AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಗಿ ಗಂಗಿ’ ಹಾಡಿನ ಮೂಲಕ ಗಮನ ಸೆಳೆದ ಉತ್ತರ ಕರ್ನಾಟಕ ಪ್ರತಿಭೆ ಬಾಳು ಬೆಳಗುಂದಿ

ಉತ್ತರ ಕರ್ನಾಟಕದ ಪ್ರತಿಭಾನ್ವಿತ ಗಾಯಕಿ ಬಾಳು ಬೆಳಗುಂದಿ ಅವರು "ಬ್ರಾಟ್" ಚಿತ್ರದ "ಗಂಗಿ ಗಂಗಿ" ಹಾಡಿನ ಮೂಲಕ ಗಮನ ಸೆಳೆದಿದ್ದಾರೆ. ಸರಿಗಮಪದಲ್ಲಿ ಖ್ಯಾತಿ ಪಡೆದ ಬಾಳು ಅವರ ಈ ಹಾಡು ಪಕ್ಕಾ ಉತ್ತರ ಕರ್ನಾಟಕ ಶೈಲಿಯಲ್ಲಿದ್ದು. ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನದಲ್ಲಿದೆ. ಈ ಹಾಡು ಈಗಾಗಲೇ ಜನಪ್ರಿಯವಾಗಿದ್ದು, ಉತ್ತರ ಕರ್ನಾಟಕದ ಜನರ ಮನಗೆದ್ದಿದೆ.

‘ಗಂಗಿ ಗಂಗಿ’ ಹಾಡಿನ ಮೂಲಕ ಗಮನ ಸೆಳೆದ ಉತ್ತರ ಕರ್ನಾಟಕ ಪ್ರತಿಭೆ ಬಾಳು ಬೆಳಗುಂದಿ
ಬಾಳು
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 14, 2025 | 11:29 AM

Share

ಇತ್ತೀಚಿನ ವರ್ಷಗಳಲ್ಲಿ ಉತ್ತರ ಕರ್ನಾಟಕ ಪ್ರತಿಭೆಗಳಿಗೆ ಸೋಶಿಯಲ್ ಮೀಡಿಯಾ, ಯೂಟ್ಯೂಬ್ ಒಳ್ಳೆಯ ವೇದಿಕೆ ಆಗಿದೆ ಎಂಬುದನ್ನು ಒಪ್ಪಿಕೊಳ್ಳಲೇಬೇಕು. ಸಾಕಷ್ಟು ವೇದಿಕೆಗಳಲ್ಲಿ ಉತ್ತರ ಕರ್ನಾಟಕ ಪ್ರತಿಭೆಗಳು ಗಮನ ಸೆಳೆದ ಉದಾಹರಣೆ ಇದೆ. ಈಗ ಉತ್ತರ ಕರ್ನಾಟಕದ್ದೇ ಪ್ರತಿಭೆಯಾದ ಬಾಳು ಬೆಳಗುಂದಿ (Balu Belagundi) ಅವರು ಸಿನಿಮಾಗಾಗಿ ಹಾಡೊಂದನ್ನು ಹಾಡಿರುವುದು ವಿಶೇಷ. ‘ಬ್ರ್ಯಾಟ್’ ಚಿತ್ರದ ‘ಗಂಗಿ ಗಂಗಿ’ ಹಾಡನ್ನು ಅವರು ಹಾಡಿದ್ದಾರೆ.

ಡಾರ್ಲಿಂಗ್ ಕೃಷ್ಣ ಅವರು ‘ಬ್ರ್ಯಾಟ್’ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ರಿಲೀಸ್​ಗೂ ಮೊದಲೇ ಸಾಕಷ್ಟು ಗಮನ ಸೆಳೆಯುತ್ತಾ ಇದೆ. ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಬಳಿಕ ನಿರ್ದೇಶಕ ಶಶಾಂಕ್ ಅವರು ಮತ್ತೊಮ್ಮೆ ಕೃಷ್ಣ ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅವರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಕೆಲಸವನ್ನು ಈ ಚಿತ್ರದಲ್ಲಿಯೂ ಮುಂದುವರಿಸಿದ್ದಾರೆ.

ಗಂಗಿ ಗಂಗಿ ಹಾಡು

ಈ ಮೊದಲು ‘ಬ್ರ್ಯಾಟ್ ಚಿತ್ರದ ಹಾಡನ್ನು ‘ನಾನೇ ನೀನಂತೆ..’ ಹಾಡಿನ ಕನ್ನಡದ ಫಿಮೇಲ್ ವರ್ಷನ್​ ಅನ್ನು  ಲಹರಿ ಮಹೇಶ್ ಹಾಡಿದ್ದರು. ಈಗ ‘ಬ್ರ್ಯಾಟ್’ ಚಿತ್ರದ ‘ಗಂಗಿ ಗಂಗಿ’ ಹಾಡಿಗೆ ಬಾಳು ಬೆಳಗುಂದಿ ಧ್ವನಿ ನೀಡಿದ್ದಾರೆ. ಈ ಹಾಡು ಪಕ್ಕಾ ಉತ್ತರ ಕರ್ನಾಟಕ ಭಾಷೆಯಲ್ಲಿ ಮೂಡಿ ಬಂದಿದೆ. ಈ ಕಾರಣಕ್ಕೆ ಉತ್ತರ ಕರ್ನಾಟಕದ ಪ್ರತಿಭೆಗೆ ಅವಕಾಶ ನೀಡಲಾಗಿದೆ. ಇಂದು ನಾಗರಾಜ್ ಕೂಡ ಹಾಡನ್ನು ಹಾಡಿರುವರು.

ಇದನ್ನೂ ಓದಿ: ದರ್ಶನ್ ತೂಗುದೀಪ ಪರಿಸ್ಥಿತಿ ಬಗ್ಗೆ ಗಾಯಕ ಬಾಳು ಬೆಳಗುಂದಿ ಹೇಳೋದೇನು?

ಬಾಳು ಬೆಳಗುಂದಿ ಅವರು ಕಳೆದ ‘ಸರಿಗಮಪ’ ವೇದಿಕೆ ಮೇಲೆ ಸ್ಪರ್ಧಿಯಾಗಿ ಗಮನ ಸೆಳೆದರು. ಫಿನಾಲೆ ಸಮೀಪದವರೆಗೂ ಅವರು ತೆರಳಿದ್ದರು. ಅವರ ಧ್ವನಿ ಅನೇಕರಿಗೆ ಇಷ್ಟ ಆಗಿತ್ತು. ವಿಶೇಷ ಎಂದರೆ ಅವರೇ ಹಲವು ಹಾಡುಗಳನ್ನು ಪೋಣಿಸಿ ಹೇಳುತ್ತಿದ್ದರು. ಈ ಮೂಲಕವೂ ಅವರು ಜಡ್ಜ್​ಗಳನ್ನು ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ಈಗ ಅವರು ‘ಗಂಗಿ ಗಂಗಿ’ ಹಾಡಿನ ಮೂಲಕ ಎಲ್ಲರಿಂದಲೂ ಭೇಷ್ ಎನಿಸಿಕೊಂಡಿದ್ದಾರೆ. ಈ ಹಾಡು ಉತ್ತರ ಕರ್ನಾಟಕ ಮಂದಿಗೂ ಸಾಕಷ್ಟು ಇಷ್ಟ ಆಗಿದೇ ಎಂದೇ ಹೇಳಬಹುದು. ಆನಂದ್ ವಿಡಿಯೋ ಮೂಲಕ ರಿಲೀಸ್ ಆದ ಈ ಹಾಡಿಗೆ ಉತ್ತರ ಕರ್ನಾಟಕದ ಜನರು ಕಮೆಂಟ್ ಮಾಡುವ ಕೆಲಸ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:29 am, Sun, 14 September 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ