AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ಗಂಧದ ಗುಡಿ’ ಪ್ರೀ-ರಿಲೀಸ್ ಇವೆಂಟ್​; ಸಿಎಂಗೆ ಆಹ್ವಾನ ನೀಡಿದ ಡಾ. ರಾಜ್​ಕುಮಾರ್ ಕುಟುಂಬ

Gandhada Gudi pre-release event: ಅ.21ರಂದು ನಡೆಯುವ ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ಗೆ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಿಕೊಳ್ಳಬೇಕು ಎಂದು ಅಶ್ವಿನಿ ಪುನೀತ್​ ರಾಜ್​ಕುಮಾರ್​ ವಿನಂತಿಸಿಕೊಂಡಿದ್ದಾರೆ. ಈ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಅನೇಕ ದಿಗ್ಗಜರು ಆಗಮಿಸುವ ನಿರೀಕ್ಷೆ ಇದೆ.

Puneeth Rajkumar: ‘ಗಂಧದ ಗುಡಿ’ ಪ್ರೀ-ರಿಲೀಸ್ ಇವೆಂಟ್​; ಸಿಎಂಗೆ ಆಹ್ವಾನ ನೀಡಿದ ಡಾ. ರಾಜ್​ಕುಮಾರ್ ಕುಟುಂಬ
ಸಿಎಂಗೆ ಆಹ್ವಾನ ನೀಡಿದ ಡಾ. ರಾಜ್​ಕುಮಾರ್ ಕುಟುಂಬ
TV9 Web
| Edited By: |

Updated on:Oct 21, 2022 | 12:43 PM

Share

ಪುನೀತ್​ ರಾಜ್​ಕುಮಾರ್ ಅವರ ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರ ಅ.28ಕ್ಕೆ ಬಿಡುಗಡೆ ಆಗಲಿದೆ. ಈಗಾಗಲೇ ಇದರ ಟ್ರೇಲರ್ ಸಖತ್​ ಸದ್ದು ಮಾಡುತ್ತಿದೆ. ಈ ಡಾಕ್ಯುಮೆಂಟರಿ​ ಬಿಡುಗಡೆ​ ಆಗುವುದಕ್ಕೂ ಮುನ್ನ ಅದ್ದೂರಿಯಾಗಿ ಪ್ರೀ-ರಿಲೀಸ್​ ಇವೆಂಟ್​ ಮಾಡಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಸಲಕ ತಯಾರಿ ನಡೆಯುತ್ತಿದೆ. ಅ.21ರಂದು ಪ್ರೀ-ರಿಲೀಸ್​ ಕಾರ್ಯಕ್ರಮ ಜರುಗಲಿದೆ. ಅದಕ್ಕಾಗಿ ಗಣ್ಯಾತಿಗಣ್ಯರನ್ನು ಆಹ್ವಾನಿಸಲಾಗುತ್ತಿದೆ. ಇಂದು (ಅ.11) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರಿಗೆ ಆಮಂತ್ರಣ ಪತ್ರಿಕೆ ನೀಡಲಾಗಿದೆ. ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದ್ದಾರೆ. ಈ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ (Ashwini Puneeth Rajkumar), ರಾಘವೇಂದ್ರ ರಾಜ್​ಕುಮಾರ್​, ಯುವ ರಾಜ್​ಕುಮಾರ್​ ಮುಂತಾದವರು ಉಪಸ್ಥಿತರಿದ್ದರು.

ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’. ಹಾಗಾಗಿ ರಾಜ್​ ಕುಟುಂಬದವರು ತುಂಬಾ ಕಾಳಜಿ ವಹಿಸಿ ಇದನ್ನು ದೊಡ್ಡ ಮಟ್ಟದಲ್ಲಿ ರಿಲೀಸ್​ ಮಾಡುತ್ತಿದ್ದಾರೆ. ಸಿನಿಮಾದ ರೀತಿ ಚಿತ್ರಮಂದಿರದಲ್ಲೇ ಇದು ಬಿಡುಗಡೆ ಆಗಲಿದೆ. ಇದರ ಟ್ರೇಲರ್​ ಬಿಡುಗಡೆ ಆದ ಬಳಿಕ ಅನೇಕ ಗಣ್ಯರು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ.

ಅ.21ರಂದು ನಡೆಯಲಿರುವ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಿಕೊಳ್ಳಬೇಕು ಎಂದು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ವಿನಂತಿಸಿಕೊಂಡಿದ್ದಾರೆ. ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ‘ಪುನೀತ ಪರ್ವ’ ಎಂದು ಕರೆಯಲಾಗುತ್ತಿದೆ. ಅದಕ್ಕೆ ಭಾರತೀಯ ಚಿತ್ರರಂಗದ ಅನೇಕ ದಿಗ್ಗಜರು ಆಗಮಿಸುವ ನಿರೀಕ್ಷೆ ಇದೆ. ಈಗಾಗಲೇ ಹಲವರಿಗೆ ಆಮಂತ್ರಣ ಪತ್ರಿಕೆ ನೀಡಲಾಗಿದೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

ಕರುನಾಡಿನ ಅರಣ್ಯ ಸಂಪತ್ತು, ವನ್ಯಜೀವಿಗಳ ಜಗತ್ತು, ಕಾಡಿನ ಜನರ ಬದುಕು ಸೇರಿದಂತೆ ಅನೇಕ ವಿಚಾರಗಳ ಮೇಲೆ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಬೆಳಕು ಚೆಲ್ಲಲಿದೆ. ಇದರ ಟ್ರೇಲರ್​ ಒಂದು ಕೋಟಿಗೂ ಅಧಿಕ ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ.

ವಿಶೇಷವಾಗಿದೆ ಆಮಂತ್ರಣ ಪತ್ರಿಕೆ:

‘ಗಂಧದ ಗುಡಿ’ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ಗಣ್ಯಾತಿಗಣ್ಯರನ್ನು ಆಹ್ವಾನಿಸಲಾಗುತ್ತಿದೆ. ಈಗಾಗಲೇ ಅನೇಕರಿಗೆ ಆಮಂತ್ರಣ ಪತ್ರಿಕೆ ತಲುಪಿದೆ. ಸಂಪೂರ್ಣ ಮರದಿಂದ ಮಾಡಲಾದ ಈ ಪತ್ರಿಕೆಯಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಪುತ್ಥಳಿ ಇದೆ. ಜೊತೆಗೆ ಶ್ರೀಗಂಧದ ತುಂಡಿನ ಮೇಲೆ ಪುನೀತ್ ರಾಜ್​ಕುಮಾರ್​ ಎಂದು ಬರೆದಿರುವ ಹಸ್ತಾಕ್ಷರ ಇದೆ. ಅಮಿತಾಭ್ ಬಚ್ಚನ್​, ರಜನಿಕಾಂತ್​ ಮುಂತಾದ ಗಣ್ಯರಿಗೆ ಇದೇ ಆಹ್ವಾನ ಪತ್ರಿಕೆಯನ್ನು ನೀಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:32 am, Tue, 11 October 22

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು