AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಂಗದಾನ ಕ್ಯಾಂಪೇನ್: ರಾಯಭಾರಿ ಆಗಲು ಅಶ್ವಿನಿ ಪುನೀತ್​ಗೆ ಆಹ್ವಾನ ನೀಡಿದ ರಾಜ್ಯ ಸರ್ಕಾರ

Ashwini Puneeth Rajkumar: ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರು ನೇತ್ರದಾನ ಮಾಡಿದ್ದರು. ಕಣ್ಣಿನ ದಾನ ಮಾಡುವಂತೆ ಅವರು ಅನೇಕರಿಗೆ ಸ್ಫೂರ್ತಿ ನೀಡಿದ್ದರು. ಈ ಕಾರಣದಿಂದ ಅಶ್ವಿನಿ ಪುನೀತ್ ಅವರಿಗೆ ‘ಅಂಗಾಂಗದಾನ ಕ್ಯಾಂಪೇನ್​’ನ ರಾಯಭಾರಿ ಆಗುವಂತೆ ಆಹ್ವಾನ ನೀಡಲಾಗಿದೆ.

ಅಂಗಾಂಗದಾನ ಕ್ಯಾಂಪೇನ್: ರಾಯಭಾರಿ ಆಗಲು ಅಶ್ವಿನಿ ಪುನೀತ್​ಗೆ ಆಹ್ವಾನ ನೀಡಿದ ರಾಜ್ಯ ಸರ್ಕಾರ
ಅಶ್ವಿನಿ-ಪುನೀತ್
ರಾಜೇಶ್ ದುಗ್ಗುಮನೆ
|

Updated on:Jul 24, 2023 | 8:19 AM

Share

ಡಾ. ರಾಜ್​ಕುಮಾರ್ (Dr Rajkumar) ಕುಟುಂಬ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದೆ. ಕೇವಲ ನಟನೆ ಮಾತ್ರವಲ್ಲದೆ ಹಲವು ಸಾಮಾಜಿಕ ಕೆಲಸಗಳ ಮೂಲಕವೂ ಈ ಕುಟುಂಬದವರು ಗುರುತಿಸಿಕೊಂಡಿದ್ದಾರೆ. ರಾಜ್​ಕುಮಾರ್, ಪುನೀತ್​ ರಾಜ್​ಕುಮಾರ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಈ ಕೆಲಸವನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಕೂಡ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಈಗ ಅಂಗಾಂಗದಾನ ಕ್ಯಾಂಪೇನ್​ಗೆ ರಾಯಭಾರಿ ಆಗುವಂತೆ ಅಶ್ವಿನಿ ಅವರಿಗೆ ರಾಜ್ಯ ಸರ್ಕಾರ ಆಹ್ವಾನ ನೀಡಿದೆ.

ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರು ನೇತ್ರದಾನ ಮಾಡಿದ್ದರು. ಕಣ್ಣಿನ ದಾನ ಮಾಡುವಂತೆ ಅವರು ಅನೇಕರಿಗೆ ಸ್ಫೂರ್ತಿ ನೀಡಿದ್ದರು. ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರನ್ನು ಅನುಸರಿಸಿ ಅನೇಕರು ಕಣ್ಣಿನ ದಾನ ಮಾಡಲು ಹೆಸರು ನೋಂದಣಿ ಮಾಡಿಸಿದ್ದರು. ಈ ಕಾರಣದಿಂದ ಅಶ್ವಿನಿ ಪುನೀತ್ ಅವರಿಗೆ ‘ಅಂಗಾಂಗದಾನ ಕ್ಯಾಂಪೇನ್​’ನ ರಾಯಭಾರಿ ಆಗುವಂತೆ ಆಹ್ವಾನ ನೀಡಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಇದರಲ್ಲಿ ಅವರು ರಾಜ್​ಕುಮಾರ್ ಕುಟುಂಬದ ಕೊಡುಗೆಯನ್ನು ಸ್ಮರಿಸಿದ್ದಾರೆ ಮತ್ತು ಅಶ್ವಿನಿ ಅವರಿಗೆ ಅಂಬಾಸಿಡರ್ ಆಗಲು ಆಹ್ವಾನ ನೀಡಿರುವ ವಿಚಾರವನ್ನು ಅವರು ತಿಳಿಸಿದ್ದಾರೆ.

‘ರಾಜ್​ಕುಮಾರ್ ಹಾಗೂ ಅವರ ಕಿರಿಮಗ ಪುನೀತ್ ರಾಜ್​ಕುಮಾರ್ ಅವರು ಮರಣಾನಂತರ ಕಣ್ಣುಗಳನ್ನು ದಾನ ಮಾಡಿ ಮಾದರಿ ಆದರು.  ಅನೇಕರು ಇವರನ್ನು ಅನುಕರಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ರಾಜ್ಯದಲ್ಲಿ ನೇತ್ರದಾನ ಮಾಡುವವರ ಸಂಖ್ಯೆ ಹೆಚ್ಚಿದೆ. ಈ ಕಾರಣದಿಂದ ಆರೋಗ್ಯ ಇಲಾಖೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರನ್ನು ಅಂಗಾಂಗದಾನ ದಾನ ಕ್ಯಾಂಪೇನ್​ನ ಬ್ರ್ಯಾಂಡ್ ಅಂಬಾಸಿಡರ್ ಮಾಡಿಕೊಳ್ಳಲು ನಿರ್ಧರಿಸಿದೆ’ ಎಂದು ಗುಂಡೂರಾವ್ ಅವರು ತಿಳಿಸಿದ್ದಾರೆ. ಅಂಗಾಂಗದಾನಕ್ಕೆ ಸಹಕರಿಸಿದ 150 ಕುಟುಂಬಗಳನ್ನು ಆರೋಗ್ಯ ಇಲಾಖೆ ಸನ್ಮಾನಿಸಿದೆ.

ಇದನ್ನೂ ಓದಿ: ಅಪರೂಪಕ್ಕೆ ಮೈಕ್ ಹಿಡಿದು ಮಾತನಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್ ಏನಂದರು? 

ಪುನೀತ್ ಮರಣಾ ನಂತರ ಅಶ್ವಿನಿ ಪುನೀತ್ ಅವರು ‘ಪಿಆರ್​ಕೆ ಪ್ರೊಡಕ್ಷನ್’ ನಿರ್ಮಾಣ ಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಈ ನಿರ್ಮಾಣ ಸಂಸ್ಥೆಯಡಿಯಲ್ಲಿ ‘ಆಚಾರ್ ಆ್ಯಂಡ್ ಕೋ’ ಸಿನಿಮಾ ಮೂಡಿಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:47 am, Mon, 24 July 23

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!