Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯ, ಆರ್ಥಿಕ ಸಂಕಷ್ಟದಲ್ಲಿ ‘ಅವಳೇ ನನ್​ ಹೆಂಡ್ತಿ’ ಚಿತ್ರದ ನಿರ್ದೇಶಕ ಉಮೇಶ್​; ಸಹಾಯಕ್ಕಾಗಿ ಮನವಿ

ಕಳೆದ ವರ್ಷ ಕೊರೊನಾ ಸಮಯದಲ್ಲಿ ನನಗೆ ಒಂದು ಕಿಡ್ನಿ ಸಮಸ್ಯೆ ಆಯ್ತು. ಎಡ ಭಾಗದ ಕಿಡ್ನಿ ಸಂಪೂರ್ಣ ವಿಫಲವಾಗಿದೆ ಎಂದು ಎಸ್​. ಉಮೇಶ್​ ಕಷ್ಟ ತೋಡಿಕೊಂಡಿದ್ದಾರೆ.

ಅನಾರೋಗ್ಯ, ಆರ್ಥಿಕ ಸಂಕಷ್ಟದಲ್ಲಿ ‘ಅವಳೇ ನನ್​ ಹೆಂಡ್ತಿ’ ಚಿತ್ರದ ನಿರ್ದೇಶಕ ಉಮೇಶ್​; ಸಹಾಯಕ್ಕಾಗಿ ಮನವಿ
ನಿರ್ದೇಶಕ ಎಸ್​. ಉಮೇಶ್​
Follow us
TV9 Web
| Updated By: ಮದನ್​ ಕುಮಾರ್​

Updated on: Jun 20, 2021 | 12:46 PM

ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಸಕ್ರಿಯರಾಗಿದ್ದ ಹಿರಿಯ ನಿರ್ದೇಶಕ ಎಸ್​. ಉಮೇಶ್​ ಈಗ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಆರೋಗ್ಯ ಸಮಸ್ಯೆ ಕೂಡ ಅವರನ್ನು ಕಾಡುತ್ತಿದ್ದು, ವಿಡಿಯೋ ಮೂಲಕ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಸಹಾಯಕ್ಕಾಗಿ ಎಲ್ಲರ ಬಳಿ ಮನವಿ ಮಾಡಿಕೊಂಡಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಅವರು ಬಳಲುತ್ತಿದ್ದು, ಮನೆ ಬಾಡಿಗೆ ಕಟ್ಟಲು ಕೂಡ ಹಣವಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಕಾಶಿನಾಥ್​ ನಟನೆಯ ‘ಅವಳೇ ನನ್​ ಹೆಂಡ್ತಿ’ ಚಿತ್ರಕ್ಕೆ ನಿರ್ದೇಶನ ಮಾಡಿ ಎಸ್​. ಉಮೇಶ್​ ಅವರು ಫೇಮಸ್​ ಆಗಿದ್ದರು.

‘1973-74ರಲ್ಲಿ ನಾನು ಚಿತ್ರರಂಗ ಪ್ರವೇಶಿಸಿದೆ. ಅಲ್ಲಿಂದ 48 ವರ್ಷಗಳ ಕಾಲ ಸಿನಿಮಾ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದೆ. ಮೊದಲು ಸಂಕಲನಕಾರ, ಸಹಾಯಕ ನಿರ್ದೇಶಕನಾಗಿದ್ದವನು 1988ರಲ್ಲಿ ಮೊದಲ ಬಾರಿಗೆ ‘ಅವಳೇ ನನ್​ ಹೆಂಡ್ತಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದೆ. ಕಾಶಿನಾಥ್​ ನಟನೆಯ ಆ ಸಿನಿಮಾ ಕರ್ನಾಟಕದಾದ್ಯಂತ ಯಶಸ್ವಿಯಾಗಿ, ಬೇರೆ ಭಾಷೆಗಳಿಗೂ ರಿಮೇಕ್​ ಆಯಿತು. ತಮಿಳಿಗೆ ನಾನೇ ನಿರ್ದೇಶನ ಮಾಡಿದೆ. ಬಳಿಕ 2 ತಮಿಳು ಚಿತ್ರಗಳನ್ನೂ ನಿರ್ದೇಶನ ಮಾಡಿದ್ದೆ’ ಎಂದು ಉಮೇಶ್​ ಮಾತು ಆರಂಭಿಸಿದ್ದಾರೆ.

‘ತಮಿಳು ಚಿತ್ರರಂಗದಲ್ಲಿ ನನಗೆ ಒಳ್ಳೆಯ ಹೆಸರು ಸಿಕ್ಕಿತ್ತು. ಆದರೂ ನಾನೊಬ್ಬ ಕನ್ನಡಿಗನಾಗಿ, ಕರ್ನಾಟಕದಲ್ಲಿ ಉಳಿಯುವ ಪ್ರಯತ್ನ ಮಾಡಿ 1990ರಲ್ಲಿ ‘ಬನ್ನಿ ಒಂದ್ಸಲ ನೋಡಿ’ ಎಂಬ ಸ್ವಂತ ಸಿನಿಮಾ ಶುರು ಮಾಡಿದೆ. ಆ ಚಿತ್ರಕ್ಕಾಗಿ ಏಳೂವರೆ ಲಕ್ಷ ರೂ. ಸಾಲ ಮಾಡಿಕೊಂಡಿದ್ದೆ. ಆ ಚಿತ್ರವನ್ನು ಮಾರಾಟ ಮಾಡಲು ಕಷ್ಟ ಆಯಿತು. ಒಟ್ಟು ಮೂರು ಸಿನಿಮಾ ನಿರ್ಮಾಣ ಮಾಡಿ ನಷ್ಟ ಮಾಡಿಕೊಂಡೆ. ನಾನು ಎಲ್ಲರನ್ನೂ ನಂಬಿ ಯಾಮಾರಿದೆ’ ಎಂದು ಉಮೇಶ್​ ಹೇಳಿದ್ದಾರೆ.

‘ಕಳೆದ ವರ್ಷ ಕೊರೊನಾ ಸಮಯದಲ್ಲಿ ನನಗೆ ಒಂದು ಕಿಡ್ನಿ ಸಮಸ್ಯೆ ಆಯ್ತು. ಎಡ ಭಾಗದ ಕಿಡ್ನಿ ಸಂಪೂರ್ಣ ವಿಫಲವಾಗಿದೆ. ಡಯಾಲಿಸಿಸ್​ ಇಲ್ಲದೇ ಕೇವಲ ಮೆಡಿಸಿನ್​ನಲ್ಲೇ ವೈದ್ಯರು ನನ್ನನ್ನು ಕಾಪಾಡಿದ್ದಾರೆ. ಡಯಾಲಿಸಿಸ್​ ಶುರುವಾದರೆ ನನ್ನ ಪರಿಸ್ಥಿತಿ ಕಷ್ಟ ಆಗುತ್ತದೆ. ಈಗ ಕೆಲಸ ಕೂಡ ಇಲ್ಲ. ನನ್ನ ಮಗ ಎಸ್​ಎಸ್​ಎಲ್​ಸಿ ಓದುತ್ತಿದ್ದಾನೆ. ಅವನ ಶಾಲೆಯ ಫೀಸ್​ ಕಟ್ಟಲು ಸಾಧ್ಯವಾಗಿಲ್ಲ. ಯಾರಾದರೂ ದಾನಿಗಳು ನನಗೆ ಸಹಾಯ ಮಾಡುವುದಾದರೆ ನಾನು ಅದನ್ನು ಸ್ವೀಕರಿಸುತ್ತೇನೆ’ ಎಂದು ಉಮೇಶ್​ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ಸಂಕಷ್ಟದಲ್ಲಿರುವ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಂತ ಪುನೀತ್ ರಾಜ್​ಕುಮಾರ್; 10 ಲಕ್ಷ ಪರಿಹಾರ ಘೋಷಣೆ

ಭುವನ್​ ಪೊನ್ನಣ್ಣ​ ನಿಜವಾದ ಬಿಗ್​ ಬಾಸ್​; ಕೊವಿಡ್​ ಸಂಕಷ್ಟದಲ್ಲಿ ಮಾಡಿದ ಸಹಾಯ ನೆನೆದು ಭಾವುಕರಾದ ಹಿರಿಯ ನಟ

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ