AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashwini Puneeth Rajkumar: ಸಿನಿಮಾ ಮಾಡಲು ಕಾದಂಬರಿ ಓದುತ್ತಿರುವ ಅಶ್ವಿನಿ; ಪಾರ್ವತಮ್ಮ ಸಾಗಿದ ಹಾದಿಯಲ್ಲಿ ದೊಡ್ಮನೆ ಸೊಸೆಯ ಸಿನಿಪಯಣ

PRK Productions: ಕಥೆಗಳನ್ನು ಆಯ್ಕೆ ಮಾಡುವುದು, ಸ್ಕ್ರಿಪ್ಟ್​ ಓದುವುದು ಸೇರಿದಂತೆ ಅನೇಕ ಕೆಲಸಗಳಲ್ಲಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ನಿರತರಾಗಿದ್ದಾರೆ. ಕನ್ನಡದ ಸಾಹಿತ್ಯ ಕೃತಿಗಳನ್ನು ಆಧರಿಸಿ ಸಿನಿಮಾ ಮಾಡಬೇಕು ಎಂಬ ಆಸಕ್ತಿ ಅವರಿಗೆ ಮೂಡಿದೆ.

Ashwini Puneeth Rajkumar: ಸಿನಿಮಾ ಮಾಡಲು ಕಾದಂಬರಿ ಓದುತ್ತಿರುವ ಅಶ್ವಿನಿ; ಪಾರ್ವತಮ್ಮ ಸಾಗಿದ ಹಾದಿಯಲ್ಲಿ ದೊಡ್ಮನೆ ಸೊಸೆಯ ಸಿನಿಪಯಣ
ಅಶ್ವಿನಿ ಪುನೀತ್​ ರಾಜ್​ಕುಮಾರ್​
ಮದನ್​ ಕುಮಾರ್​
|

Updated on: Jul 25, 2023 | 4:49 PM

Share

ಡಾ. ರಾಜ್​ಕುಮಾರ್ ಅವರದ್ದು ಸಿನಿಮಾಗೆ ಮೀಸಲಾದ ಕುಟುಂಬ. ಅವರ ಫ್ಯಾಮಿಲಿಯ ಬಹುತೇಕರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ರಾಜ್​ಕುಮಾರ್​ ಅವರು ಹೀರೋ ಆಗಿ ಮಿಂಚಿದರು. ಅವರ ಹಿಂದಿನ ಶಕ್ತಿಯಾಗಿ ಪಾರ್ವತಮ್ಮ ಇದ್ದರು. ನಿರ್ಮಾಪಕಿಯಾಗಿ ಪಾರ್ವತಮ್ಮ ರಾಜ್​ಕುಮಾರ್​ (Parvathamma Rajkumar) ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಕನ್ನಡ ಸಾಹಿತ್ಯದ ಬಗ್ಗೆ ಅವರಿಗೆ ಬಹಳ ಆಸಕ್ತಿ ಇತ್ತು. ತಾವು ಓದಿದ ಕಾದಂಬರಿಯನ್ನು (Kannada Novels) ಇಟ್ಟುಕೊಂಡು ಅವರು ಸಿನಿಮಾ ಮಾಡುತ್ತಿದ್ದರು. ಈಗ ದೊಡ್ಮನೆಯ ಸೊಸೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ (Ashwini Puneeth Rajkumar) ಕೂಡ ಪಾರ್ವತಮ್ಮನ ಹಾದಿಯಲ್ಲೇ ಸಾಗುತ್ತಿದ್ದಾರೆ. ಸಿನಿಮಾ ಮಾಡುವ ಸಲುವಾಗಿ ಅವರು ಕಥೆ, ಕಾದಂಬರಿಗಳನ್ನು ಓದುತ್ತಿದ್ದಾರೆ ಎಂಬುದು ವಿಶೇಷ.

ಹೊಸಬರಿಗೆ ಅವಕಾಶ ನೀಡಬೇಕು ಎಂಬ ಕಾರಣದಿಂದ ಪುನೀತ್​ ರಾಜ್​ಕುಮಾರ್​ ಅವರು ‘ಪಿಆರ್​ಕೆ ಪ್ರೊಡಕ್ಷನ್ಸ್​’ ಸಂಸ್ಥೆ ಆರಂಭಿಸಿದರು. ಈಗ ಅದನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್​ ಅವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಸಿನಿಮಾ ನಿರ್ಮಾಣದಲ್ಲಿ ಅವರು ಸಂಪೂರ್ಣ ತೊಡಗಿಕೊಂಡಿದ್ದಾರೆ. ಕಥೆಗಳನ್ನು ಆಯ್ಕೆ ಮಾಡುವುದು, ಸ್ಕ್ರಿಪ್ಟ್​ ಓದುವುದು ಸೇರಿದಂತೆ ಅನೇಕ ಕೆಲಸಗಳಲ್ಲಿ ಅಶ್ವಿನಿ ನಿರತರಾಗಿದ್ದಾರೆ. ಸಾಹಿತ್ಯ ಕೃತಿಗಳನ್ನು ಆಧರಿಸಿ ಸಿನಿಮಾ ಮಾಡಬೇಕು ಎಂಬ ಆಸಕ್ತಿ ಅವರಿಗೆ ಮೂಡಿದೆ. ಆ ಬಗ್ಗೆ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಅಪರೂಪಕ್ಕೆ ಮೈಕ್ ಹಿಡಿದು ಮಾತನಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್ ಏನಂದರು?

‘ಒಳ್ಳೆಯ ಕಥೆ ಇದ್ದರೆ ಸಾಹಿತ್ಯ ಕೃತಿ ಆಧರಿಸಿ ಸಿನಿಮಾ ನಿರ್ಮಾಣ ಮಾಡುತ್ತೇನೆ. ನಾನು ಈಗ ಕನ್ನಡದ ಎರಡು-ಮೂರು ಕಾದಂಬರಿಗಳನ್ನು ಓದುತ್ತಿದ್ದೇನೆ. ಅಮ್ಮ (ಪಾರ್ವತಮ್ಮ ರಾಜ್​ಕುಮಾರ್​) ಕೂಡ ಹಾಗೇ ಮಾಡುತ್ತಿದ್ದರು. ಕೆಲವು ಬಿಗ್​ ಬಜೆಟ್​ ಸಿನಿಮಾಗಳು ಬಂದಿವೆ. ಆದರೆ ರಿಸ್ಕ್​ ಫ್ಯಾಕ್ಟರ್​ ಇರುವುದರಿಂದ ಅದರ ಬಗ್ಗೆ ಗಮನ ಹರಿಸಿಲ್ಲ. ಸಿನಿಮಾ ಮಾಡುವ ಸಲುವಾಗಿ ಹೊಸ ಲೇಖಕಿಯೊಬ್ಬರ ಕಾದಂಬರಿಯನ್ನು ಈಗ ಓದುತ್ತಿದ್ದೇನೆ. ಅದನ್ನು ಯಾರು ನಿರ್ದೇಶಿಸಬಹುದು ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ’ ಎಂದು ಅಶ್ವಿನಿ ಪುನೀತ್ ರಾಜ್​ಕುಮಾರ್​ ಅವರು ಹೇಳಿದ್ದಾರೆ. ಆದರೆ ಆ ಕಾದಂಬರಿ ಯಾವುದು? ಲೇಖಕಿ ಯಾರು ಎಂಬ ಮಾಹಿತಿಯನ್ನು ಅವರು ಈಗಲೇ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ: ಅಂಗಾಂಗದಾನ ಕ್ಯಾಂಪೇನ್: ರಾಯಭಾರಿ ಆಗಲು ಅಶ್ವಿನಿ ಪುನೀತ್​ಗೆ ಆಹ್ವಾನ ನೀಡಿದ ರಾಜ್ಯ ಸರ್ಕಾರ

‘ಪಿಆರ್​ಕೆ ಪ್ರೊಡಕ್ಷನ್ಸ್​’ ಮೂಲಕ ನಿರ್ಮಾಣ ಆಗಿರುವ ‘ಆಚಾರ್​ ಆ್ಯಂಡ್​ ಕೋ’ ಸಿನಿಮಾ ಜುಲೈ 28ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ರೆಟ್ರೋ ಕಾಲದ ಕಥೆ ಇದೆ. ಸಿನಿಮಾ ನೋಡಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ತುಂಬ ಇಷ್ಟ ಆಗಿದೆ. ಸಿಂಧು ಶ್ರೀನಿವಾಸಮೂರ್ತಿ ಅವರ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದೆ. ನಿರ್ದೇಶಕಿ ಸೇರಿದಂತೆ ಈ ಸಿನಿಮಾದ ಅನೇಕ ತಂತ್ರಜ್ಞರು ಮಹಿಳೆಯರೇ ಆಗಿರುವುದು ವಿಶೇಷ. ಬಿಂದುಮಾಲಿನಿ ನಾರಾಯಣಸ್ವಾಮಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಇಂಚರಾ ಸುರೇಶ್ ಅವರು ಕಾಸ್ಟ್ಯೂಮ್​ ಡಿಸೈನ್​ ಮಾಡಿದ್ದು, ಸೌಂಡ್ ಇಂಜಿನಿಯರ್ ಆಗಿ ಹೇಮಾ ಸುವರ್ಣ ಅವರು ‘ಆಚಾರ್​ ಆ್ಯಂಡ್​ ಕೋ’ ಸಿನಿಮಾಗೆ ಕೆಲಸ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ