AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪೇಂದ್ರ ಹೀರೋ ಆಗಲು ಕಾರಣವಾಗಿದ್ದೇ ಬಿ. ಸರೋಜಾದೇವಿ; ಆ ಘಟನೆ ನೆನೆದ ರಿಯಲ್ ಸ್ಟಾರ್

ಉಪೇಂದ್ರ ಮಾತ್ರವಲ್ಲದೇ ಅನೇಕರಿಗೆ ಬಿ. ಸರೋಜಾದೇವಿ ಅವರು ಸಹಾಯ ಮಾಡಿದ್ದರು. ಚಿತ್ರರಂಗಕ್ಕೆ ಅವರು ಹಲವು ರೀತಿಯಲ್ಲಿ ಕೊಡುಗೆ ನೀಡಿದ್ದರು. ಆ ಕುರಿತು ಉಪೇಂದ್ರ ಮಾತನಾಡಿದ್ದಾರೆ. ‘ಸರ್ಕಾರ ಗಮನ ನೀಡಬೇಕು. ಬಿ. ಸರೋಜಾದೇವಿ ಅವರ ಹೆಸರಿನಲ್ಲಿ ಒಂದು ಪ್ರಶಸ್ತಿ ಸ್ಥಾಪಿಸಬೇಕು’ ಎಂದು ಉಪೇಂದ್ರ ಹೇಳಿದ್ದಾರೆ.

ಉಪೇಂದ್ರ ಹೀರೋ ಆಗಲು ಕಾರಣವಾಗಿದ್ದೇ ಬಿ. ಸರೋಜಾದೇವಿ; ಆ ಘಟನೆ ನೆನೆದ ರಿಯಲ್ ಸ್ಟಾರ್
Upendra, B Saroja Devi
ಮದನ್​ ಕುಮಾರ್​
|

Updated on: Jul 25, 2025 | 5:13 PM

Share

ಇತ್ತೀಚೆಗೆ ನಿಧನರಾದ ಖ್ಯಾತ ನಟಿ ಬಿ. ಸರೋಜಾದೇವಿ (B Saroja Devi) ಅವರ 13ನೇ ದಿನದ ಪುಣ್ಯತಿಥಿ ಮಾಡಲಾಗಿದೆ. ಇದರಲ್ಲಿ ಅವರ ಕುಟುಂಬದವರು ಮಾತ್ರವಲ್ಲದೇ ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ಸರೋಜಾದೇವಿ ಜೊತೆಗಿನ ಒಡನಾಟ, ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಎಲ್ಲರೂ ಸ್ಮರಿಸಿಕೊಂಡಿದ್ದಾರೆ. ನಟ, ನಿರ್ದೇಶಕ ಉಪೇಂದ್ರ ಅವರಿಗೆ ಬಿ. ಸರೋಜಾದೇವಿ ಅವರ ಬಗ್ಗೆ ಅಪಾರ ಗೌರವ ಇದೆ. ಅದಕ್ಕೆ ಕಾರಣ ಏನು ಎಂಬುದನ್ನು ಅವರು ಹೇಳಿದ್ದಾರೆ. ‘ಎ’ ಸಿನಿಮಾದ (A Movie) ಬಿಡುಗಡೆ ವೇಳೆ ಸರೋಜಾದೇವಿ ಅವರು ಮಾಡಿದ್ದ ಸಹಾಯವನ್ನು ಉಪೇಂದ್ರ (Upendra) ಇಂದಿಗೂ ಸ್ಮರಿಸಿಕೊಳ್ಳುತ್ತಾರೆ.

‘ಓಂ’, ‘ಶ್’ ಮುಂತಾದ ಸಿನಿಮಾಗಳ ಮೂಲಕ ನಿರ್ದೇಶಕನಾಗಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಉಪೇಂದ್ರ ಅವರು ಸಾಬೀತು ಮಾಡಿದ್ದರು. ಬಳಿಕ ಅವರು ಹೀರೋ ಆಗಲು ನಿರ್ಧರಿಸಿದರು. ಅವರು ಹೀರೋ ಆಗಿ ನಟಿಸಿದ ಮೊದಲ ಸಿನಿಮಾ ‘ಎ’ ತುಂಬಾ ಭಿನ್ನವಾಗಿ ಮೂಡಿಬಂದಿತ್ತು. ಆದರೆ ಆ ಸಿನಿಮಾಗೆ ಸೆನ್ಸಾರ್ ಸಮಸ್ಯೆ ಆಗಿತ್ತು. ಆದರೆ ಆ ಸಮಸ್ಯೆಯನ್ನು ಪರಿಹರಿಸಿದವರೇ ಬಿ. ಸರೋಜಾದೇವಿ.

‘ಎ ಸಿನಿಮಾವನ್ನು ಸೆನ್ಸಾರ್ ಮಾಡಲು ಸಾಧ್ಯವಿಲ್ಲ. ಅದು ಬಿಡುಗಡೆಗೆ ಯೋಗ್ಯವಲ್ಲದ ಸಿನಿಮಾ ಎಂಬ ಸಂದರ್ಭ ಬಂದಿತ್ತು. ಆಗ ನಮ್ಮ ಸಿನಿಮಾ ರಿವೈಸಿಂಗ್ ಕಮಿಟಿಗೆ ಹೋದಾಗ ಸರೋಜಾದೇವಿ ಅವರು ನನ್ನನ್ನು ಒಳಗೆ ಕರೆದ ರೀತಿಯೇ ಆಶ್ಚರ್ಯ. ಎದ್ದು ನಿಂತುಕೊಂಡು, ಚಪ್ಪಾಳೆ ತಟ್ಟಿ ನನ್ನನ್ನು ಕರೆದರು. ಮೊದಲ ಬಾರಿಗೆ ಎ ಸಿನಿಮಾವನ್ನು ಹೊಗಳಿದ ಮಹಾತಾಯಿ ಅವರು’ ಎಂದಿದ್ದಾರೆ ಉಪೇಂದ್ರ.

ಇದನ್ನೂ ಓದಿ
Image
‘ಅತ್ಯಂತ ದುಃಖವಾಗಿದೆ’: ಬಿ. ಸರೋಜಾದೇವಿ ನಿಧನಕ್ಕೆ ಕಂಬನಿ ಮಿಡಿದ ನಟ ದರ್ಶನ್
Image
ಸರೋಜಾದೇವಿ ಅವರೊಂದಿಗಿನ ನೆನಪಿನ ಬುತ್ತಿ ಬಿಚ್ಚಿಟ್ಟ ನಟ ಜಗ್ಗೇಶ್
Image
ಪುನೀತ್ ನನ್ನ ಮಗ ಆಗಿರಬೇಕಿತ್ತು ಎಂದುಕೊಂಡಿದ್ದ ಸರೋಜಾ ದೇವಿ
Image
ತಾಯಿಗೆ ಕೊಟ್ಟ ಮಾತನ್ನು ಕೊನೆವರೆಗೂ ಉಳಿಸಿಕೊಂಡ ಸರೋಜಾ ದೇವಿ

‘ಅಂದು ಬಿ. ಸರೋಜಾದೇವಿ ಅವರು ಎ ಚಿತ್ರವನ್ನು ಹೊಗಳಿ, ಸೆನ್ಸಾರ್ ಮಾಡಿಕೊಟ್ಟರು. ನೀವು ಇಲ್ಲದೇ ಇದ್ದಿದ್ದರೆ ನಾನು ಹೀರೋನೇ ಆಗುತ್ತಿರಲಿಲ್ಲ ಎಂದು ಅವರು ಸಿಕ್ಕಾಗೆಲ್ಲ ನಾನು ಹೇಳುತ್ತಿದ್ದೆ’ ಎಂದು ಉಪೇಂದ್ರ ಹೇಳಿದ್ದಾರೆ. ಆ ಮೂಲಕ ತಮಗೆ ಸಹಾಯ ಮಾಡಿದ ಸರೋಜಾದೇವಿ ಅವರನ್ನು ಉಪೇಂದ್ರ ಸ್ಮರಿಸಿದ್ದಾರೆ. ‘ಎ’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಉಪೇಂದ್ರ ಅವರು ಬಹುಬೇಡಿಕೆಯ ಹೀರೋ ಆಗಿ ಬೆಳೆದರು.

ಇದನ್ನೂ ಓದಿ: ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ

‘ರಾಜ್​ಕುಮಾರ್, ವಿಷ್ಣುವರ್ಧನ್ ಅವರ ಹೆಸರಿನಲ್ಲಿ ದೊಡ್ಡ ದೊಡ್ಡ ಪ್ರಶಸ್ತಿಗಳು ಇದೆಯಲ್ಲ ಅದೇ ರೀತಿ ಸರೋಜಮ್ಮ ಅವರ ಹೆಸರಿನಲ್ಲಿ ಕೂಡ ಒಂದು ಪ್ರಶಸ್ತಿ ನೀಡಬೇಕು ಎಂಬುದು ಎಲ್ಲರ ಆಶಯ. ಎರಡು ಬಾರಿ ಅವರು ಸೆಂಟ್ರಲ್ ಜ್ಯೂರಿ ಆಗಿದ್ದರು. ಅವರ ಸಾಧನೆ ಬಗ್ಗೆ ಎಲ್ಲರಿಗೂ ಗೊತ್ತು. ಆ ಬಗ್ಗೆ ಮಾತನಾಡಲು ನಾನು ತುಂಬಾ ಚಿಕ್ಕವನು’ ಎಂದಿದ್ದಾರೆ ಉಪೇಂದ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ