AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಂಗದಾನ ಕ್ಯಾಂಪೇನ್: ರಾಯಭಾರಿ ಆಗಲು ಅಶ್ವಿನಿ ಪುನೀತ್​ಗೆ ಆಹ್ವಾನ ನೀಡಿದ ರಾಜ್ಯ ಸರ್ಕಾರ

Ashwini Puneeth Rajkumar: ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರು ನೇತ್ರದಾನ ಮಾಡಿದ್ದರು. ಕಣ್ಣಿನ ದಾನ ಮಾಡುವಂತೆ ಅವರು ಅನೇಕರಿಗೆ ಸ್ಫೂರ್ತಿ ನೀಡಿದ್ದರು. ಈ ಕಾರಣದಿಂದ ಅಶ್ವಿನಿ ಪುನೀತ್ ಅವರಿಗೆ ‘ಅಂಗಾಂಗದಾನ ಕ್ಯಾಂಪೇನ್​’ನ ರಾಯಭಾರಿ ಆಗುವಂತೆ ಆಹ್ವಾನ ನೀಡಲಾಗಿದೆ.

ಅಂಗಾಂಗದಾನ ಕ್ಯಾಂಪೇನ್: ರಾಯಭಾರಿ ಆಗಲು ಅಶ್ವಿನಿ ಪುನೀತ್​ಗೆ ಆಹ್ವಾನ ನೀಡಿದ ರಾಜ್ಯ ಸರ್ಕಾರ
ಅಶ್ವಿನಿ-ಪುನೀತ್
ರಾಜೇಶ್ ದುಗ್ಗುಮನೆ
|

Updated on:Jul 24, 2023 | 8:19 AM

Share

ಡಾ. ರಾಜ್​ಕುಮಾರ್ (Dr Rajkumar) ಕುಟುಂಬ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದೆ. ಕೇವಲ ನಟನೆ ಮಾತ್ರವಲ್ಲದೆ ಹಲವು ಸಾಮಾಜಿಕ ಕೆಲಸಗಳ ಮೂಲಕವೂ ಈ ಕುಟುಂಬದವರು ಗುರುತಿಸಿಕೊಂಡಿದ್ದಾರೆ. ರಾಜ್​ಕುಮಾರ್, ಪುನೀತ್​ ರಾಜ್​ಕುಮಾರ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಈ ಕೆಲಸವನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಕೂಡ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಈಗ ಅಂಗಾಂಗದಾನ ಕ್ಯಾಂಪೇನ್​ಗೆ ರಾಯಭಾರಿ ಆಗುವಂತೆ ಅಶ್ವಿನಿ ಅವರಿಗೆ ರಾಜ್ಯ ಸರ್ಕಾರ ಆಹ್ವಾನ ನೀಡಿದೆ.

ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರು ನೇತ್ರದಾನ ಮಾಡಿದ್ದರು. ಕಣ್ಣಿನ ದಾನ ಮಾಡುವಂತೆ ಅವರು ಅನೇಕರಿಗೆ ಸ್ಫೂರ್ತಿ ನೀಡಿದ್ದರು. ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರನ್ನು ಅನುಸರಿಸಿ ಅನೇಕರು ಕಣ್ಣಿನ ದಾನ ಮಾಡಲು ಹೆಸರು ನೋಂದಣಿ ಮಾಡಿಸಿದ್ದರು. ಈ ಕಾರಣದಿಂದ ಅಶ್ವಿನಿ ಪುನೀತ್ ಅವರಿಗೆ ‘ಅಂಗಾಂಗದಾನ ಕ್ಯಾಂಪೇನ್​’ನ ರಾಯಭಾರಿ ಆಗುವಂತೆ ಆಹ್ವಾನ ನೀಡಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಇದರಲ್ಲಿ ಅವರು ರಾಜ್​ಕುಮಾರ್ ಕುಟುಂಬದ ಕೊಡುಗೆಯನ್ನು ಸ್ಮರಿಸಿದ್ದಾರೆ ಮತ್ತು ಅಶ್ವಿನಿ ಅವರಿಗೆ ಅಂಬಾಸಿಡರ್ ಆಗಲು ಆಹ್ವಾನ ನೀಡಿರುವ ವಿಚಾರವನ್ನು ಅವರು ತಿಳಿಸಿದ್ದಾರೆ.

‘ರಾಜ್​ಕುಮಾರ್ ಹಾಗೂ ಅವರ ಕಿರಿಮಗ ಪುನೀತ್ ರಾಜ್​ಕುಮಾರ್ ಅವರು ಮರಣಾನಂತರ ಕಣ್ಣುಗಳನ್ನು ದಾನ ಮಾಡಿ ಮಾದರಿ ಆದರು.  ಅನೇಕರು ಇವರನ್ನು ಅನುಕರಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ರಾಜ್ಯದಲ್ಲಿ ನೇತ್ರದಾನ ಮಾಡುವವರ ಸಂಖ್ಯೆ ಹೆಚ್ಚಿದೆ. ಈ ಕಾರಣದಿಂದ ಆರೋಗ್ಯ ಇಲಾಖೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರನ್ನು ಅಂಗಾಂಗದಾನ ದಾನ ಕ್ಯಾಂಪೇನ್​ನ ಬ್ರ್ಯಾಂಡ್ ಅಂಬಾಸಿಡರ್ ಮಾಡಿಕೊಳ್ಳಲು ನಿರ್ಧರಿಸಿದೆ’ ಎಂದು ಗುಂಡೂರಾವ್ ಅವರು ತಿಳಿಸಿದ್ದಾರೆ. ಅಂಗಾಂಗದಾನಕ್ಕೆ ಸಹಕರಿಸಿದ 150 ಕುಟುಂಬಗಳನ್ನು ಆರೋಗ್ಯ ಇಲಾಖೆ ಸನ್ಮಾನಿಸಿದೆ.

ಇದನ್ನೂ ಓದಿ: ಅಪರೂಪಕ್ಕೆ ಮೈಕ್ ಹಿಡಿದು ಮಾತನಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್ ಏನಂದರು? 

ಪುನೀತ್ ಮರಣಾ ನಂತರ ಅಶ್ವಿನಿ ಪುನೀತ್ ಅವರು ‘ಪಿಆರ್​ಕೆ ಪ್ರೊಡಕ್ಷನ್’ ನಿರ್ಮಾಣ ಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಈ ನಿರ್ಮಾಣ ಸಂಸ್ಥೆಯಡಿಯಲ್ಲಿ ‘ಆಚಾರ್ ಆ್ಯಂಡ್ ಕೋ’ ಸಿನಿಮಾ ಮೂಡಿಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:47 am, Mon, 24 July 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ