AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashwini Puneeth Rajkumar: ಪುನೀತ್​ ರಾಜ್​ಕುಮಾರ್​ ಹಾಡಿದ ‘ಅಪರೂಪ’ದ ಸಾಂಗ್​ ರಿಲೀಸ್​ ಮಾಡಿದ ಪತ್ನಿ ಅಶ್ವಿನಿ

Puneeth Rajkumar Last Song: ‘ಅಪರೂಪ’ ಸಿನಿಮಾದ ‘ಯೂ ಆರ್​ ಮೈ ಕರೀನಾ..’ ಹಾಡಿಗೆ ಪುನೀತ್​ ರಾಜ್​ಕುಮಾರ್​ ಧ್ವನಿ ನೀಡಿದ್ದರು. ಆ ಗೀತೆಯನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಬಿಡುಗಡೆ ಮಾಡಿದ್ದಾರೆ.

Ashwini Puneeth Rajkumar: ಪುನೀತ್​ ರಾಜ್​ಕುಮಾರ್​ ಹಾಡಿದ ‘ಅಪರೂಪ’ದ ಸಾಂಗ್​ ರಿಲೀಸ್​ ಮಾಡಿದ ಪತ್ನಿ ಅಶ್ವಿನಿ
ಪುನೀತ್​ ರಾಜ್​ಕುಮಾರ್
TV9 Web
| Edited By: |

Updated on:Jul 15, 2022 | 1:53 PM

Share

ನಟ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರು ಗಾಯಕನಾಗಿಯೂ ಜನಮನ ಗೆದ್ದಿದ್ದರು. ಅವರು ಹೃದಯಾಘಾತದಿಂದ ಕೊನೆಯುಸಿರು ಎಳೆದಿರುವುದು ನೋವಿನ ಸಂಗತಿ. ನಿಧನರಾಗುವುದಕ್ಕೂ ಮುನ್ನ ಅವರು ಕೆಲವು ಗೀತೆಗಳಿಗೆ ಧ್ವನಿ ನೀಡಿದ್ದರು. ಆ ಪೈಕಿ ‘ಅಪರೂಪ’ ಸಿನಿಮಾದ ಹೊಸ ಸಾಂಗ್​ ಬಿಡುಗಡೆ ಆಗಿದೆ. ಇದು ಪುನೀತ್​ ರಾಜ್​ಕುಮಾರ್​ ಹಾಡಿದ ಕೊನೆಯ ಗೀತೆ ಎನ್ನಲಾಗಿದೆ. ‘ಯೂ ಆರ್​ ಮೈ ಕರೀನಾ..’ ಎಂದು ಅವರು ಹಾಡಿರುವ ಈ ಸಾಂಗ್​ ಅನ್ನು ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾ​ರ್ (Ashwini Puneeth Rajkumar)​ ಅವರು ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಚಿತ್ರತಂಡಕ್ಕೆ ಅವರು ಶುಭ ಕೋರಿದ್ದಾರೆ. ‘ಅರಸು’ ಸಿನಿಮಾ ಖ್ಯಾತಿಯ ನಿರ್ದೇಶಕ ಮಹೇಶ್​ ಬಾಬು ಅವರು ‘ಅಪರೂಪ’ (Aparoopa Movie) ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸುಘೋಷ್​, ಹೃತಿಕಾ ಅವರು ಈ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ.

ಅನೇಕ ಕಾರಣಗಳಿಂದ ‘ಅಪರೂಪ’ ಸಿನಿಮಾ ಗಮನ ಸೆಳೆಯುತ್ತಿದೆ. ಮೆರವಣಿಗೆ, ಚಿರು, ಕ್ರೇಜಿ ಬಾಯ್​, ಅರಸು ಮುಂತಾದ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಮಹೇಶ್​ ಬಾಬು ಅವರು ಈಗ ‘ಅಪರೂಪ’ ಸಿನಿಮಾ ಮೂಲಕ ಹೊಸ ಕಥೆಯನ್ನು ಪ್ರೇಕ್ಷಕರ ಮುಂದೆ ಇಡಲು ಸಜ್ಜಾಗಿದ್ದಾರೆ. ಈ ಚಿತ್ರಕ್ಕಾಗಿ ಪುನೀತ್​ ರಾಜ್​ಕುಮಾರ್​ ಹಾಡಿರುವ ‘ಯೂ ಆರ್​ ಮೈ ಕರೀನಾ..’ ಸಾಂಗ್​ ಕೇಳಿ ಅಭಿಮಾನಿಗಳು ಖುಷಿಪಡುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರಿಂದ ಸಾಂಗ್​ ಹಾಡಿಸಬೇಕು ಎಂಬ ಆಸೆ ಬಹುತೇಕ ಚಿತ್ರತಂಡಗಳಿಗೆ ಇರುತ್ತಿತ್ತು. ಆದರೆ ಅವಕಾಶ ಒದಗಿಬಂದಿದ್ದು ಕೆಲವು ಸಿನಿಮಾಗಳಿಗೆ ಮಾತ್ರ. ಆ ಪೈಕಿ ‘ಅಪರೂಪ’ ಟೀಮ್​ ಕೂಡ ಲಕ್ಕಿ ಎನ್ನಬೇಕು. ತಮ್ಮ ಸಿನಿಮಾದಲ್ಲಿ ಅಪ್ಪು ಧ್ವನಿ ಇದೆ ಎಂಬುದು ಈ ಚಿತ್ರತಂಡದ ಪಾಲಿಗೆ ಎಮೋಷನಲ್​ ವಿಚಾರ. ಸದ್ಯ ಬಿಡುಗಡೆ ಆಗಿರುವ ಈ ಹಾಡಿಗೆ ಪುನೀತ್​ ಜೊತೆ ಗಾಯಕಿ ಸಂಗೀತಾ ರವೀಂದ್ರನಾಥ್​ ಕೂಡ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ
Image
ನಾನ್​-ವೆಜ್​​ ವಿಚಾರದಲ್ಲಿ ಅನು ಪ್ರಭಾಕರ್​ಗೆ ರೇಗಿಸಿದ್ದ ಪುನೀತ್​ ರಾಜ್​ಕುಮಾರ್​; ನೆನಪಿನ ಪುಟ ತೆರೆದ ನಟಿ
Image
ಪುನೀತ್​ ರಾಜ್​ಕುಮಾರ್​ ಬ್ಯಾನರ್​ ಸಲುವಾಗಿ ಫ್ಯಾನ್ಸ್​ ಮತ್ತು ಗ್ರಾಮಸ್ಥರ ನಡುವೆ ಮಾರಾಮಾರಿ; ಏನಿದು ಕಿರಿಕ್​?
Image
ಪುನೀತ್​ ರಾಜ್​ಕುಮಾರ್​ ಫೋಟೋ ಹಿಡಿದು ಕೆಂಡ ಹಾಯ್ದ ಅಭಿಮಾನಿ; ಎಲ್ಲೆಲ್ಲೂ ಅಪ್ಪು ಸ್ಮರಣೆ
Image
ಅಪ್ಪು​ ನಿವಾಸಕ್ಕೆ ರಾಹುಲ್​ ಗಾಂಧಿ ಭೇಟಿ; ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆ ಮಾತುಕತೆ

‘ಸುಗ್ಗಿ’ ಸಿನಿಮಾಸ್​ ಬ್ಯಾನರ್​ ಮೂಲಕ ‘ಅಪರೂಪ’ ಚಿತ್ರ ಮೂಡಿಬಂದಿದೆ. ಪ್ರಜ್ವಲ್​ ಪೈ ಸಂಗೀತ ನಿರ್ದೇಶನ ಮಾಡಿದ್ದಾರೆ. ಡಾ. ವಿ. ನಾಗೇಂದ್ರ ಪ್ರಸಾದ್​ ಲೇಖನಿಯಲ್ಲಿ ‘ಯೂ ಆರ್​ ಮೈ ಕರೀನಾ..’ ಹಾಡು ಮೂಡಿಬಂದಿದೆ. ಭಜರಂಗಿ ಮೋಹನ್​ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಗೀತೆಯಲ್ಲಿ ಸುಘೋಷ್​ ಮತ್ತು ಹೃತಿಕಾ ಭರ್ಜರಿಯಾಗಿ ಸ್ಟೆಪ್​ ಹಾಕಿದ್ದಾರೆ.

Published On - 1:27 pm, Fri, 15 July 22

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್