AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವತಾರ್’ ಟ್ರೈಲರ್: ಪ್ಯಾಂಡೋರಾದಲ್ಲಿ ಅಂತರ್ಯುದ್ಧ

Avatar Fire and Ash: ‘ಅವತಾರ್’ ಸಿನಿಮಾ ಸರಣಿಯ ಮೂರನೇ ಸಿನಿಮಾ ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾ ಇದೇ ವರ್ಷ ಡಿಸೆಂಬರ್ ತಿಂಗಳಲ್ಲಿ ತೆರೆಗೆ ಬರಲಿದ್ದು, ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ‘ಅವತಾರ್ 2’ ಸಿನಿಮಾದ ಬಂದ ಟೀಕೆಯನ್ನು ನಿರ್ದೇಶಕ ಜೇಮ್ಸ್ ಕ್ಯಾಮರನ್ ಗಂಭೀರವಾಗಿ ಪರಿಗಣಿಸಿದಂತಿದೆ.

‘ಅವತಾರ್’ ಟ್ರೈಲರ್: ಪ್ಯಾಂಡೋರಾದಲ್ಲಿ ಅಂತರ್ಯುದ್ಧ
Avatar Fire And Ash
ಮಂಜುನಾಥ ಸಿ.
|

Updated on: Jul 29, 2025 | 12:02 PM

Share

‘ಅವತಾರ್’ (Avatar) ಸಿನಿಮಾ ಸರಣಿಯ ಮೂರನೇ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. 2009 ರಲ್ಲಿ ಬಿಡುಗಡೆ ಆಗಿದ್ದ ‘ಅವತಾರ್’ ಸಿನಿಮಾ ಭಾರಿ ದೊಡ್ಡ ಯಶಸ್ಸು ಗಳಿಸಿತ್ತು. ಬಾಕ್ಸ್ ಆಫೀಸ್​​ನಲ್ಲಿ ಸಾರ್ವಕಾಲಿಕ ದಾಖಲೆಯನ್ನೇ ನಿರ್ಮಿಸಿತ್ತು. ಅದಾದ 13 ವರ್ಷಗಳ ಬಳಿಕ 2022 ರಲ್ಲಿ ‘ಅವತಾರ್: ದಿ ವೇ ಆಫ್ ವಾಟರ್’ ಸಿನಿಮಾ ಬಿಡುಗಡೆ ಆಯ್ತು. ಆ ಸಿನಿಮಾ ಸಹ ಹಿಟ್ ಎನಿಸಿಕೊಂಡಿತು. ಇದೀಗ ಅದೇ ಸಿನಿಮಾ ಸರಣಿಯ ಮತ್ತೊಂದು ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ.

ಪಾಂಡೋರಾ ಎಂಬ ಕಲ್ಪಿತ ಪ್ರದೇಶದಲ್ಲಿ ನಡೆಯುವ ಮಾನವ ಮತ್ತು ನಾವಿ ಜನಾಂಗದ ನಡುವಿನ ಸಂಘರ್ಷದ ಕತೆಯನ್ನು ಮೊದಲ ಎರಡು ‘ಅವತಾರ್’ ಸಿನಿಮಾಗಳು ಹೊಂದಿದ್ದವು. 2022 ರ ‘ವೇ ಆಫ್ ವಾಟರ್’ ಸಿನಿಮಾ ಮಾನವ ಹಾಗೂ ನಾವಿಗಳ ನಡುವೆ ನೀರಿನ ಮೇಲೆ ನಡೆಯುವ ಸಂಘರ್ಷದ ಕತೆಯನ್ನು ಒಳಗೊಂಡಿತ್ತು. ಚಿತ್ರ ವಿಚಿತ್ರ ಜಲಚರಗಳನ್ನು ಸಿನಿಮಾದ ನಿರ್ದೇಶಕ ಜೇಮ್ಸ್ ಕ್ಯಾಮರನ್ ಸೃಷ್ಟಿಸಿದ್ದರು. ಆದರೆ ಆ ಸಿನಿಮಾದ ಬಗ್ಗೆ ತುಸು ಟೀಕೆ ವ್ಯಕ್ತವಾಗಿತ್ತು. 2009 ರ ‘ಅವತಾರ್’ ಸಿನಿಮಾ 2022 ರ ‘ಅವತಾರ್’ ಸಿನಿಮಾದ ಕತೆ ನಡೆಯುವ ಸ್ಥಳ, ಫೈಟ್ ಕೊರಿಯೋಗ್ರಫಿ ಬಿಟ್ಟರೆ ಬೇರೇನೂ ವ್ಯತ್ಯಾಸವಿಲ್ಲ ಎಂದು ಟೀಕಿಸಲಾಗಿತ್ತು. ಆ ಟೀಕೆಗಳಿಗೆ ಉತ್ತರದಂತಿದೆ ‘ಅವತಾರ್: ಫೈರ್ ಆಂಡ್ ಆಶ್’.

‘ಅವತಾರ’ ಸಿನಿಮಾ ಮಾನವ ಮತ್ತು ನಾವಿ ಜನಾಂಗದ ನಡುವಿನ ಸಂಘರ್ಷದ ಕತೆ ಒಳಗೊಂಡಿದೆ. ಆದರೆ ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾನಲ್ಲಿ ನಾವಿ ಜನಾಂಗ ಬುಕಟ್ಟುಗಳ ನಡುವಿನ ಸಂಘರ್ಷದ ಕತೆಯನ್ನು ಒಳಗೊಂಡಿರುವ ಸುಳಿವನ್ನು ಸಿನಿಮಾದ ಟ್ರೈಲರ್ ನೀಡುತ್ತಿದೆ. ಪ್ರಕೃತಿಯನ್ನು ಆರಾಧಿಸುವ ನಾವಿಗಳು ಹಾಗೂ ಬೆಂಕಿಯನ್ನು ಆರಾಧಿಸುವ ಜನಾಂಗದ ನಡುವೆ ನಡೆಯುವ ಸಂಘರ್ಷದ ಕತೆಯನ್ನು ‘ಫೈರ್ ಆಂಡ್ ಆಶ್’ ಸಿನಿಮಾ ಒಳಗೊಂಡಿರುವಂತಿದೆ.

ಇದನ್ನೂ ಓದಿ:ಹಣ ಕೊಟ್ಟು ನೋಡಬೇಕು ‘ಅವತಾರ್ 3’ ಸಿನಿಮಾ ಟ್ರೇಲರ್; ಪ್ರೇಕ್ಷಕರು ಗರಂ

ಮಾನವರು ಆಯುಧಗಳ ಮೂಲಕ ನಾವಿಗಳನ್ನು ಗೆಲ್ಲಲಾಗದು ಎಂದು ತೀರ್ಮಾನಿಸಿ, ಅವರ ನಡುವೆಯೇ ಸಂಘರ್ಷ ಉಂಟುಮಾಡಿರುವಂತಿದೆ. ಸಂಘರ್ಷದ ಕತೆಯ ಜೊತೆಗೆ ‘ಅವತಾರ್’ ಸಿನಿಮಾ ಸರಣಿಯ ನಾಯಕ ಜೇಕ್ ಸೂಲಿ ಹಾಗೂ ಅವನ ಕುಟುಂಬದ ಕತೆ, ಸೆಂಟಿಮೆಂಟ್ ಇನ್ನಿತರೆಗಳನ್ನು ಸಹ ಸಿನಿಮಾ ಒಳಗೊಂಡಿರುವಂತಿದೆ. ‘ಅವತಾರ್: ದಿ ವೇ ಆಫ್ ವಾಟರ್’ ಸಿನಿಮಾದ ಅಂತ್ಯದಲ್ಲಿ ನಾವಿ ಅವರಿಂದ ಬೇರ್ಪಟ್ಟು ಮಾನವರನ್ನು ಸೇರಿದ್ದ ಸ್ಪೈಡರ್ ಗೆ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಇದ್ದಂತಿದೆ. ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾ ಡಿಸೆಂಬರ್ 19 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!