AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashwini Puneeth Rajkumar: ಪುನೀತ್​ ರಾಜ್​ಕುಮಾರ್​ ಹಾಡಿದ ‘ಅಪರೂಪ’ದ ಸಾಂಗ್​ ರಿಲೀಸ್​ ಮಾಡಿದ ಪತ್ನಿ ಅಶ್ವಿನಿ

Puneeth Rajkumar Last Song: ‘ಅಪರೂಪ’ ಸಿನಿಮಾದ ‘ಯೂ ಆರ್​ ಮೈ ಕರೀನಾ..’ ಹಾಡಿಗೆ ಪುನೀತ್​ ರಾಜ್​ಕುಮಾರ್​ ಧ್ವನಿ ನೀಡಿದ್ದರು. ಆ ಗೀತೆಯನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಬಿಡುಗಡೆ ಮಾಡಿದ್ದಾರೆ.

Ashwini Puneeth Rajkumar: ಪುನೀತ್​ ರಾಜ್​ಕುಮಾರ್​ ಹಾಡಿದ ‘ಅಪರೂಪ’ದ ಸಾಂಗ್​ ರಿಲೀಸ್​ ಮಾಡಿದ ಪತ್ನಿ ಅಶ್ವಿನಿ
ಪುನೀತ್​ ರಾಜ್​ಕುಮಾರ್
TV9 Web
| Edited By: |

Updated on:Jul 15, 2022 | 1:53 PM

Share

ನಟ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರು ಗಾಯಕನಾಗಿಯೂ ಜನಮನ ಗೆದ್ದಿದ್ದರು. ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದಿರುವುದು ನೋವಿನ ಸಂಗತಿ. ನಿಧನರಾಗುವುದಕ್ಕೂ ಮುನ್ನ ಅವರು ಕೆಲವು ಗೀತೆಗಳಿಗೆ ಧ್ವನಿ ನೀಡಿದ್ದರು. ಆ ಪೈಕಿ ‘ಅಪರೂಪ’ ಸಿನಿಮಾದ ಹೊಸ ಸಾಂಗ್​ ಬಿಡುಗಡೆ ಆಗಿದೆ. ಇದು ಪುನೀತ್​ ರಾಜ್​ಕುಮಾರ್​ ಹಾಡಿದ ಕೊನೆಯ ಗೀತೆ ಎನ್ನಲಾಗಿದೆ. ‘ಯೂ ಆರ್​ ಮೈ ಕರೀನಾ..’ ಎಂದು ಅವರು ಹಾಡಿರುವ ಈ ಸಾಂಗ್​ ಅನ್ನು ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾ​ರ್ (Ashwini Puneeth Rajkumar)​ ಅವರು ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಚಿತ್ರತಂಡಕ್ಕೆ ಅವರು ಶುಭ ಕೋರಿದ್ದಾರೆ. ‘ಅರಸು’ ಸಿನಿಮಾ ಖ್ಯಾತಿಯ ನಿರ್ದೇಶಕ ಮಹೇಶ್​ ಬಾಬು ಅವರು ‘ಅಪರೂಪ’ (Aparoopa Movie) ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸುಘೋಷ್​, ಹೃತಿಕಾ ಅವರು ಈ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ.

ಅನೇಕ ಕಾರಣಗಳಿಂದ ‘ಅಪರೂಪ’ ಸಿನಿಮಾ ಗಮನ ಸೆಳೆಯುತ್ತಿದೆ. ಮೆರವಣಿಗೆ, ಚಿರು, ಕ್ರೇಜಿ ಬಾಯ್​, ಅರಸು ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಮಹೇಶ್​ ಬಾಬು ಅವರು ಈಗ ‘ಅಪರೂಪ’ ಸಿನಿಮಾ ಮೂಲಕ ಹೊಸ ಕಥೆಯನ್ನು ಪ್ರೇಕ್ಷಕರ ಮುಂದೆ ಇಡಲು ಸಜ್ಜಾಗಿದ್ದಾರೆ. ಈ ಚಿತ್ರಕ್ಕಾಗಿ ಪುನೀತ್​ ರಾಜ್​ಕುಮಾರ್​ ಹಾಡಿರುವ ‘ಯೂ ಆರ್​ ಮೈ ಕರೀನಾ..’ ಸಾಂಗ್​ ಕೇಳಿ ಅಭಿಮಾನಿಗಳು ಖುಷಿಪಡುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರಿಂದ ಸಾಂಗ್​ ಹಾಡಿಸಬೇಕು ಎಂಬ ಆಸೆ ಬಹುತೇಕ ಚಿತ್ರತಂಡಗಳಿಗೆ ಇರುತ್ತಿತ್ತು. ಆದರೆ ಅವಕಾಶ ಒದಗಿಬಂದಿದ್ದು ಕೆಲವು ಸಿನಿಮಾಗಳಿಗೆ ಮಾತ್ರ. ಆ ಪೈಕಿ ‘ಅಪರೂಪ’ ಟೀಮ್​ ಕೂಡ ಲಕ್ಕಿ ಎನ್ನಬೇಕು. ತಮ್ಮ ಸಿನಿಮಾದಲ್ಲಿ ಅಪ್ಪು ಧ್ವನಿ ಇದೆ ಎಂಬುದು ಈ ಚಿತ್ರತಂಡದ ಪಾಲಿಗೆ ಎಮೋಷನಲ್​ ವಿಚಾರ. ಸದ್ಯ ಬಿಡುಗಡೆ ಆಗಿರುವ ಈ ಹಾಡಿಗೆ ಪುನೀತ್​ ಜೊತೆ ಗಾಯಕಿ ಸಂಗೀತಾ ರವೀಂದ್ರನಾಥ್​ ಕೂಡ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ
Image
ನಾನ್​-ವೆಜ್​​ ವಿಚಾರದಲ್ಲಿ ಅನು ಪ್ರಭಾಕರ್​ಗೆ ರೇಗಿಸಿದ್ದ ಪುನೀತ್​ ರಾಜ್​ಕುಮಾರ್​; ನೆನಪಿನ ಪುಟ ತೆರೆದ ನಟಿ
Image
ಪುನೀತ್​ ರಾಜ್​ಕುಮಾರ್​ ಬ್ಯಾನರ್​ ಸಲುವಾಗಿ ಫ್ಯಾನ್ಸ್​ ಮತ್ತು ಗ್ರಾಮಸ್ಥರ ನಡುವೆ ಮಾರಾಮಾರಿ; ಏನಿದು ಕಿರಿಕ್​?
Image
ಪುನೀತ್​ ರಾಜ್​ಕುಮಾರ್​ ಫೋಟೋ ಹಿಡಿದು ಕೆಂಡ ಹಾಯ್ದ ಅಭಿಮಾನಿ; ಎಲ್ಲೆಲ್ಲೂ ಅಪ್ಪು ಸ್ಮರಣೆ
Image
ಅಪ್ಪು​ ನಿವಾಸಕ್ಕೆ ರಾಹುಲ್​ ಗಾಂಧಿ ಭೇಟಿ; ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆ ಮಾತುಕತೆ

‘ಸುಗ್ಗಿ’ ಸಿನಿಮಾಸ್​ ಬ್ಯಾನರ್​ ಮೂಲಕ ‘ಅಪರೂಪ’ ಚಿತ್ರ ಮೂಡಿಬಂದಿದೆ. ಪ್ರಜ್ವಲ್​ ಪೈ ಸಂಗೀತ ನಿರ್ದೇಶನ ಮಾಡಿದ್ದಾರೆ. ಡಾ. ವಿ. ನಾಗೇಂದ್ರ ಪ್ರಸಾದ್​ ಲೇಖನಿಯಲ್ಲಿ ‘ಯೂ ಆರ್​ ಮೈ ಕರೀನಾ..’ ಹಾಡು ಮೂಡಿಬಂದಿದೆ. ಭಜರಂಗಿ ಮೋಹನ್​ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಗೀತೆಯಲ್ಲಿ ಸುಘೋಷ್​ ಮತ್ತು ಹೃತಿಕಾ ಭರ್ಜರಿಯಾಗಿ ಸ್ಟೆಪ್​ ಹಾಕಿದ್ದಾರೆ.

Published On - 1:27 pm, Fri, 15 July 22

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು