ಅಂಗಾಂಗದಾನ ಕ್ಯಾಂಪೇನ್: ರಾಯಭಾರಿ ಆಗಲು ಅಶ್ವಿನಿ ಪುನೀತ್​ಗೆ ಆಹ್ವಾನ ನೀಡಿದ ರಾಜ್ಯ ಸರ್ಕಾರ

Ashwini Puneeth Rajkumar: ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರು ನೇತ್ರದಾನ ಮಾಡಿದ್ದರು. ಕಣ್ಣಿನ ದಾನ ಮಾಡುವಂತೆ ಅವರು ಅನೇಕರಿಗೆ ಸ್ಫೂರ್ತಿ ನೀಡಿದ್ದರು. ಈ ಕಾರಣದಿಂದ ಅಶ್ವಿನಿ ಪುನೀತ್ ಅವರಿಗೆ ‘ಅಂಗಾಂಗದಾನ ಕ್ಯಾಂಪೇನ್​’ನ ರಾಯಭಾರಿ ಆಗುವಂತೆ ಆಹ್ವಾನ ನೀಡಲಾಗಿದೆ.

ಅಂಗಾಂಗದಾನ ಕ್ಯಾಂಪೇನ್: ರಾಯಭಾರಿ ಆಗಲು ಅಶ್ವಿನಿ ಪುನೀತ್​ಗೆ ಆಹ್ವಾನ ನೀಡಿದ ರಾಜ್ಯ ಸರ್ಕಾರ
ಅಶ್ವಿನಿ-ಪುನೀತ್

Updated on: Jul 24, 2023 | 8:19 AM

ಡಾ. ರಾಜ್​ಕುಮಾರ್ (Dr Rajkumar) ಕುಟುಂಬ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದೆ. ಕೇವಲ ನಟನೆ ಮಾತ್ರವಲ್ಲದೆ ಹಲವು ಸಾಮಾಜಿಕ ಕೆಲಸಗಳ ಮೂಲಕವೂ ಈ ಕುಟುಂಬದವರು ಗುರುತಿಸಿಕೊಂಡಿದ್ದಾರೆ. ರಾಜ್​ಕುಮಾರ್, ಪುನೀತ್​ ರಾಜ್​ಕುಮಾರ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಈ ಕೆಲಸವನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಕೂಡ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಈಗ ಅಂಗಾಂಗದಾನ ಕ್ಯಾಂಪೇನ್​ಗೆ ರಾಯಭಾರಿ ಆಗುವಂತೆ ಅಶ್ವಿನಿ ಅವರಿಗೆ ರಾಜ್ಯ ಸರ್ಕಾರ ಆಹ್ವಾನ ನೀಡಿದೆ.

ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರು ನೇತ್ರದಾನ ಮಾಡಿದ್ದರು. ಕಣ್ಣಿನ ದಾನ ಮಾಡುವಂತೆ ಅವರು ಅನೇಕರಿಗೆ ಸ್ಫೂರ್ತಿ ನೀಡಿದ್ದರು. ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರನ್ನು ಅನುಸರಿಸಿ ಅನೇಕರು ಕಣ್ಣಿನ ದಾನ ಮಾಡಲು ಹೆಸರು ನೋಂದಣಿ ಮಾಡಿಸಿದ್ದರು. ಈ ಕಾರಣದಿಂದ ಅಶ್ವಿನಿ ಪುನೀತ್ ಅವರಿಗೆ ‘ಅಂಗಾಂಗದಾನ ಕ್ಯಾಂಪೇನ್​’ನ ರಾಯಭಾರಿ ಆಗುವಂತೆ ಆಹ್ವಾನ ನೀಡಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಇದರಲ್ಲಿ ಅವರು ರಾಜ್​ಕುಮಾರ್ ಕುಟುಂಬದ ಕೊಡುಗೆಯನ್ನು ಸ್ಮರಿಸಿದ್ದಾರೆ ಮತ್ತು ಅಶ್ವಿನಿ ಅವರಿಗೆ ಅಂಬಾಸಿಡರ್ ಆಗಲು ಆಹ್ವಾನ ನೀಡಿರುವ ವಿಚಾರವನ್ನು ಅವರು ತಿಳಿಸಿದ್ದಾರೆ.

‘ರಾಜ್​ಕುಮಾರ್ ಹಾಗೂ ಅವರ ಕಿರಿಮಗ ಪುನೀತ್ ರಾಜ್​ಕುಮಾರ್ ಅವರು ಮರಣಾನಂತರ ಕಣ್ಣುಗಳನ್ನು ದಾನ ಮಾಡಿ ಮಾದರಿ ಆದರು.  ಅನೇಕರು ಇವರನ್ನು ಅನುಕರಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ರಾಜ್ಯದಲ್ಲಿ ನೇತ್ರದಾನ ಮಾಡುವವರ ಸಂಖ್ಯೆ ಹೆಚ್ಚಿದೆ. ಈ ಕಾರಣದಿಂದ ಆರೋಗ್ಯ ಇಲಾಖೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರನ್ನು ಅಂಗಾಂಗದಾನ ದಾನ ಕ್ಯಾಂಪೇನ್​ನ ಬ್ರ್ಯಾಂಡ್ ಅಂಬಾಸಿಡರ್ ಮಾಡಿಕೊಳ್ಳಲು ನಿರ್ಧರಿಸಿದೆ’ ಎಂದು ಗುಂಡೂರಾವ್ ಅವರು ತಿಳಿಸಿದ್ದಾರೆ. ಅಂಗಾಂಗದಾನಕ್ಕೆ ಸಹಕರಿಸಿದ 150 ಕುಟುಂಬಗಳನ್ನು ಆರೋಗ್ಯ ಇಲಾಖೆ ಸನ್ಮಾನಿಸಿದೆ.

ಇದನ್ನೂ ಓದಿ: ಅಪರೂಪಕ್ಕೆ ಮೈಕ್ ಹಿಡಿದು ಮಾತನಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್ ಏನಂದರು? 

ಪುನೀತ್ ಮರಣಾ ನಂತರ ಅಶ್ವಿನಿ ಪುನೀತ್ ಅವರು ‘ಪಿಆರ್​ಕೆ ಪ್ರೊಡಕ್ಷನ್’ ನಿರ್ಮಾಣ ಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಈ ನಿರ್ಮಾಣ ಸಂಸ್ಥೆಯಡಿಯಲ್ಲಿ ‘ಆಚಾರ್ ಆ್ಯಂಡ್ ಕೋ’ ಸಿನಿಮಾ ಮೂಡಿಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:47 am, Mon, 24 July 23

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us