AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Murali: ಶೂಟಿಂಗ್ ವೇಳೆ ಪೆಟ್ಟು ಮಾಡಿಕೊಂಡ ಶ್ರೀಮುರಳಿಗೆ ಶಸ್ತ್ರ ಚಿಕಿತ್ಸೆ; 3 ತಿಂಗಳು ಡ್ಯಾನ್ಸ್​, ಫೈಟ್​ ಕಷ್ಟ

Sri Murali surgery | Bagheera: ಶ್ರೀಮುರಳಿ ಅವರಿಗೆ ಇಂದು (ಜ.16) ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಆಸ್ಪತ್ರೆಯಲ್ಲೇ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ.

Sri Murali: ಶೂಟಿಂಗ್ ವೇಳೆ ಪೆಟ್ಟು ಮಾಡಿಕೊಂಡ ಶ್ರೀಮುರಳಿಗೆ ಶಸ್ತ್ರ ಚಿಕಿತ್ಸೆ; 3 ತಿಂಗಳು ಡ್ಯಾನ್ಸ್​, ಫೈಟ್​ ಕಷ್ಟ
ಶ್ರೀಮುರಳಿ
TV9 Web
| Edited By: |

Updated on: Jan 16, 2023 | 8:36 PM

Share

ನಟ ‘ರೋರಿಂಗ್​ ಸ್ಟಾರ್​’ ಶ್ರೀಮುರಳಿ (Sri Murali) ಅವರ ಅಭಿಮಾನಿಗಳಿಗೆ ಇದು ಬ್ಯಾಡ್​ ನ್ಯೂಸ್​. ಅವರು ನಟಿಸುತ್ತಿರುವ ‘ಬಘೀರ’ ಸಿನಿಮಾದ (Bagheera Movie) ಕೆಲಸಗಳು ಇನ್ನಷ್ಟು ವಿಳಂಬ ಆಗುವ ಸಾಧ್ಯತೆ ದಟ್ಟವಾಗಿದೆ. ಇತ್ತೀಚೆಗೆ ಈ ಚಿತ್ರದ ಶೂಟಿಂಗ್​ ವೇಳೆ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿತ್ತು. ಅದಕ್ಕೆ ಅವರೀಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಇನ್ನು ಮೂರು ತಿಂಗಳುಗಳ ಕಾಲ ಅವರು ವಿಶ್ರಾಂತಿ ಪಡೆಯಬೇಕಿದೆ. ಅಲ್ಲಿಯವರೆಗೂ ಅವರು ಡ್ಯಾನ್ಸ್​ ಮತ್ತು ಫೈಟ್​ ಮಾಡುವುದು ಕಷ್ಟ ಎಂಬ ಮಾಹಿತಿ ಲಭ್ಯವಾಗಿದೆ. ಆದಷ್ಟು ಬೇಗ ಶ್ರೀಮುರಳಿ ಅವರು ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶ್ರೀಮುರಳಿಗೆ ಸರ್ಜರಿ:

ಬಹುನಿರೀಕ್ಷಿತ ‘ಬಘೀರ’ ಸಿನಿಮಾಗೆ ಶ್ರೀಮುರಳಿ ಹೀರೋ. ದೊಡ್ಡ ಬಜೆಟ್​ನಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಈ ಸಿನಿಮಾಗೆ ಬಿರುಸಿನ ಶೂಟಿಂಗ್​ ನಡೆಯುತ್ತಿತ್ತು. ಆದರೆ ಈಗ ಶ್ರೀಮುರಳಿ ಅವರು ಪೆಟ್ಟು ಮಾಡಿಕೊಂಡಿರುವುದರಿಂದ ಕೆಲಸಗಳು ವಿಳಂಬ ಆಗುತ್ತಿವೆ. ಫೈಟಿಂಗ್​ ದೃಶ್ಯದ ವೇಳೆ ಪೆಟ್ಟು ಮಾಡಿಕೊಂಡಿದ್ದ ಶ್ರೀಮುರಳಿ ಅವರು ಬೆಂಗಳೂರಿನ ವಿಕ್ರಮ್​ ಆಸ್ಪತ್ರೆಗೆ ದಾಖಲಾದರು. ಡಾ. ಶಂಕರ್​ ಅವರು ಇಂದು (ಜ.16) ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ.

ಎರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ:

ಶ್ರೀಮುರಳಿ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವುದರಿಂದ ಆಸ್ಪತ್ರೆಯಲ್ಲೇ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಆನಂತರ ವಾಕಿಂಗ್​ ಮತ್ತು ರನ್ನಿಂಗ್​ ಮಾಡಲು ಸಲಹೆ ನೀಡಿದ್ದಾರೆ. ಆದರೆ ಮೂರು ತಿಂಗಳವರೆಗೆ ಡ್ಯಾನ್ಸ್​ ಮತ್ತು ಫೈಟಿಂಗ್​ ದೃಶ್ಯಗಳಲ್ಲಿ ನಟಿಸದೇ ಇರುವುದು ಉತ್ತಮ ಎಂದು ವೈದ್ಯರು ತಿಳಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಇದನ್ನೂ ಓದಿ
Image
Samyuktha Hegde: ‘ಕ್ರೀಮ್​’ ಸಿನಿಮಾ ಶೂಟಿಂಗ್​ ವೇಳೆ ಅವಘಡ; ನಟಿ ಸಂಯುಕ್ತಾ ಹೆಗಡೆಗೆ ಗಂಭೀರ ಪೆಟ್ಟು
Image
‘ಲವ್ ಯೂ ರಚ್ಚು’ ಶೂಟಿಂಗ್​ ಅವಘಡ ಪ್ರಕರಣ; ಮೂವರು ಆರೋಪಿಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ
Image
Shanvi Srivastava: ಸಿನಿಮಾ ಶೂಟಿಂಗ್ ವೇಳೆ ಅವಘಡ; ನಟಿ ಶಾನ್ವಿ ಕೈಗೆ ಪೆಟ್ಟು
Image
Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ

ಇದನ್ನೂ ಓದಿ: ವಿಜಯ್ ರಾಘವೇಂದ್ರ ಹೊಸ ಸಿನಿಮಾಗೆ ಸಹೋದರ ಶ್ರೀಮುರಳಿ ಸಾಥ್

ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ಶ್ರೀಮುರಳಿ ಹಿಂದೇಟು ಹಾಕುವವರಲ್ಲ. ದೃಶ್ಯಗಳು ಸಾಧ್ಯವಾದಷ್ಟು ರಿಯಲ್​ ಆಗಿ ಮೂಡಿಬರಬೇಕು ಎಂಬ ಉದ್ದೇಶದಿಂದ ಅವರು ಪರಿಶ್ರಮ ಪಡುತ್ತಾರೆ. ಆದರೆ ಇಂಥ ಸನ್ನಿವೇಶಗಳ ಚಿತ್ರೀಕರಣದಲ್ಲಿ ಎಷ್ಟು ಜಾಗರೂಕತೆ ವಹಿಸಿದರೂ ಸಾಲದು. ಎಷ್ಟೇ ಹುಷಾರಾಗಿದ್ದರೂ ಕೂಡ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಈಗ ‘ಬಘೀರ’ ಚಿತ್ರದ ಸೆಟ್​ನಲ್ಲಿ ಶ್ರೀಮುರಳಿ ಅವರ ಮೊಣಕಾಲಿಗೆ ಪೆಟ್ಟಾಗಿರುವುದು ಬೇಸರದ ಸಂಗತಿ.

ಇದನ್ನೂ ಓದಿ: Sri Murali: ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಸಿಂಹ ಗರ್ಜನೆ ತೋರಿಸಿದ ಪುಟಾಣಿ ಪೋರ!

ಹಲವು ಕಾರಣಗಳಿಂದಾಗಿ ‘ಬಘೀರ’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸ್ಟಾರ್​ ಡೈರೆಕ್ಟರ್​ ಪ್ರಶಾಂತ್​ ನೀಲ್​ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ಗಳು ಮಾಸ್​ ಆಗಿವೆ. ಶೀರ್ಷಿಕೆ ಕೂಡ ಡಿಫರೆಂಟ್​ ಆಗಿದೆ. ಹಾಗಾಗಿ ಶ್ರೀಮುರಳಿ ಅಭಿಮಾನಿಗಳು ಈ ಚಿತ್ರದ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ