AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chetan Chandra: ಕನ್ನಡದ ನಟ ಚೇತನ್​ ಚಂದ್ರ ಮೇಲೆ ಬೆಂಗಳೂರಿನಲ್ಲಿ 20 ಜನರಿಂದ ಹಲ್ಲೆ

ತಾಯಂದಿರ ದಿನದ ಆ ಪ್ರಯುಕ್ತ ತಾಯಿಯ ಜೊತೆ ದೇವಸ್ಥಾನಕ್ಕೆ ಹೋಗಿ ವಾಪಸ್ಸು ಬರುವ ಸಂದರ್ಭದಲ್ಲಿ ನಟ ಚೇತನ್​ ಚಂದ್ರ ಅವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ನಟನ ಕಾರಿಗೂ ಹಾನಿ ಮಾಡಿದ್ದಾರೆ. ಮಾರಣಾಂತಿಕವಾಗಿ ಹಲ್ಲೆಗೆ ಒಳಗಾಗಿರುವ ಚೇತನ್​ ಚಂದ್ರ ಅವರು ಕಗ್ಗಲಿಪುರ ಪೊಲೀಸ್​ ಠಾಣೆಗೆ ಹೋಗಿ ದೂರು ನೀಡಿದ್ದಾರೆ.

Chetan Chandra: ಕನ್ನಡದ ನಟ ಚೇತನ್​ ಚಂದ್ರ ಮೇಲೆ ಬೆಂಗಳೂರಿನಲ್ಲಿ 20 ಜನರಿಂದ ಹಲ್ಲೆ
ಹಲ್ಲೆಗೆ ಒಳಗಾದ ನಟ ಚೇತನ್​ ಚಂದ್ರ
TV9 Web
| Edited By: |

Updated on:May 12, 2024 | 11:18 PM

Share

ಕನ್ನಡದ ಹಲವು ಸಿನಿಮಾಗಳಲ್ಲಿ ಅಭಿನಯಿಸಿರುವ ನಟ ಚೇತನ್​ ಚಂದ್ರ (Chetan Chandra) ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಬೆಂಗಳೂರಿನ ಕಗ್ಗಲಿಪುರ ಸಮೀಪ ಈ ಘಟನೆ ನಡೆದಿದೆ. ಸುಮಾರು 20 ಜನರು ಚೇತನ್​ ಚಂದ್ರ ಅವರ ಕಾರನ್ನು ಅಡ್ಡಗಟ್ಟಿ ಹಲ್ಲೆ (Assault) ನಡೆಸಿದ್ದಾರೆ. ನಂತರ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಚೇತನ್​ ಚಂದ್ರ ಅವರು ಘಟನೆ ಬಗ್ಗೆ ವಿವರ ನೀಡಿದ್ದಾರೆ. ಹಲ್ಲೆಗೆ ಒಳಗಾದ ಬಳಿಕ ಅವರು ಕಗ್ಗಲಿಪುರ (Kaggalipura) ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇಂದು (ಮೇ 12) ತಾಯಂದಿರ ದಿನ. ಆ ಪ್ರಯುಕ್ತ ತಾಯಿಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ವಾಪಸ್​ ಬರುವಾಗ ಚೇತನ್​ ಚಂದ್ರ ಅವರ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಅವರ ಕಾರಿಗೂ ಹಾನಿ ಮಾಡಲಾಗಿದೆ. ಈ ಘಟನೆ ಯಾವ ರೀತಿ ನಡೆಯಿತು ಎಂದು ಇನ್​ಸ್ಟಾಗ್ರಾಮ್​ ಲೈವ್​ನಲ್ಲಿ ಚೇತನ್​ ಚಂದ್ರ ಅವರು ಮಾಹಿತಿ ನೀಡಿದ್ದಾರೆ.

‘ಇದು ನನ್ನ ಜೀವನದ ಅತಿ ಕೆಟ್ಟ ಅನುಭವ. ನ್ಯಾಯ ಬೇಕು’ ಎಂದು ಚೇತನ್​ ಚಂದ್ರ ಹೇಳಿದ್ದಾರೆ. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಚೇತನ್​ ಚಂದ್ರ ಅವರು ಇನ್​ಸ್ಟಾಗ್ರಾಮ್​ ಲೈವ್​ ಬಂದು ಹಲ್ಲೆ ಬಗ್ಗೆ ವಿವರಿಸಿದ್ದಾರೆ.

ಇದನ್ನೂ ಓದಿ: ಪ್ರಲ್ಹಾದ್​ ಜೋಶಿ ಭೇಟಿಯಾಗಿ ಹಲ್ಲೆ ಘಟನೆ ಬಗ್ಗೆ ವಿವರಿಸಿದ ಹರ್ಷಿಕಾ, ಭುವನ್​

‘ಇವತ್ತು ಒಂದು ಕೆಟ್ಟ ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡೆ. ನನ್ನ ಗಾಡಿ ಅಡ್ಡ ಹಾಕಿ ಹೊಡೆದರು. ಚೆನ್ನಾಗಿ ಕುಡಿದು ನನ್ನ ಗಾಡಿ ಅಡ್ಡ ಹಾಕಿದ್ದಾರೆ. ಏನಿಲ್ಲ ಅಂದರೂ 20 ಜನರು ಸೇರಿಕೊಂಡು ನನಗೆ ಹೊಡೆದಿದ್ದಾರೆ. ಅದರ ವಿಡಿಯೋ ಇದೆ. ಮೂಗು ಮುರಿದು ಹಾಕಿದ್ದಾರೆ. ಕಗ್ಗಲಿಪುರ ಪೊಲೀಸ್​ ಠಾಣೆ ಪಕ್ಕದಲ್ಲಿ ಪ್ರಥಮ ಚಿಕಿತ್ಸೆ ಪಡೆಯಲು ಬಂದಿದ್ದೇನೆ. ಈಗ ಮತ್ತೆ ಬಂದು ಕಾರು ಒಡೆದು ಹಾಕಿದ್ದಾರೆ. ತುಂಬ ಕೆಟ್ಟ ಜನರು’ ಎಂದು ಚೇತನ್​ ಚಂದ್ರ ಹೇಳಿದ್ದಾರೆ

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:36 pm, Sun, 12 May 24

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?