AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಗಿ ಗಂಗಿ’ ಹಾಡಿನ ಮೂಲಕ ಗಮನ ಸೆಳೆದ ಉತ್ತರ ಕರ್ನಾಟಕ ಪ್ರತಿಭೆ ಬಾಳು ಬೆಳಗುಂದಿ

ಉತ್ತರ ಕರ್ನಾಟಕದ ಪ್ರತಿಭಾನ್ವಿತ ಗಾಯಕಿ ಬಾಳು ಬೆಳಗುಂದಿ ಅವರು "ಬ್ರಾಟ್" ಚಿತ್ರದ "ಗಂಗಿ ಗಂಗಿ" ಹಾಡಿನ ಮೂಲಕ ಗಮನ ಸೆಳೆದಿದ್ದಾರೆ. ಸರಿಗಮಪದಲ್ಲಿ ಖ್ಯಾತಿ ಪಡೆದ ಬಾಳು ಅವರ ಈ ಹಾಡು ಪಕ್ಕಾ ಉತ್ತರ ಕರ್ನಾಟಕ ಶೈಲಿಯಲ್ಲಿದ್ದು. ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನದಲ್ಲಿದೆ. ಈ ಹಾಡು ಈಗಾಗಲೇ ಜನಪ್ರಿಯವಾಗಿದ್ದು, ಉತ್ತರ ಕರ್ನಾಟಕದ ಜನರ ಮನಗೆದ್ದಿದೆ.

‘ಗಂಗಿ ಗಂಗಿ’ ಹಾಡಿನ ಮೂಲಕ ಗಮನ ಸೆಳೆದ ಉತ್ತರ ಕರ್ನಾಟಕ ಪ್ರತಿಭೆ ಬಾಳು ಬೆಳಗುಂದಿ
ಬಾಳು
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Sep 14, 2025 | 11:29 AM

Share

ಇತ್ತೀಚಿನ ವರ್ಷಗಳಲ್ಲಿ ಉತ್ತರ ಕರ್ನಾಟಕ ಪ್ರತಿಭೆಗಳಿಗೆ ಸೋಶಿಯಲ್ ಮೀಡಿಯಾ, ಯೂಟ್ಯೂಬ್ ಒಳ್ಳೆಯ ವೇದಿಕೆ ಆಗಿದೆ ಎಂಬುದನ್ನು ಒಪ್ಪಿಕೊಳ್ಳಲೇಬೇಕು. ಸಾಕಷ್ಟು ವೇದಿಕೆಗಳಲ್ಲಿ ಉತ್ತರ ಕರ್ನಾಟಕ ಪ್ರತಿಭೆಗಳು ಗಮನ ಸೆಳೆದ ಉದಾಹರಣೆ ಇದೆ. ಈಗ ಉತ್ತರ ಕರ್ನಾಟಕದ್ದೇ ಪ್ರತಿಭೆಯಾದ ಬಾಳು ಬೆಳಗುಂದಿ (Balu Belagundi) ಅವರು ಸಿನಿಮಾಗಾಗಿ ಹಾಡೊಂದನ್ನು ಹಾಡಿರುವುದು ವಿಶೇಷ. ‘ಬ್ರ್ಯಾಟ್’ ಚಿತ್ರದ ‘ಗಂಗಿ ಗಂಗಿ’ ಹಾಡನ್ನು ಅವರು ಹಾಡಿದ್ದಾರೆ.

ಡಾರ್ಲಿಂಗ್ ಕೃಷ್ಣ ಅವರು ‘ಬ್ರ್ಯಾಟ್’ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ರಿಲೀಸ್​ಗೂ ಮೊದಲೇ ಸಾಕಷ್ಟು ಗಮನ ಸೆಳೆಯುತ್ತಾ ಇದೆ. ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಬಳಿಕ ನಿರ್ದೇಶಕ ಶಶಾಂಕ್ ಅವರು ಮತ್ತೊಮ್ಮೆ ಕೃಷ್ಣ ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅವರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಕೆಲಸವನ್ನು ಈ ಚಿತ್ರದಲ್ಲಿಯೂ ಮುಂದುವರಿಸಿದ್ದಾರೆ.

ಗಂಗಿ ಗಂಗಿ ಹಾಡು

ಈ ಮೊದಲು ‘ಬ್ರ್ಯಾಟ್ ಚಿತ್ರದ ಹಾಡನ್ನು ‘ನಾನೇ ನೀನಂತೆ..’ ಹಾಡಿನ ಕನ್ನಡದ ಫಿಮೇಲ್ ವರ್ಷನ್​ ಅನ್ನು  ಲಹರಿ ಮಹೇಶ್ ಹಾಡಿದ್ದರು. ಈಗ ‘ಬ್ರ್ಯಾಟ್’ ಚಿತ್ರದ ‘ಗಂಗಿ ಗಂಗಿ’ ಹಾಡಿಗೆ ಬಾಳು ಬೆಳಗುಂದಿ ಧ್ವನಿ ನೀಡಿದ್ದಾರೆ. ಈ ಹಾಡು ಪಕ್ಕಾ ಉತ್ತರ ಕರ್ನಾಟಕ ಭಾಷೆಯಲ್ಲಿ ಮೂಡಿ ಬಂದಿದೆ. ಈ ಕಾರಣಕ್ಕೆ ಉತ್ತರ ಕರ್ನಾಟಕದ ಪ್ರತಿಭೆಗೆ ಅವಕಾಶ ನೀಡಲಾಗಿದೆ. ಇಂದು ನಾಗರಾಜ್ ಕೂಡ ಹಾಡನ್ನು ಹಾಡಿರುವರು.

ಇದನ್ನೂ ಓದಿ: ದರ್ಶನ್ ತೂಗುದೀಪ ಪರಿಸ್ಥಿತಿ ಬಗ್ಗೆ ಗಾಯಕ ಬಾಳು ಬೆಳಗುಂದಿ ಹೇಳೋದೇನು?

ಬಾಳು ಬೆಳಗುಂದಿ ಅವರು ಕಳೆದ ‘ಸರಿಗಮಪ’ ವೇದಿಕೆ ಮೇಲೆ ಸ್ಪರ್ಧಿಯಾಗಿ ಗಮನ ಸೆಳೆದರು. ಫಿನಾಲೆ ಸಮೀಪದವರೆಗೂ ಅವರು ತೆರಳಿದ್ದರು. ಅವರ ಧ್ವನಿ ಅನೇಕರಿಗೆ ಇಷ್ಟ ಆಗಿತ್ತು. ವಿಶೇಷ ಎಂದರೆ ಅವರೇ ಹಲವು ಹಾಡುಗಳನ್ನು ಪೋಣಿಸಿ ಹೇಳುತ್ತಿದ್ದರು. ಈ ಮೂಲಕವೂ ಅವರು ಜಡ್ಜ್​ಗಳನ್ನು ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ಈಗ ಅವರು ‘ಗಂಗಿ ಗಂಗಿ’ ಹಾಡಿನ ಮೂಲಕ ಎಲ್ಲರಿಂದಲೂ ಭೇಷ್ ಎನಿಸಿಕೊಂಡಿದ್ದಾರೆ. ಈ ಹಾಡು ಉತ್ತರ ಕರ್ನಾಟಕ ಮಂದಿಗೂ ಸಾಕಷ್ಟು ಇಷ್ಟ ಆಗಿದೇ ಎಂದೇ ಹೇಳಬಹುದು. ಆನಂದ್ ವಿಡಿಯೋ ಮೂಲಕ ರಿಲೀಸ್ ಆದ ಈ ಹಾಡಿಗೆ ಉತ್ತರ ಕರ್ನಾಟಕದ ಜನರು ಕಮೆಂಟ್ ಮಾಡುವ ಕೆಲಸ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:29 am, Sun, 14 September 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!