AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳ ಪ್ರಶ್ನೆಗೆ ತಮ್ಮದೇ ಸ್ಟೈಲ್​ನಲ್ಲಿ ಉತ್ತರಿಸಿದ ಶಿವರಾಜ್​ಕುಮಾರ್

ಶಿವರಾಜ್​ಕುಮಾರ್ ಅವರು ಟ್ವಿಟರ್​ನಲ್ಲಿ #AskNimmaShivanna ಸೆಷನ್ ನಡೆಸಿದ್ದಾರೆ. ಅಭಿಮಾನಿಗಳು ವಿವಿಧ ರೀತಿಯ ಪ್ರಶ್ನೆಗಳನ್ನು ಕೇಳಿದ್ದಾರೆ. ಇದಕ್ಕೆ ಅವರು ತಮ್ಮದೇ ಸ್ಟೈಲ್​ನಲ್ಲಿ ಉತ್ತರ ನೀಡಿದ್ದಾರೆ.

ಅಭಿಮಾನಿಗಳ ಪ್ರಶ್ನೆಗೆ ತಮ್ಮದೇ ಸ್ಟೈಲ್​ನಲ್ಲಿ ಉತ್ತರಿಸಿದ ಶಿವರಾಜ್​ಕುಮಾರ್
ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: Sep 29, 2023 | 7:43 AM

Share

ಶಿವರಾಜ್​ಕುಮಾರ್ (Shivarajkumar) ನಟನೆಯ ‘ಘೋಸ್ಟ್’ ಸಿನಿಮಾ (Ghost Movie) ಅಕ್ಟೋಬರ್ 19ರಂದು ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಶ್ರೀನಿ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಶಿವಣ್ಣ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಕಾರಣದಿಂದಲೇ ಸಿನಿಮಾಗೆ ಭರ್ಜರಿ ಪ್ರಮೋಷನ್ ನೀಡಲು ಅವರು ರೆಡಿ ಆಗಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಿಕೊಳ್ಳಲು ಅವರು ನಿರ್ಧರಿಸಿದ್ದಾರೆ.

ಶಿವರಾಜ್​ಕುಮಾರ್ ಅವರು ಟ್ವಿಟರ್​ನಲ್ಲಿ #AskNimmaShivanna ಸೆಷನ್ ನಡೆಸಿದ್ದಾರೆ. ಅಭಿಮಾನಿಗಳು ವಿವಿಧ ರೀತಿಯ ಪ್ರಶ್ನೆಗಳನ್ನು ಕೇಳಿದ್ದಾರೆ. ಇದಕ್ಕೆ ಅವರು ತಮ್ಮದೇ ಸ್ಟೈಲ್​ನಲ್ಲಿ ಉತ್ತರ ನೀಡಿದ್ದಾರೆ. ‘ಕ್ಯಾಪ್ಟನ್ ಮಿಲ್ಲರ್ ಬಗ್ಗೆ ಹೇಳಿ’ ಎಂದು ಅಭಿಮಾನಿಯೋರ್ವ ಪ್ರಶ್ನೆ ಮಾಡಿದ್ದ. ಇದಕ್ಕೆ ಶಿವಣ್ಣ ಉತ್ತರಿಸಿದ್ದಾರೆ. ‘ಇಡೀ ತಂಡದ ಜೊತೆ ಕೆಲಸ ಮಾಡಿದ್ದು ಖುಷಿ ಇದೆ. ಧನುಷ್ ಜೊತೆ ಕೆಲಸ ಮಾಡಿದ ಬಗ್ಗೆ ಸಂತಸ ಇದೆ’ ಎಂದಿದ್ದಾರೆ ಶಿವರಾಜ್​ಕುಮಾರ್.

‘ಐತಿಹಾಸಿಕ, ಪೌರಾಣಿಕ ಪಾತ್ರ ಮಾಡೋದು ಯಾವಾಗ’ ಎಂಬ ಪ್ರಶ್ನೆಗೆ ‘ಶೀಘ್ರವೇ..’ ಎನ್ನುವ ಉತ್ತರ ಬಂದಿದೆ. ‘ಒಂದು ಸಾಲಿನಲ್ಲಿ ನಿಮ್ಮ ಪ್ರಯಾಣದ ಬಗ್ಗೆ ಹೇಳಿ ಎನ್ನುವ ಪ್ರಶ್ನೆಗೆ, ‘ಆನಂದ.. ಆನಂದ.. ಆನಂದ’ ಎಂದಿದ್ದಾರೆ ಶಿವಣ್ಣ. ಇನ್ನು, ಧೋನಿ ಅವರನ್ನು ಭೇಟಿ ಮಾಡಿದ ಕ್ಷಣ ಹೇಗಿತ್ತು ಎಂಬುದನ್ನು ಅವರು ವಿವರಿಸಿದ್ದಾರೆ. ಮಹೇಶ್ ಬಾಬು, ಸೂರ್ಯ ಅಭಿಮಾನಿ ಸಂಘಟನೆಗಳು ಮಾಡಿದ ಟ್ವೀಟ್​ಗೆ ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಬಂದ್: ಚಿತ್ರರಂಗದ ಪ್ರತಿಭಟನೆಗೆ ಶಿವರಾಜ್​ಕುಮಾರ್ ನೇತೃತ್ವ

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವನ್ನು ವಿರೋಧಿಸಿ ಇಂದು (ಸೆಪ್ಟೆಂಬರ್ 29) ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಕನ್ನಡ ಚಿತ್ರರಂಗದವರೂ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಶಿವರಾಜ್​ಕುಮಾರ್ ಇದರ ನೇತೃತ್ವ ವಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು