AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devara Kanasu: ‘ದೇವರ ಕನಸು’ ಚಿತ್ರಕ್ಕೆ ಸಾಥ್​ ನೀಡಿದ ಅಶ್ವಿನಿ ಪುನೀತ್​; ಜುಲೈ 21ಕ್ಕೆ ರಿಲೀಸ್​ ಆಗಲಿದೆ ಮಕ್ಕಳ ಸಿನಿಮಾ

Ashwini Puneeth Rajkumar: ‘ಪಿಆರ್​ಕೆ ಆಡಿಯೋ’ ಮೂಲಕ ‘ದೇವರ ಕನಸು’ ಚಿತ್ರದ ಹಾಡುಗಳು ಮತ್ತು ಟ್ರೇಲರ್​ ಬಿಡುಗಡೆ ಆಗಿವೆ. ಈ ಮಕ್ಕಳ ಚಿತ್ರದ ಟ್ರೇಲರ್​ ಗಮನ ಸೆಳೆಯುತ್ತಿದೆ.

Devara Kanasu: ‘ದೇವರ ಕನಸು’ ಚಿತ್ರಕ್ಕೆ ಸಾಥ್​ ನೀಡಿದ ಅಶ್ವಿನಿ ಪುನೀತ್​; ಜುಲೈ 21ಕ್ಕೆ ರಿಲೀಸ್​ ಆಗಲಿದೆ ಮಕ್ಕಳ ಸಿನಿಮಾ
‘ದೇವರ ಕನಸು’ ಟ್ರೇಲರ್​ ಬಿಡುಗಡೆ ಕಾರ್ಯಕ್ರಮ
ಮದನ್​ ಕುಮಾರ್​
|

Updated on: Jul 08, 2023 | 7:39 PM

Share

ಪುನೀತ್​ ರಾಜ್​ಕುಮಾರ್​ ಅವರು ಚಿತ್ರರಂಗದಲ್ಲಿ ಹೊಸಬರಿಗೆ ಬೆಂಬಲ ನೀಡುತ್ತಿದ್ದರು. ಅವರು ಆರಂಭಿಸಿದ ‘ಪಿಆರ್​ಕೆ ಆಡಿಯೋ’ ಮತ್ತು ‘ಪಿಆರ್​ಕೆ ಪ್ರೊಡಕ್ಷನ್ಸ್​’ ಸಂಸ್ಥೆಗಳನ್ನು ಈಗ ಅವರ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ (Ashwini Puneeth Rajkumar) ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಅಶ್ವಿನಿ ಕೂಡ ಹೊಸ ತಂಡಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ. ಈಗ ಅವರು ‘ದೇವರ ಕನಸು’ (Devara Kanasu) ಚಿತ್ರಕ್ಕೆ ಸಾತ್​ ನೀಡಿದ್ದಾರೆ. ಇದು ಮಕ್ಕಳ ಸಿನಿಮಾ ಎಂಬುದು ವಿಶೇಷ. ಇತ್ತೀಚೆಗೆ ಈ ಚಿತ್ರದ ಟ್ರೇಲರ್​ ಬಿಡುಗಡೆ ಕಾರ್ಯಕ್ರಮ ನಡೆಯಿತು. ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಟ್ರೇಲರ್​ ಅನಾವರಣ ಮಾಡುವ ಮೂಲಕ ‘ದೇವರ ಕನಸು’ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಇತರೆ ಕಮರ್ಷಿಯಲ್​ ಸಿನಿಮಾಗಳಿಗೆ ಹೋಲಿಸಿದರೆ ಮಕ್ಕಳ ಸಿನಿಮಾಗಳ ಸಂಖ್ಯೆ ವಿರಳ. ಅಂಥ ಒಂದು ಅಪರೂಪದ ಪ್ರಯತ್ನ ಮಾಡಿದ್ದಾರೆ ನಿರ್ದೇಶಕ ಸುರೇಶ್ ಲಕ್ಕೂರ್. ‘ದೇವರ ಕನಸು’ ಸಿನಿಮಾಗೆ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಚಿತ್ರವೀಗ ಬಿಡುಗಡೆಗೆ ಸಜ್ಜಾಗುತ್ತಿದೆ. ‘ಪಿಆರ್​ಕೆ ಆಡಿಯೋ’ ಮೂಲಕ ಹಾಡುಗಳು ಬಿಡುಗಡೆ ಆಗಿದೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಟ್ರೇಲರ್​ ಅನಾವರಣ ಮಾಡಿರುವುದರಿಂದ ಚಿತ್ರದ ಬಲ ಹೆಚ್ಚಾಗಿದೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ 3 ಸಾಂಗ್​ಗಳನ್ನು ಪ್ರದರ್ಶಿಸಲಾಯಿತು. ಅದರೊಂದಿಗೆ ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿತು.

ಇದನ್ನೂ ಓದಿ: Ashwini Puneeth Rajkumar: ಡಿಸಿಎಂ ಡಿಕೆ ಶಿವಕುಮಾರ್​ ನಿವಾಸಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​, ರಾಘಣ್ಣ

ನಿರ್ದೇಶಕ ಸುರೇಶ್ ಲಕ್ಕೂರ್ ಅವರು ನ್ಯೂಯಾರ್ಕ್ ಫಿಲ್ಮ್​ ಅಕಾಡೆಮಿಯಲ್ಲಿ ಅಧ್ಯಯನ ‌ಮಾಡಿದ್ದಾರೆ. ಅವರು ನಿರ್ದೇಶನ ಮಾಡಿರುವ ಮೊದಲ ಚಿತ್ರವೇ ‘ದೇವರ ಕನಸು’. ಈ ಮಕ್ಕಳ ಸಿನಿಮಾ ಈಗಾಗಲೇ ಕಾನ್​ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರದರ್ಶನ ಕಂಡಿದೆ. ಇನ್ನೂ ಒಂದಷ್ಟು ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಪ್ರಶಂಸೆಗೆ ಪಾತ್ರವಾಗಿದೆ ಎಂದು ಚಿತ್ರತಂಡದವರು ಹೇಳಿಕೊಂಡಿದ್ದಾರೆ.

‘ದೇವ ಎನ್ನುವುದು ಈ ಸಿನಿಮಾ ಮುಖ್ಯ ಪಾತ್ರಧಾರಿಯ ಹೆಸರು. ಮಾಸ್ಟರ್ ದೀಪಕ್ ಅವರು ಈ ಪಾತ್ರವನ್ನು ನಿಭಾಯಿದ್ದಾರೆ. ಈ ಹುಡುಗನ ಕನಸು ನನಸಾಗುತ್ತೋ ಇಲ್ಲವೋ ಎಂಬುದೇ ಸಿನಿಮಾದ ಕಥೆ. ‌ದೀಪಕ್, ಅರುಷಿ ವೇದಿಕಾ, ಅಮೂಲ್ಯ, ಮಾಕ್ ಮಣಿ ಅವರು ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಜುಲೈ 21ರಂದು ನಮ್ಮ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ’ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ನಿರ್ದೇಶಕ ಸುರೇಶ್ ಲಕ್ಕೂರ್.

ಜಯ್ ಕುಮಾರ್ ಮತ್ತು ಶೇಖರ್ ಅವರು ‘ದೇವರ ಕನಸು’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸುನೀಲ್ ರಾಮ್ ಅವರು ಕಥೆ ಬರೆದಿದ್ದು, ಹಾಡುಗಳು ಹಾಗೂ ಸಂಭಾಷಣೆಯನ್ನು ಲಿಂಗರಾಜ್ ಇತಿಹಾಸ್​ ಬರೆದಿದ್ದಾರೆ. ಸ್ಯಾಂಡಿ ಸಂಗೀತ ನಿರ್ದೇಶನ, ಜಿಷ್ಣು ಸೇನ್​ ಅವರ ಸಂಕಲನ ಈ ಸಿನಿಮಾಗಿದೆ. ಮಕ್ಕಳ ಚಿತ್ರದ ಟ್ರೇಲರ್​ ಗಮನ ಸೆಳೆಯುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್