AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಂಗದಾನ ಕ್ಯಾಂಪೇನ್: ರಾಯಭಾರಿ ಆಗಲು ಅಶ್ವಿನಿ ಪುನೀತ್​ಗೆ ಆಹ್ವಾನ ನೀಡಿದ ರಾಜ್ಯ ಸರ್ಕಾರ

Ashwini Puneeth Rajkumar: ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರು ನೇತ್ರದಾನ ಮಾಡಿದ್ದರು. ಕಣ್ಣಿನ ದಾನ ಮಾಡುವಂತೆ ಅವರು ಅನೇಕರಿಗೆ ಸ್ಫೂರ್ತಿ ನೀಡಿದ್ದರು. ಈ ಕಾರಣದಿಂದ ಅಶ್ವಿನಿ ಪುನೀತ್ ಅವರಿಗೆ ‘ಅಂಗಾಂಗದಾನ ಕ್ಯಾಂಪೇನ್​’ನ ರಾಯಭಾರಿ ಆಗುವಂತೆ ಆಹ್ವಾನ ನೀಡಲಾಗಿದೆ.

ಅಂಗಾಂಗದಾನ ಕ್ಯಾಂಪೇನ್: ರಾಯಭಾರಿ ಆಗಲು ಅಶ್ವಿನಿ ಪುನೀತ್​ಗೆ ಆಹ್ವಾನ ನೀಡಿದ ರಾಜ್ಯ ಸರ್ಕಾರ
ಅಶ್ವಿನಿ-ಪುನೀತ್
Follow us
ರಾಜೇಶ್ ದುಗ್ಗುಮನೆ
|

Updated on:Jul 24, 2023 | 8:19 AM

ಡಾ. ರಾಜ್​ಕುಮಾರ್ (Dr Rajkumar) ಕುಟುಂಬ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದೆ. ಕೇವಲ ನಟನೆ ಮಾತ್ರವಲ್ಲದೆ ಹಲವು ಸಾಮಾಜಿಕ ಕೆಲಸಗಳ ಮೂಲಕವೂ ಈ ಕುಟುಂಬದವರು ಗುರುತಿಸಿಕೊಂಡಿದ್ದಾರೆ. ರಾಜ್​ಕುಮಾರ್, ಪುನೀತ್​ ರಾಜ್​ಕುಮಾರ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಈ ಕೆಲಸವನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಕೂಡ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಈಗ ಅಂಗಾಂಗದಾನ ಕ್ಯಾಂಪೇನ್​ಗೆ ರಾಯಭಾರಿ ಆಗುವಂತೆ ಅಶ್ವಿನಿ ಅವರಿಗೆ ರಾಜ್ಯ ಸರ್ಕಾರ ಆಹ್ವಾನ ನೀಡಿದೆ.

ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರು ನೇತ್ರದಾನ ಮಾಡಿದ್ದರು. ಕಣ್ಣಿನ ದಾನ ಮಾಡುವಂತೆ ಅವರು ಅನೇಕರಿಗೆ ಸ್ಫೂರ್ತಿ ನೀಡಿದ್ದರು. ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರನ್ನು ಅನುಸರಿಸಿ ಅನೇಕರು ಕಣ್ಣಿನ ದಾನ ಮಾಡಲು ಹೆಸರು ನೋಂದಣಿ ಮಾಡಿಸಿದ್ದರು. ಈ ಕಾರಣದಿಂದ ಅಶ್ವಿನಿ ಪುನೀತ್ ಅವರಿಗೆ ‘ಅಂಗಾಂಗದಾನ ಕ್ಯಾಂಪೇನ್​’ನ ರಾಯಭಾರಿ ಆಗುವಂತೆ ಆಹ್ವಾನ ನೀಡಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಇದರಲ್ಲಿ ಅವರು ರಾಜ್​ಕುಮಾರ್ ಕುಟುಂಬದ ಕೊಡುಗೆಯನ್ನು ಸ್ಮರಿಸಿದ್ದಾರೆ ಮತ್ತು ಅಶ್ವಿನಿ ಅವರಿಗೆ ಅಂಬಾಸಿಡರ್ ಆಗಲು ಆಹ್ವಾನ ನೀಡಿರುವ ವಿಚಾರವನ್ನು ಅವರು ತಿಳಿಸಿದ್ದಾರೆ.

‘ರಾಜ್​ಕುಮಾರ್ ಹಾಗೂ ಅವರ ಕಿರಿಮಗ ಪುನೀತ್ ರಾಜ್​ಕುಮಾರ್ ಅವರು ಮರಣಾನಂತರ ಕಣ್ಣುಗಳನ್ನು ದಾನ ಮಾಡಿ ಮಾದರಿ ಆದರು.  ಅನೇಕರು ಇವರನ್ನು ಅನುಕರಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ರಾಜ್ಯದಲ್ಲಿ ನೇತ್ರದಾನ ಮಾಡುವವರ ಸಂಖ್ಯೆ ಹೆಚ್ಚಿದೆ. ಈ ಕಾರಣದಿಂದ ಆರೋಗ್ಯ ಇಲಾಖೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರನ್ನು ಅಂಗಾಂಗದಾನ ದಾನ ಕ್ಯಾಂಪೇನ್​ನ ಬ್ರ್ಯಾಂಡ್ ಅಂಬಾಸಿಡರ್ ಮಾಡಿಕೊಳ್ಳಲು ನಿರ್ಧರಿಸಿದೆ’ ಎಂದು ಗುಂಡೂರಾವ್ ಅವರು ತಿಳಿಸಿದ್ದಾರೆ. ಅಂಗಾಂಗದಾನಕ್ಕೆ ಸಹಕರಿಸಿದ 150 ಕುಟುಂಬಗಳನ್ನು ಆರೋಗ್ಯ ಇಲಾಖೆ ಸನ್ಮಾನಿಸಿದೆ.

ಇದನ್ನೂ ಓದಿ: ಅಪರೂಪಕ್ಕೆ ಮೈಕ್ ಹಿಡಿದು ಮಾತನಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್ ಏನಂದರು? 

ಪುನೀತ್ ಮರಣಾ ನಂತರ ಅಶ್ವಿನಿ ಪುನೀತ್ ಅವರು ‘ಪಿಆರ್​ಕೆ ಪ್ರೊಡಕ್ಷನ್’ ನಿರ್ಮಾಣ ಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಈ ನಿರ್ಮಾಣ ಸಂಸ್ಥೆಯಡಿಯಲ್ಲಿ ‘ಆಚಾರ್ ಆ್ಯಂಡ್ ಕೋ’ ಸಿನಿಮಾ ಮೂಡಿಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:47 am, Mon, 24 July 23

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್