AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ರೆಬೈಲು ಆನೆ ಮರಿಗೆ ಪುನೀತ್​ ಹೆಸರು; ವನ್ಯಜೀವಿಗಳ ಬಗ್ಗೆ ಅಪ್ಪುಗೆ ಇತ್ತು ವಿಶೇಷ ಕಾಳಜಿ

Puneeth Rajkumar: ವನ್ಯಜೀವಿ ಸಂಬಂಧಿತ ಸಾಕ್ಷ್ಯಚಿತ್ರದ ಚಿತ್ರೀಕರಣಕ್ಕಾಗಿ ಕೆಲ ತಿಂಗಳ ಹಿಂದೆಯಷ್ಟೇ ಸಕ್ರೆಬೈಲು ಆನೆ ಬಿಡಾರಕ್ಕೆ ಪುನೀತ್​ ರಾಜ್​ಕುಮಾರ್​ ಭೇಟಿ ನೀಡಿದ್ದರು. ಈ ವೇಳೆ ಮರಿಯಾನೆ ಕಂಡು ಖುಷಿಯಿಂದ ಅವರು ಮುದ್ದಾಡಿದ್ದರು.

ಸಕ್ರೆಬೈಲು ಆನೆ ಮರಿಗೆ ಪುನೀತ್​ ಹೆಸರು; ವನ್ಯಜೀವಿಗಳ ಬಗ್ಗೆ ಅಪ್ಪುಗೆ ಇತ್ತು ವಿಶೇಷ ಕಾಳಜಿ
ಸಕ್ರೆಬೈಲು ಆನೆ ಬಿಡಾರಕ್ಕೆ ಪುನೀತ್​ ರಾಜ್​ಕುಮಾರ್​ ಕೆಲ ತಿಂಗಳ ಹಿಂದೆ ಭೇಟಿ ನೀಡಿದ್ದರು
TV9 Web
| Edited By: |

Updated on: Nov 11, 2021 | 9:19 AM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದರು. ಆದರೆ ಅವುಗಳನ್ನು ಅವರು ಎಂದಿಗೂ ಪ್ರಚಾರಕ್ಕಾಗಿ ಬಳಸಿಕೊಂಡವರಲ್ಲ. ವನ್ಯಜೀವಿಗಳ ಬಗ್ಗೆಯೂ ಅವರಿಗೆ ಅಪಾರವಾದ ಪ್ರೀತಿ ಇತ್ತು. ಅರಣ್ಯದ ಮೇಲೆ ಕಾಳಜಿ ಇತ್ತು. ಹಾಗಾಗಿ ಅವರಿಗೆ ಗೌರವ ಸಲ್ಲಿಸಲು ಸಕ್ರೆಬೈಲು ಆನೆ ಬಿಡಾರದ (Sakrebailu Elephant Training Camp) ಆನೆ ಮರಿಗೆ ಪುನೀತ್​ ರಾಜ್​ಕುಮಾರ್​ ಎಂದು ಹೆಸರಿಡಲು ನಿರ್ಧಾರ ಮಾಡಲಾಗಿದೆ. ಇದು ಅಪ್ಪು ಅಭಿಮಾನಿಗಳಿಗೆ ಖುಷಿ ನೀಡಿದೆ. ಜನರು ಹಲವು ರೀತಿಯಲ್ಲಿ ಪುನೀತ್​ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಈಗ ಆನೆ ಮರಿಗೆ ಪುನೀತ್​ ಹೆಸರಿಡುವ ಮೂಲಕ ನಮನ ಸಲ್ಲಿಸಲಾಗಿದೆ. ವಿಶೇಷ ಎಂದರೆ ಇದು ಸ್ವತಃ ಪುನೀತ್​ ರಾಜ್​ಕುಮಾರ್​ ಅವರೇ ಮುದ್ದಾಡಿದ್ದ ಆನೆ ಮರಿ. ಅರಣ್ಯ ಇಲಾಖೆಯಿಂದ (Forest Department) ಪುನೀತ್​ಗೆ ವಿಶೇಷ ರೀತಿಯಲ್ಲಿ ಗೌರವ ಸಲ್ಲಿಕೆ ಆಗುತ್ತಿದೆ.

ಶಿವಮೊಗ್ಗದ ಗಾಜನೂರು ಸಮೀಪದ ಸಕ್ರೆಬೈಲು ಆನೆ ಬಿಡಾರದ ನೇತ್ರಾ ಆನೆಗೆ ಕಳೆದ ಎರಡು ವರ್ಷದ ಹಿಂದೆ ಗಂಡು ಮರಿಯಾನೆ ಜನಿಸಿತ್ತು. ಕೆಲ ತಿಂಗಳ ಹಿಂದೆಯಷ್ಟೇ ಸಕ್ರೆಬೈಲು ಆನೆ ಬಿಡಾರಕ್ಕೆ ಪುನೀತ್​ ಭೇಟಿ ನೀಡಿದ್ದರು. ವನ್ಯಜೀವಿ ಸಂಬಂಧಿತ ಸಾಕ್ಷ್ಯಚಿತ್ರದ ಚಿತ್ರೀಕರಣದ ಸಲುವಾಗಿ ಅವರು ಸಕ್ರೆಬೈಲಿಗೆ ಬಂದಿದ್ದರು. ಈ ವೇಳೆ ಮರಿಯಾನೆ ಕಂಡು ಖುಷಿಯಿಂದ ಅವರು ಮುದ್ದಾಡಿದ್ದರು.

ಈಗ ಮರಿ ಆನೆಯನ್ನು ತಾಯಿಯಿಂದ ಬೇರ್ಪಡಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಅದಕ್ಕೆ ಪುನೀತ್​ ಎಂದು ಹೆಸರಿಡಲಾಗಿದೆ. ಅಪ್ಪು ಹೆಸರನ್ನು ಶಾಶ್ವತವಾಗಿಸಲು ಜನರು ಅನೇಕ ಕೆಲಸ ಮಾಡುತ್ತಿದ್ದಾರೆ. ರಸ್ತೆ, ವೃತ್ತ, ಮೈದಾನ, ಕ್ರೀಡಾಂಗಣ, ಪಾರ್ಕ್​​ಗಳಿಗೆ ಪುನೀತ್​ ರಾಜ್​ಕುಮಾರ್​ ಎಂದು ಹೆಸರು ಇಡಲಾಗುತ್ತಿದೆ. ಬೆಂಗಳೂರಿನ ವೆಸ್ಟ್​ ಆಫ್​ ಕಾರ್ಡ್​ ರೋಡ್​, ಬಳ್ಳಾರಿ ರಸ್ತೆಗೂ ಪುನೀತ್ ಹೆಸರು ಇಡಬೇಕು ಎಂಬ ಬಗ್ಗೆ ಮನವಿ ಬಂದಿದೆ. ಈ ಕುರಿತು ಇತ್ತೀಚೆಗೆ ಬಿಬಿಎಂಪಿ ಆಯುಕ್ತರು ಕೂಡ ಪ್ರತಿಕ್ರಿಯೆ ನೀಡಿದ್ದರು.

‘ನಮಗೆ ನೇರವಾಗಿ ಯಾವುದೇ ಮನವಿ ಬಂದಿಲ್ಲ. ಆದರೆ ಮಾಧ್ಯಮಗಳಿಂದ ಈ ಬಗ್ಗೆ ಮಾಹಿತಿ ತಿಳಿದುಕೊಂಡಿದ್ದೇನೆ. ಚರ್ಚೆ ಆಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಅಂತಿಮವಾಗಿ ರಾಜ್ಯ ಸರ್ಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು. ಜನರ ಭಾವನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಸರ್ಕಾರದ ಜೊತೆ ನಾವು ಚರ್ಚಿಸುತ್ತೇವೆ. ಶೀಘ್ರವೇ ಈ ಬಗ್ಗೆ ಒಂದು ನಿರ್ಧಾರ ತೆಗೆದುಕೊಳ್ಳಲಾಗುವುದು ಅಂತ ನಾನು ಭಾವಿಸುತ್ತೇನೆ’ ಎಂದು ಗೌರವ್​ ಗುಪ್ತಾ ಹೇಳಿದ್ದರು.

ಇದನ್ನೂ ಓದಿ:

ಪುನೀತ್​ ಸಾವಿನಲ್ಲೂ ಲಾಭ ಮಾಡಲು ಪ್ರಯತ್ನಿಸಿದ್ರಾ ರಜನಿಕಾಂತ್​? ಸಿಟ್ಟಾದ ಜನರಿಂದ ಕಟು ಟೀಕೆ

‘ಅಪ್ಪು ಸರ್​ ವಿಚಾರದಲ್ಲಿ ಮರಣ ಎಂಬ ಪದ ಬಳಸೋಕೆ ನಾನು ಇಷ್ಟಪಡಲ್ಲ’: ರಚಿತಾ ರಾಮ್​​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ