಲಾತಪಸ್ವಿ’ ರಾಜೇಶ್​ ಅಂತ್ಯಸಂಸ್ಕಾರ; ಮಾವನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಅರ್ಜುನ್​ ಸರ್ಜಾ

‘ಒಬ್ಬರಾದ ಮೇಲೆ ಒಬ್ಬರು ಹೋಗುತ್ತಿದ್ದಾರೆ’; ರಾಜೇಶ್​ ನಿಧನಕ್ಕೆ ಕಂಬನಿ ಮಿಡಿದ ಎಸ್​. ನಾರಾಯಣ್​

Published On - 3:37 pm, Sun, 20 February 22

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ