AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯ, ಆರ್ಥಿಕ ಸಂಕಷ್ಟದಲ್ಲಿ ‘ಅವಳೇ ನನ್​ ಹೆಂಡ್ತಿ’ ಚಿತ್ರದ ನಿರ್ದೇಶಕ ಉಮೇಶ್​; ಸಹಾಯಕ್ಕಾಗಿ ಮನವಿ

ಕಳೆದ ವರ್ಷ ಕೊರೊನಾ ಸಮಯದಲ್ಲಿ ನನಗೆ ಒಂದು ಕಿಡ್ನಿ ಸಮಸ್ಯೆ ಆಯ್ತು. ಎಡ ಭಾಗದ ಕಿಡ್ನಿ ಸಂಪೂರ್ಣ ವಿಫಲವಾಗಿದೆ ಎಂದು ಎಸ್​. ಉಮೇಶ್​ ಕಷ್ಟ ತೋಡಿಕೊಂಡಿದ್ದಾರೆ.

ಅನಾರೋಗ್ಯ, ಆರ್ಥಿಕ ಸಂಕಷ್ಟದಲ್ಲಿ ‘ಅವಳೇ ನನ್​ ಹೆಂಡ್ತಿ’ ಚಿತ್ರದ ನಿರ್ದೇಶಕ ಉಮೇಶ್​; ಸಹಾಯಕ್ಕಾಗಿ ಮನವಿ
ನಿರ್ದೇಶಕ ಎಸ್​. ಉಮೇಶ್​
TV9 Web
| Edited By: |

Updated on: Jun 20, 2021 | 12:46 PM

Share

ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಸಕ್ರಿಯರಾಗಿದ್ದ ಹಿರಿಯ ನಿರ್ದೇಶಕ ಎಸ್​. ಉಮೇಶ್​ ಈಗ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಆರೋಗ್ಯ ಸಮಸ್ಯೆ ಕೂಡ ಅವರನ್ನು ಕಾಡುತ್ತಿದ್ದು, ವಿಡಿಯೋ ಮೂಲಕ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಸಹಾಯಕ್ಕಾಗಿ ಎಲ್ಲರ ಬಳಿ ಮನವಿ ಮಾಡಿಕೊಂಡಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಅವರು ಬಳಲುತ್ತಿದ್ದು, ಮನೆ ಬಾಡಿಗೆ ಕಟ್ಟಲು ಕೂಡ ಹಣವಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಕಾಶಿನಾಥ್​ ನಟನೆಯ ‘ಅವಳೇ ನನ್​ ಹೆಂಡ್ತಿ’ ಚಿತ್ರಕ್ಕೆ ನಿರ್ದೇಶನ ಮಾಡಿ ಎಸ್​. ಉಮೇಶ್​ ಅವರು ಫೇಮಸ್​ ಆಗಿದ್ದರು.

‘1973-74ರಲ್ಲಿ ನಾನು ಚಿತ್ರರಂಗ ಪ್ರವೇಶಿಸಿದೆ. ಅಲ್ಲಿಂದ 48 ವರ್ಷಗಳ ಕಾಲ ಸಿನಿಮಾ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದೆ. ಮೊದಲು ಸಂಕಲನಕಾರ, ಸಹಾಯಕ ನಿರ್ದೇಶಕನಾಗಿದ್ದವನು 1988ರಲ್ಲಿ ಮೊದಲ ಬಾರಿಗೆ ‘ಅವಳೇ ನನ್​ ಹೆಂಡ್ತಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದೆ. ಕಾಶಿನಾಥ್​ ನಟನೆಯ ಆ ಸಿನಿಮಾ ಕರ್ನಾಟಕದಾದ್ಯಂತ ಯಶಸ್ವಿಯಾಗಿ, ಬೇರೆ ಭಾಷೆಗಳಿಗೂ ರಿಮೇಕ್​ ಆಯಿತು. ತಮಿಳಿಗೆ ನಾನೇ ನಿರ್ದೇಶನ ಮಾಡಿದೆ. ಬಳಿಕ 2 ತಮಿಳು ಚಿತ್ರಗಳನ್ನೂ ನಿರ್ದೇಶನ ಮಾಡಿದ್ದೆ’ ಎಂದು ಉಮೇಶ್​ ಮಾತು ಆರಂಭಿಸಿದ್ದಾರೆ.

‘ತಮಿಳು ಚಿತ್ರರಂಗದಲ್ಲಿ ನನಗೆ ಒಳ್ಳೆಯ ಹೆಸರು ಸಿಕ್ಕಿತ್ತು. ಆದರೂ ನಾನೊಬ್ಬ ಕನ್ನಡಿಗನಾಗಿ, ಕರ್ನಾಟಕದಲ್ಲಿ ಉಳಿಯುವ ಪ್ರಯತ್ನ ಮಾಡಿ 1990ರಲ್ಲಿ ‘ಬನ್ನಿ ಒಂದ್ಸಲ ನೋಡಿ’ ಎಂಬ ಸ್ವಂತ ಸಿನಿಮಾ ಶುರು ಮಾಡಿದೆ. ಆ ಚಿತ್ರಕ್ಕಾಗಿ ಏಳೂವರೆ ಲಕ್ಷ ರೂ. ಸಾಲ ಮಾಡಿಕೊಂಡಿದ್ದೆ. ಆ ಚಿತ್ರವನ್ನು ಮಾರಾಟ ಮಾಡಲು ಕಷ್ಟ ಆಯಿತು. ಒಟ್ಟು ಮೂರು ಸಿನಿಮಾ ನಿರ್ಮಾಣ ಮಾಡಿ ನಷ್ಟ ಮಾಡಿಕೊಂಡೆ. ನಾನು ಎಲ್ಲರನ್ನೂ ನಂಬಿ ಯಾಮಾರಿದೆ’ ಎಂದು ಉಮೇಶ್​ ಹೇಳಿದ್ದಾರೆ.

‘ಕಳೆದ ವರ್ಷ ಕೊರೊನಾ ಸಮಯದಲ್ಲಿ ನನಗೆ ಒಂದು ಕಿಡ್ನಿ ಸಮಸ್ಯೆ ಆಯ್ತು. ಎಡ ಭಾಗದ ಕಿಡ್ನಿ ಸಂಪೂರ್ಣ ವಿಫಲವಾಗಿದೆ. ಡಯಾಲಿಸಿಸ್​ ಇಲ್ಲದೇ ಕೇವಲ ಮೆಡಿಸಿನ್​ನಲ್ಲೇ ವೈದ್ಯರು ನನ್ನನ್ನು ಕಾಪಾಡಿದ್ದಾರೆ. ಡಯಾಲಿಸಿಸ್​ ಶುರುವಾದರೆ ನನ್ನ ಪರಿಸ್ಥಿತಿ ಕಷ್ಟ ಆಗುತ್ತದೆ. ಈಗ ಕೆಲಸ ಕೂಡ ಇಲ್ಲ. ನನ್ನ ಮಗ ಎಸ್​ಎಸ್​ಎಲ್​ಸಿ ಓದುತ್ತಿದ್ದಾನೆ. ಅವನ ಶಾಲೆಯ ಫೀಸ್​ ಕಟ್ಟಲು ಸಾಧ್ಯವಾಗಿಲ್ಲ. ಯಾರಾದರೂ ದಾನಿಗಳು ನನಗೆ ಸಹಾಯ ಮಾಡುವುದಾದರೆ ನಾನು ಅದನ್ನು ಸ್ವೀಕರಿಸುತ್ತೇನೆ’ ಎಂದು ಉಮೇಶ್​ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

ಸಂಕಷ್ಟದಲ್ಲಿರುವ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಂತ ಪುನೀತ್ ರಾಜ್​ಕುಮಾರ್; 10 ಲಕ್ಷ ಪರಿಹಾರ ಘೋಷಣೆ

ಭುವನ್​ ಪೊನ್ನಣ್ಣ​ ನಿಜವಾದ ಬಿಗ್​ ಬಾಸ್​; ಕೊವಿಡ್​ ಸಂಕಷ್ಟದಲ್ಲಿ ಮಾಡಿದ ಸಹಾಯ ನೆನೆದು ಭಾವುಕರಾದ ಹಿರಿಯ ನಟ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ