AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

B Jaya Death: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಜಯಾ ನಿಧನ

ಕೆಲ ದಿನದಿಂದ ಜಯಾ ಅವರಿಗೆ ವಯೋಸಹಜ ಅನಾರೋಗ್ಯ ಕಾಡುತ್ತಿತ್ತು. ಹೀಗಾಗಿ ಜಯಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

B Jaya Death: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಜಯಾ ನಿಧನ
Follow us
ರಾಜೇಶ್ ದುಗ್ಗುಮನೆ
|

Updated on:Jun 03, 2021 | 6:56 PM

2021ರಲ್ಲೂ ಚಿತ್ರರಂಗದ ಸೆಲೆಬ್ರಿಟಿಗಳ ಸಾವಿನ ಸರಣಿ ಮುಂದುವರಿದಿದೆ. ಒಬ್ಬರಾದ ಮೇಲೆ ಒಬ್ಬರ ನಿಧನದ ಸುದ್ದಿ ಕೇಳಿ ಬರುತ್ತಲೇ ಇದೆ. ಈಗ ಸ್ಯಾಂಡಲ್​ವುಡ್​ ಹಿರಿಯ ನಟಿ ಬಿ. ಜಯಾ ಮೃತರಾಗಿದ್ದಾರೆ. ಗುರುವಾರ (ಜೂನ್​ 3) ಮಧ್ಯಾಹ್ನ 3:30 ಸುಮಾರಿಗೆ ಕೊನೆ ಉಸಿರೆಳೆದರು.

ಕೆಲ ದಿನದಿಂದ ಜಯಾ ಅವರಿಗೆ ವಯೋಸಹಜ ಅನಾರೋಗ್ಯ ಕಾಡುತ್ತಿತ್ತು. ಹೀಗಾಗಿ ಜಯಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಆರು ದಶಕಗಳ ಕಾಲ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದ ಅವರು, 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಈಗ ಅವರನ್ನು ಚಿತ್ರರಂಗ ಕಳೆದುಕೊಂಡಿದ್ದು, ಅವರ ನಿಧನಕ್ಕೆ ಅಭಿಮಾನಿಗಳು  ಹಾಗೂ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ  ಬಲಿಯಾದರು. ಬಾಲಿವುಡ್​ ನಟ ರಾಹುಲ್ ವೋಹ್ರಾ, ತೆಲುಗು ನಟ ಟಿಎನ್​ಆರ್​, ತಮಿಳು ನಟ ಪಾಂಡು, ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

ಸುಮಾರು 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ ಜನರ ಮನಸ್ಸನ್ನು ಗೆದ್ದಿದ್ದರು.  ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ಜಯಾ ಇತ್ತೀಚಿನ ದಿನಗಳಲ್ಲಿ ಕೆಲವು ಧಾರಾವಾಹಿಗಳಲ್ಲೂ ಬಣ್ಣ ಹಚ್ಚಿದ್ದರು. 1944ರಲ್ಲಿ ಜನಿಸಿದ್ದ ಜಯಾ 1958ರಲ್ಲಿ ಭಕ್ತ ಪ್ರಹ್ಲಾದ ಸಿನಿಮಾ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದರು.

ಇದನ್ನೂ ಓದಿ: HS Doreswamy Passed Away: ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ನಿಧನ

ಖ್ಯಾತ ಕಾಲಿವುಡ್​ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು

Published On - 6:22 pm, Thu, 3 June 21

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ