AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಸ್ತಕ ರೂಪದಲ್ಲಿ ಬರ್ತಿದೆ ಪುನೀತ್ ಜೀವನ; ‘ಅಪ್ಪು’ ಹೆಸರಲ್ಲೇ ಪುಸ್ತಕ ರಿಲೀಸ್  

ಪುನೀತ್ ರಾಜಕುಮಾರ್ ಅವರ ಜೀವನ ಚರಿತ್ರೆ "ಅಪ್ಪು" ಪುಸ್ತಕವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ಪ್ರಕೃತಿ ಬನವಾಸಿ ಅವರು ಬರೆದಿದ್ದಾರೆ. ಇದು ಅಪ್ಪು ಅವರ ಜೀವನದ ಬಹುಮುಖ್ಯ ಘಟನೆಗಳನ್ನು ವಿವರಿಸುತ್ತದೆ. ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಈ ಸುದ್ದಿಯನ್ನು ಘೋಷಿಸಲಾಗಿದೆ .

ಪುಸ್ತಕ ರೂಪದಲ್ಲಿ ಬರ್ತಿದೆ ಪುನೀತ್ ಜೀವನ; ‘ಅಪ್ಪು’ ಹೆಸರಲ್ಲೇ ಪುಸ್ತಕ ರಿಲೀಸ್  
ಅಶ್ವಿನಿ
ರಾಜೇಶ್ ದುಗ್ಗುಮನೆ
|

Updated on:Mar 18, 2025 | 11:54 AM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ನಮ್ಮನ್ನು ಅಗಲಿದ್ದಾರೆ. ಆದರೆ, ಕೆಲಸಗಳ ಮೂಲಕ, ಸಿನಿಮಾಗಳ ಮೂಲಕ ಅವರು ಇನ್ನೂ ಜೀವಂತವಾಗಿ ಇದ್ದಾರೆ. ಅದೇ ರೀತಿ ಅವರನ್ನು ನೆನಪಿಸಿಕೊಳ್ಳಲು ನಾನಾ ರೀತಿಯ ಕೆಲಸಗಳನ್ನು ಮಾಡಲಾಗುತ್ತಿದೆ. ಈಗ ಪುನೀತ್ ಬಯೋಗ್ರಫಿ ಬರೆಯಲಾಗಿದೆ. ಈ ಬಗ್ಗೆ ಅಪ್ಪು ಜನ್ಮದಿನದ (ಮಾರ್ಚ್ 17) ಪ್ರಯುಕ್ತ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಘೋಷಣೆ ಮಾಡಿದ್ದಾರೆ. ಈ ವಿಚಾರ ತಿಳಿದು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಇದರ ಅಧಿಕೃತ ದಿನಾಂಕ ಇನ್ನಷ್ಟೇ ತಿಳಿಯಬೇಕಿದೆ.

ಪುನೀತ್ ಎನ್ನುವುದಕ್ಕಿಂತ ಅಪ್ಪು ಎಂಬುದೇ ಹೆಚ್ಚು ಸೂಕ್ತ ಎನಿಸುತ್ತದೆ. ಈ ಕಾರಣಕ್ಕೆ ಫ್ಯಾನ್ಸ್ ಕೂಡ ಅವರನ್ನು ಅಪ್ಪು ಎಂದೇ ಕರೆಯುತ್ತಾರೆ. ಹೀಗಾಗಿ ‘ಅಪ್ಪು’ ಅನ್ನೋ ಹೆಸರಿನಲ್ಲೇ ಪುನೀತ್ ಬಯೋಗ್ರಫಿ ಬರೆಯಲಾಗಿದೆ. ಅಶ್ವಿನಿ ಮತ್ತು ಪ್ರಕೃತಿ ಬನವಾಸಿ ಒಟ್ಟಾಗಿ ಸೇರಿ ಈ ಪುಸ್ತಕ ಬರೆದಿದ್ದಾರೆ. ಎರಡು ವರ್ಷಗಳ ಪ್ರಯತ್ನದಿಂದ ಈ ಪುಸ್ತಕ ಹೊರ ಬಂದಿದೆ. ಈ ಪುಸ್ತಕದ ಕವರ್ ಪೇಜ್ ಹೇಗಿದೆ ಎಂಬುದನ್ನು ರಿವೀಲ್ ಮಾಡಲಾಗಿದೆ.

ಇದನ್ನೂ ಓದಿ
Image
ಪುನೀತ್ ರಾಜ್​ಕುಮಾರ್ 50ನೇ ವರ್ಷದ ಜನ್ಮದಿನ; ಎಂದಿಗೂ ಕಮ್ಮಿ ಆಗಲ್ಲ ಅಭಿಮಾನ
Image
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
Image
ಪುನೀತ್ ಕಪ್ಪಿದ್ದಾರೆ ಎಂದವರಿಗೆ ಖಡಕ್ ಉತ್ತರ ಕೊಟ್ಟಿದ್ದ ರಾಜ್​ಕುಮಾರ್
Image
ಪುರಿ ಜಗನ್ನಾಥ ದೇವಾಲಯಕ್ಕೆ ಪ್ರವೇಶಿಸಲು ನಿರಾಕರಿಸಿದ್ದ ಪುನೀತ್, ಕಾರಣ?

ಅಪ್ಪು ಬರ್ತ್​ಡೇ ಸಂದರ್ಭದಲ್ಲಿ ಅಶ್ವಿನಿ ಹಾಗೂ ಮಕ್ಕಳು ಪುಸ್ತಕ ಹಿಡಿದು ಪೋಸ್ ಕೊಟ್ಟಿದ್ದಾರೆ. ಅಪ್ಪು ಕಲರ್​ಫುಲ್ ಜೀವನವನ್ನು ತೆರೆದಿಡುವ ಪುಸ್ತಕಕ್ಕೆ ಬ್ಲ್ಯಾಕ್ ಆ್ಯಂಡ್ ವೈಟ್​ನ ಕವರ್ ಪೇಜ್ ಮಾಡಲಾಗಿದೆ. ಈ ಪುಸ್ತಕದಲ್ಲಿ ಯಾವೆಲ್ಲ ವಿಚಾರಗಳು ಇರಲಿವೆ ಎನ್ನುವ ಕುತೂಹಲ ಮೂಡಿದೆ. ಆಪ್ತರನ್ನು, ಕುಟುಂಬದವರಿಂದ ಮಾಹಿತಿ ಕಲೆ ಹಾಕಿ ಪುಸ್ತಕ ಬರೆಯಲಾಗಿದೆ ಎನ್ನಲಾಗಿದೆ.

ಸದ್ಯದಲ್ಲೇ ಅಧಿಕೃತವಾಗಿ ‘ಅಪ್ಪು’ ಪುಸ್ತಕ ರಿಲೀಸ್ ಮಾಡಲು ಅಶ್ವಿನಿ ಪ್ಲ್ಯಾನ್ ಮಾಡಿದ್ದಾರೆ. ದೊಡ್ಡ ದೊಡ್ಡ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗೋ ಸಾಧ್ಯತೆ ಇದೆಯಂತೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಸಿಗಲಿದೆ.

ಇದನ್ನೂ ಓದಿ: ‘ಒಮ್ಮೆ ಬಂದು ನೊಡ್ಕೊಂಡು ಹೋಗೋ ಕಂದಾ’; ಸೋದರತ್ತೆ ನಾಗಮ್ಮಗೆ ಇನ್ನೂ ತಿಳಿದಿಲ್ಲ ಅಪ್ಪು ಸಾವಿನ ವಿಚಾರ

ಪುನೀತ್ ಜನ್ಮದಿನದ ಪ್ರಯುಕ್ತ ‘ಅಪ್ಪು’ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ ಎಂದು ವರದಿ ಆಗಿದೆ. ಈ ಬೆನ್ನಲ್ಲೇ ‘ಅಪ್ಪು’ ಬಯೋಗ್ರಫಿ ಹೊರ ಬರುತ್ತಿರುವ ವಿಚಾರ ತಿಳಿದು ಫ್ಯಾನ್ಸ್ ಕೂಡ ಖುಷಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:00 am, Tue, 18 March 25

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು