AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಲರಾಮನ ದಿನಗಳು’ ತಂಡ ಸೇರಿದ ಅತುಲ್ ಕುಲಕರ್ಣಿ, ಪಾತ್ರ ಅದೇನಾ?

Atul Kulkarni: ‘ಆ ದಿನಗಳು’, ‘ಎದೆಗಾರಿಕೆ’, ‘ಮೈತ್ರಿ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ರಾಷ್ಟ್ರಪ್ರಶಸ್ತಿ ವಿಜೇತ ನಟ ಅತುಲ್ ಕುಲಕರ್ಣಿ ಈಗ ಮತ್ತೊಮ್ಮೆ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ. ಅವರು ಈ ಹಿಂದೆ ನಟಿಸಿದ್ದ ಪಾತ್ರದಲ್ಲಿಯೇ ನಟಿಸಲು ಮತ್ತೆ ಬಂದಂತಿದೆ. ಸಿನಿಮಾದ ಬಗ್ಗೆ ವಿವರ ಇಲ್ಲಿದೆ.

‘ಬಲರಾಮನ ದಿನಗಳು’ ತಂಡ ಸೇರಿದ ಅತುಲ್ ಕುಲಕರ್ಣಿ, ಪಾತ್ರ ಅದೇನಾ?
Atul Kulkarni
Follow us
ಮಂಜುನಾಥ ಸಿ.
|

Updated on:Jan 14, 2025 | 6:42 PM

‘ಆ ದಿನಗಳು’, ‘ಆಟಗಾರ’ ಸೇರಿದಂತೆ ಇನ್ನೂ ಕೆಲವು ಒಳ್ಳೆಯ ಸಿನಿಮಾಗಳನ್ನು ನೀಡಿರುವ ಕೆಎಂ ಚೈತನ್ಯ ಈಗ ಮತ್ತೊಮ್ಮೆ ತಮ್ಮ ‘ದಿನಗಳು’ ಸರಣಿಗೆ ಮರಳಿದ್ದಾರೆ. ವಿನೋದ್ ಪ್ರಭಾಕರ್ ನಟನೆಯ ‘ಬಲರಾಮ ದಿನಗಳು’ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಇತ್ತೀಚೆಗಷ್ಟೆ ಪ್ರಿಯಾ ಆನಂದ್, ‘ಬಲರಾಮನ ದಿನಗಳು’ ಸಿನಿಮಾ ತಂಡವನ್ನು ಸೇರಿಕೊಂಡ ಸುದ್ದಿ ಹೊರಬಿದ್ದಿತ್ತು, ಇದೀಗ ಮತ್ತೊಬ್ಬ ಜನಪ್ರಿಯ ಮತ್ತು ಎರಡು ಬಾರಿ ರಾಷ್ಟ್ರಪ್ರಶಸ್ತಿ ಪಡೆದಿರುವ ನಟ ‘ಬಲರಾಮನ ದಿನಗಳು’ ಸಿನಿಮಾ ತಂಡ ಸೇರಿಕೊಂಡಿದ್ದಾರೆ. ಅವರೇ ಅತುಲ್ ಕುಲಕರ್ಣಿ.

ಅತುಲ್ ಕುಲಕರ್ಣಿ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಬಹು ಪರಿಚಿತ ನಟ. ಅತುಲ್ ಕುಲಕರ್ಣಿ ನಟನೆ ಪ್ರಾರಂಭ ಮಾಡಿದ್ದೆ ಕನ್ನಡದ ‘ಭೂಮಿ ಗೀತಾ’ ಸಿನಿಮಾ ಮೂಲಕ. ‘ಆ ದಿನಗಳು’ ಸಿನಿಮಾದಲ್ಲಿ ಅತುಲ್ ನಟಿಸಿದ ಅಗ್ನಿ ಶ್ರೀಧರ್ ಪಾತ್ರ ಬಹಳ ಜನಪ್ರಿಯತೆ ಗಳಿಸಿತ್ತು. ಅದಾದ ಬಳಿಕ ‘ಎದೆಗಾರಿಕೆ’ ಸಿನಿಮಾದಲ್ಲಿಯೂ ಅವರು ಶ್ರೀಧರ್ ಪಾತ್ರದಲ್ಲಿ ನಟಿಸಿದ್ದರು. ಇದೀಗ ‘ಬಲರಾಮ ದಿನಗಳು’ ಸಿನಿಮಾಕ್ಕೆ ಬಂದಿರುವ ಅತುಲ್, ಈ ಸಿನಿಮಾದಲ್ಲಿಯೂ ಶ್ರೀಧರ್ ಪಾತ್ರದಲ್ಲಿಯೇ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಅತುಲ್ ಅವರ ಪೋಸ್ಟರ್ ಒಂದನ್ನು ನಿರ್ದೇಶಕ ಚೈತನ್ಯ ಹಂಚಿಕೊಂಡಿದ್ದು, ಪೋಸ್ಟರ್ ನೋಡಿದರೆ ‘ಆ ದಿನಗಳು’, ‘ಎದೆಗಾರಿಕೆ’ ಸಿನಿಮಾದಲ್ಲಿ ಅವರು ನಿರ್ವಹಿಸಿದ ಪಾತ್ರವನ್ನೇ ಹೋಲುತ್ತಿದೆ.

ಇದನ್ನೂ ಓದಿ:‘ಬಲರಾಮನ ದಿನಗಳು’ ಚಿತ್ರದಲ್ಲಿ ವಿನೋದ್ ಪ್ರಭಾಕರ್​ಗೆ ಜೋಡಿಯಾದ ಪ್ರಿಯಾ ಆನಂದ್

ಮರಾಠಿ ನಟರಾಗಿರುವ ಅತುಲ್ ಕುಲಕರ್ಣಿ, ಮರಾಠಿ, ಹಿಂದಿ, ತೆಲುಗು, ತಮಿಳು, ಕನ್ನಡ ಹೀಗೆ ಭಾಷೆಯ ಹಂಗಿಲ್ಲದೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. ಎಲ್ಲ ಭಾಷೆಗಳ ಸಿನಿಮಾಗಳಲ್ಲಿಯೂ ನೆನಪುಳಿಯುವ ಪಾತ್ರಗಳನ್ನು ಅತುಲ್ ನಿರ್ವಹಿಸಿದ್ದಾರೆ. ಕನ್ನಡದಲ್ಲಿ ಈವರೆಗೆ ಸುಮಾರು 13 ಸಿನಿಮಾಗಳಲ್ಲಿ ಅತುಲ್ ಕುಲಕರ್ಣಿ ನಟಿಸಿದ್ದಾರೆ. ‘ಭೂಮಿಗೀತ’, ‘ಆ ದಿನಗಳು’, ‘ಎದೆಗಾರಿಕೆ’, ಪುನೀತ್ ರಾಜ್​ಕುಮಾರ್ ನಟನೆಯ ‘ಮೈತ್ರಿ’, ‘ಉಗ್ರಂ’ ಸಿನಿಮಾಗಳು ಇವುಗಳಲ್ಲಿ ಪ್ರಮುಖವಾದವು.

‘ಬಲರಾಮನ ದಿನಗಳು’ ಸಿನಿಮಾಕ್ಕೆ ಒಂದೊಳ್ಳೆ ತಂಡವನ್ನು ನಿರ್ದೇಶಕ ಕೆಎಂ ಚೈತನ್ಯ ಸೇರಿಸಿದ್ದಾರೆ. ವಿನೋದ್ ಪ್ರಭಾಕರ್ ಬಲರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪ್ರಿಯಾ ಆನಂದ್ ಸಿನಿಮಾದ ನಾಯಕಿ. ಈಗ ಅತುಲ್ ಕುಲಕರ್ಣಿ ಸೇರಿಕೊಂಡಿದ್ದಾರೆ. ‘ಅಟ್ಟಕತ್ತಿ’, ‘ಕಬಾಲಿ’, ‘ಕಾಲ’, ‘ಭೈರವ’, ‘ಕಲ್ಕಿ’, ‘ದಸರಾ’ ಮುಂತಾದ ಯಶಸ್ವಿ ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿರುವ ಸಂತೋಷ್ ನಾರಾಯಣನ್ ‘ಬಲರಾಮನ ದಿನಗಳು’ ಸಿನಿಮಾಕ್ಕೆ ಸಂಗೀತ ನೀಡುತ್ತಿದ್ದಾರೆ. ಸಿನಿಮಾದ ಎರಡು ಹಂತದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಮೂರನೇ ಹಂತದ ಚಿತ್ರೀಕರಣ ಜನವರಿ 15 ರಿಂದ ಪ್ರಾರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Tue, 14 January 25

ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ