AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್ ಮುಗಿಸಿದ ‘ಬಡವ್ರ ಮಕ್ಕಳು ಬೆಳಿಬೇಕು ಕಣ್ರಯ್ಯ’ ಸಿನಿಮಾ

ಸುಚೇಂದ್ರ ಪ್ರಸಾದ್, ಸಂಗೀತಾ ಅವರು ‘ಬಡವ್ರ ಮಕ್ಕಳು ಬೆಳಿಬೇಕು ಕಣ್ರಯ್ಯ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಮಂಜು ಕವಿ ನಿರ್ದೇಶನ ಮಾಡಿದ ಈ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಟ್ರೇಲರ್​ ಬಿಡುಗಡೆ ಮಾಡಲು ಚಿತ್ರತಂಡದವರು ಸಿದ್ಧತೆ ನಡೆಸಿದ್ದಾರೆ. ಅನೇಕ ಹಾಸ್ಯ ಕಲಾವಿದರು ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಶೂಟಿಂಗ್ ಮುಗಿಸಿದ ‘ಬಡವ್ರ ಮಕ್ಕಳು ಬೆಳಿಬೇಕು ಕಣ್ರಯ್ಯ’ ಸಿನಿಮಾ
‘ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ’ ಸಿನಿಮಾ ಪೋಸ್ಟರ್
ಮದನ್​ ಕುಮಾರ್​
|

Updated on: Oct 24, 2024 | 3:09 PM

Share

ಟೈಟಲ್ ಡಿಫರೆಂಟ್ ಆಗಿದ್ದರೆ ಸಿನಿಮಾ ಮೇಲೆ ಪ್ರೇಕ್ಷಕರಿಗೆ ಕೌತುಕ ಮೂಡುತ್ತದೆ. ಈಗ ‘ಬಡವ್ರ ಮಕ್ಕಳು ಬೆಳಿಬೇಕು ಕಣ್ರಯ್ಯ’ ಸಿನಿಮಾ ಕೂಡ ಈ ವಿಚಾರದಲ್ಲಿ ಗಮನ ಸೆಳೆಯುತ್ತಿದೆ. ‘ಶ್ರೀ ರಾಮ ಪ್ರೊಡಕ್ಷನ್’ ಸಂಸ್ಥೆಯ ಮೂಲಕ ಸಿ .ಎಸ್. ವೆಂಕಟೇಶ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಬಗ್ಗೆ ಒಂದು ಅಪ್​ಡೇಟ್​ ಸಿಕ್ಕಿದೆ. ಅದೇನೆಂದರೆ, ಈ ಚಿತ್ರದ ಶೂಟಿಂಗ್ ಮುಕ್ತಾಯ ಆಗಿದೆ. ನವೆಂಬರ್​ 10ರಂದು ಈ ಚಿತ್ರದ ಟ್ರೇಲರ್​ ರಿಲೀಸ್​ ಮಾಡಲು ಸಿದ್ಧತೆ ನಡೆದಿದೆ. ‘ಬಡವ್ರ ಮಕ್ಕಳು ಬೆಳಿಬೇಕು ಕಣ್ರಯ್ಯ’ ಸಿನಿಮಾದ ಮುಖ್ಯ ಪಾತ್ರದಲ್ಲಿ ಸುಚೇಂದ್ರ ಪ್ರಸಾದ್ ಮತ್ತು ಸಂಗೀತಾ ನಟಿಸಿದ್ದಾರೆ.

ಮಕ್ಕಳ ಪಾತ್ರದಲ್ಲಿ ರಾಜವರ್ಧನ್, ವೈಭವಿ, ಲಾವಣ್ಯ ಅವರು ನಟಿಸಿದ್ದಾರೆ. ಈ ಚಿತ್ರಕ್ಕೆ ಮಂಜು ಕವಿ ಅವರು ಸಾಹಿತ್ಯ, ಸಂಭಾಷಣೆ ಬರೆದಿದ್ದಾರೆ. ಅಲ್ಲದೇ ಸಂಗೀತ ಸಂಯೋಜನೆಯನ್ನೂ ಮಾಡಿದ್ದಾರೆ. ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನೂ ಕೂಡ ಅವರೇ ನಿಭಾಯಿಸಿದ್ದಾರೆ. ಎಸ್.ಜೆ. ಸಂಜಯ್, ಗಿರೀಶ್ ಸಾಕಿ, ಸಂಗೀತಾ ಶೆಟ್ಟಿ ಅವರು ಡೈರೆಕ್ಷನ್​ ತಂಡದಲ್ಲಿ ಇದ್ದಾರೆ‌.

‘ಬಡವ್ರ ಮಕ್ಕಳು ಬೆಳಿಬೇಕು ಕಣ್ರಯ್ಯ’ ಚಿತ್ರಕ್ಕೆ ರೇಣು ಕುಮಾರ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಕರಣ್ ಕುಮಾರ್ ಮತ್ತು ವೆಂಕಿ ಯುಡಿಐ ಅವರು ಸಂಕಲನ ಮಾಡಿದ್ದಾರೆ. ನಂದ ಮಾಸ್ಟರ್ ಮತ್ತು ಮೈಸೂರು ರಾಜು ಅವರ ನೃತ್ಯ ಈ ಸಿನಿಮಾಗಿದೆ. ಸಿನಿಮಾದಲ್ಲಿ 4 ಹಾಡುಗಳಿದ್ದು ರವೀಂದ್ರ ಸೊರಗಾವಿ, ಕೈಲಾಶ್ ಕೇರ್, ಅನುರಾಧ ಭಟ್ ಅವರು ಧ್ವನಿ ನೀಡಿದ್ದಾರೆ. ವಿನು ಮನಸು ಅವರು ಹಿನ್ನೆಲೆ ಸಂಗೀತ ನೀಡಿದ್ದಾರೆ.

ಸುಚೇಂದ್ರ ಪ್ರಸಾದ್, ಸಂಗೀತಾ, ರಾಜವರ್ಧನ್, ವೈಭವಿ, ಲಾವಣ್ಯ ಮಾತ್ರವಲ್ಲದೇ ಚಂದ್ರಪ್ರಭ, ಟೆನ್ನಿಸ್ ಕೃಷ್ಣ, ವಿನೋದ್ ಗೊಬ್ಬರಗಾಲ, ರೇಖಾ ದಾಸ್, ವಿನೋದ್, ಜಗದೀಶ್ ಕೊಪ್ಪ, ಮೂಗು ಸುರೇಶ್, ಚೈತ್ರಾ ಕೊಟ್ಟೂರು, ಶಿವಾರೆಡ್ಡಿ, ಮಂಜು ಪಾವಗಡ, ಮುಖೇಶ್, ಸಿಲ್ಲಿ ಲಲ್ಲಿ ಚಿದಾನಂದ್, ಶ್ರೀನಿವಾಸ್ ಗೌಡ, ಸುರೇಶ್ ಉದ್ಬೂರ್, ಯಶೋದಾ ನಾಗರಾಜ್ ಕೂಡ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ‘ಇದರಿಂದ ಮಕ್ಕಳು ಎಷ್ಟು ನಲುಗಬಹುದು ಎಂಬುದನ್ನು ಯೋಚಿಸಿದಾಗ ಮನಸ್ಸು ವಿಚಲಿತವಾಗುತ್ತದೆ’: ಸುಚೇಂದ್ರ ಪ್ರಸಾದ್

ಬಡತನದ ಫ್ಯಾಮಿಲಿಯಲ್ಲಿ ಹುಟ್ಟಿದ ಮಕ್ಕಳ ಪರಿಸ್ಥಿತಿ ಹೇಗಿರುತ್ತದೆ? ಮಕ್ಕಳಿಗಾಗಿ ತಂದೆ-ತಾಯಿ ಪಡುವ ಕಷ್ಟಗಳು ಹೇಗಿರುತ್ತವೆ? ಬಡತನವನ್ನು ನಿಭಾಯಿಸುವುದು ಹೇಗೆ? ಬಡತನದ ಕುಟುಂಬಕ್ಕೆ ಸಮಾಜ ಯಾವ ರೀತಿ ಬೆಲೆ ಕೊಡುತ್ತದೆ ಎಂಬಿತ್ಯಾದಿ ವಿಷಯಗಳನ್ನು ಈ ಸಿನಿಮಾ ಮೂಲಕ ಹೇಳಲಾಗುವುದು. ಅಂದುಕೊಂಡಂತೆಯೇ ಸಿನಿಮಾ ಮೂಡಿಬಂದಿದೆ ಎಂದು ನಿರ್ದೇಶಕ ಮಂಜು ಕವಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!