AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Murali: ಶೂಟಿಂಗ್ ವೇಳೆ ಪೆಟ್ಟು ಮಾಡಿಕೊಂಡ ಶ್ರೀಮುರಳಿಗೆ ಶಸ್ತ್ರ ಚಿಕಿತ್ಸೆ; 3 ತಿಂಗಳು ಡ್ಯಾನ್ಸ್​, ಫೈಟ್​ ಕಷ್ಟ

Sri Murali surgery | Bagheera: ಶ್ರೀಮುರಳಿ ಅವರಿಗೆ ಇಂದು (ಜ.16) ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಆಸ್ಪತ್ರೆಯಲ್ಲೇ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ.

Sri Murali: ಶೂಟಿಂಗ್ ವೇಳೆ ಪೆಟ್ಟು ಮಾಡಿಕೊಂಡ ಶ್ರೀಮುರಳಿಗೆ ಶಸ್ತ್ರ ಚಿಕಿತ್ಸೆ; 3 ತಿಂಗಳು ಡ್ಯಾನ್ಸ್​, ಫೈಟ್​ ಕಷ್ಟ
ಶ್ರೀಮುರಳಿ
TV9 Web
| Edited By: |

Updated on: Jan 16, 2023 | 8:36 PM

Share

ನಟ ‘ರೋರಿಂಗ್​ ಸ್ಟಾರ್​’ ಶ್ರೀಮುರಳಿ (Sri Murali) ಅವರ ಅಭಿಮಾನಿಗಳಿಗೆ ಇದು ಬ್ಯಾಡ್​ ನ್ಯೂಸ್​. ಅವರು ನಟಿಸುತ್ತಿರುವ ‘ಬಘೀರ’ ಸಿನಿಮಾದ (Bagheera Movie) ಕೆಲಸಗಳು ಇನ್ನಷ್ಟು ವಿಳಂಬ ಆಗುವ ಸಾಧ್ಯತೆ ದಟ್ಟವಾಗಿದೆ. ಇತ್ತೀಚೆಗೆ ಈ ಚಿತ್ರದ ಶೂಟಿಂಗ್​ ವೇಳೆ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿತ್ತು. ಅದಕ್ಕೆ ಅವರೀಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಇನ್ನು ಮೂರು ತಿಂಗಳುಗಳ ಕಾಲ ಅವರು ವಿಶ್ರಾಂತಿ ಪಡೆಯಬೇಕಿದೆ. ಅಲ್ಲಿಯವರೆಗೂ ಅವರು ಡ್ಯಾನ್ಸ್​ ಮತ್ತು ಫೈಟ್​ ಮಾಡುವುದು ಕಷ್ಟ ಎಂಬ ಮಾಹಿತಿ ಲಭ್ಯವಾಗಿದೆ. ಆದಷ್ಟು ಬೇಗ ಶ್ರೀಮುರಳಿ ಅವರು ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶ್ರೀಮುರಳಿಗೆ ಸರ್ಜರಿ:

ಬಹುನಿರೀಕ್ಷಿತ ‘ಬಘೀರ’ ಸಿನಿಮಾಗೆ ಶ್ರೀಮುರಳಿ ಹೀರೋ. ದೊಡ್ಡ ಬಜೆಟ್​ನಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಈ ಸಿನಿಮಾಗೆ ಬಿರುಸಿನ ಶೂಟಿಂಗ್​ ನಡೆಯುತ್ತಿತ್ತು. ಆದರೆ ಈಗ ಶ್ರೀಮುರಳಿ ಅವರು ಪೆಟ್ಟು ಮಾಡಿಕೊಂಡಿರುವುದರಿಂದ ಕೆಲಸಗಳು ವಿಳಂಬ ಆಗುತ್ತಿವೆ. ಫೈಟಿಂಗ್​ ದೃಶ್ಯದ ವೇಳೆ ಪೆಟ್ಟು ಮಾಡಿಕೊಂಡಿದ್ದ ಶ್ರೀಮುರಳಿ ಅವರು ಬೆಂಗಳೂರಿನ ವಿಕ್ರಮ್​ ಆಸ್ಪತ್ರೆಗೆ ದಾಖಲಾದರು. ಡಾ. ಶಂಕರ್​ ಅವರು ಇಂದು (ಜ.16) ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ.

ಎರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ:

ಶ್ರೀಮುರಳಿ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವುದರಿಂದ ಆಸ್ಪತ್ರೆಯಲ್ಲೇ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಆನಂತರ ವಾಕಿಂಗ್​ ಮತ್ತು ರನ್ನಿಂಗ್​ ಮಾಡಲು ಸಲಹೆ ನೀಡಿದ್ದಾರೆ. ಆದರೆ ಮೂರು ತಿಂಗಳವರೆಗೆ ಡ್ಯಾನ್ಸ್​ ಮತ್ತು ಫೈಟಿಂಗ್​ ದೃಶ್ಯಗಳಲ್ಲಿ ನಟಿಸದೇ ಇರುವುದು ಉತ್ತಮ ಎಂದು ವೈದ್ಯರು ತಿಳಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಇದನ್ನೂ ಓದಿ
Image
Samyuktha Hegde: ‘ಕ್ರೀಮ್​’ ಸಿನಿಮಾ ಶೂಟಿಂಗ್​ ವೇಳೆ ಅವಘಡ; ನಟಿ ಸಂಯುಕ್ತಾ ಹೆಗಡೆಗೆ ಗಂಭೀರ ಪೆಟ್ಟು
Image
‘ಲವ್ ಯೂ ರಚ್ಚು’ ಶೂಟಿಂಗ್​ ಅವಘಡ ಪ್ರಕರಣ; ಮೂವರು ಆರೋಪಿಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ
Image
Shanvi Srivastava: ಸಿನಿಮಾ ಶೂಟಿಂಗ್ ವೇಳೆ ಅವಘಡ; ನಟಿ ಶಾನ್ವಿ ಕೈಗೆ ಪೆಟ್ಟು
Image
Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ

ಇದನ್ನೂ ಓದಿ: ವಿಜಯ್ ರಾಘವೇಂದ್ರ ಹೊಸ ಸಿನಿಮಾಗೆ ಸಹೋದರ ಶ್ರೀಮುರಳಿ ಸಾಥ್

ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ಶ್ರೀಮುರಳಿ ಹಿಂದೇಟು ಹಾಕುವವರಲ್ಲ. ದೃಶ್ಯಗಳು ಸಾಧ್ಯವಾದಷ್ಟು ರಿಯಲ್​ ಆಗಿ ಮೂಡಿಬರಬೇಕು ಎಂಬ ಉದ್ದೇಶದಿಂದ ಅವರು ಪರಿಶ್ರಮ ಪಡುತ್ತಾರೆ. ಆದರೆ ಇಂಥ ಸನ್ನಿವೇಶಗಳ ಚಿತ್ರೀಕರಣದಲ್ಲಿ ಎಷ್ಟು ಜಾಗರೂಕತೆ ವಹಿಸಿದರೂ ಸಾಲದು. ಎಷ್ಟೇ ಹುಷಾರಾಗಿದ್ದರೂ ಕೂಡ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಈಗ ‘ಬಘೀರ’ ಚಿತ್ರದ ಸೆಟ್​ನಲ್ಲಿ ಶ್ರೀಮುರಳಿ ಅವರ ಮೊಣಕಾಲಿಗೆ ಪೆಟ್ಟಾಗಿರುವುದು ಬೇಸರದ ಸಂಗತಿ.

ಇದನ್ನೂ ಓದಿ: Sri Murali: ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಸಿಂಹ ಗರ್ಜನೆ ತೋರಿಸಿದ ಪುಟಾಣಿ ಪೋರ!

ಹಲವು ಕಾರಣಗಳಿಂದಾಗಿ ‘ಬಘೀರ’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸ್ಟಾರ್​ ಡೈರೆಕ್ಟರ್​ ಪ್ರಶಾಂತ್​ ನೀಲ್​ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ಗಳು ಮಾಸ್​ ಆಗಿವೆ. ಶೀರ್ಷಿಕೆ ಕೂಡ ಡಿಫರೆಂಟ್​ ಆಗಿದೆ. ಹಾಗಾಗಿ ಶ್ರೀಮುರಳಿ ಅಭಿಮಾನಿಗಳು ಈ ಚಿತ್ರದ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು