AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Murali: ಶೂಟಿಂಗ್ ವೇಳೆ ಪೆಟ್ಟು ಮಾಡಿಕೊಂಡ ಶ್ರೀಮುರಳಿಗೆ ಶಸ್ತ್ರ ಚಿಕಿತ್ಸೆ; 3 ತಿಂಗಳು ಡ್ಯಾನ್ಸ್​, ಫೈಟ್​ ಕಷ್ಟ

Sri Murali surgery | Bagheera: ಶ್ರೀಮುರಳಿ ಅವರಿಗೆ ಇಂದು (ಜ.16) ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಆಸ್ಪತ್ರೆಯಲ್ಲೇ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ.

Sri Murali: ಶೂಟಿಂಗ್ ವೇಳೆ ಪೆಟ್ಟು ಮಾಡಿಕೊಂಡ ಶ್ರೀಮುರಳಿಗೆ ಶಸ್ತ್ರ ಚಿಕಿತ್ಸೆ; 3 ತಿಂಗಳು ಡ್ಯಾನ್ಸ್​, ಫೈಟ್​ ಕಷ್ಟ
ಶ್ರೀಮುರಳಿ
TV9 Web
| Edited By: |

Updated on: Jan 16, 2023 | 8:36 PM

Share

ನಟ ‘ರೋರಿಂಗ್​ ಸ್ಟಾರ್​’ ಶ್ರೀಮುರಳಿ (Sri Murali) ಅವರ ಅಭಿಮಾನಿಗಳಿಗೆ ಇದು ಬ್ಯಾಡ್​ ನ್ಯೂಸ್​. ಅವರು ನಟಿಸುತ್ತಿರುವ ‘ಬಘೀರ’ ಸಿನಿಮಾದ (Bagheera Movie) ಕೆಲಸಗಳು ಇನ್ನಷ್ಟು ವಿಳಂಬ ಆಗುವ ಸಾಧ್ಯತೆ ದಟ್ಟವಾಗಿದೆ. ಇತ್ತೀಚೆಗೆ ಈ ಚಿತ್ರದ ಶೂಟಿಂಗ್​ ವೇಳೆ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿತ್ತು. ಅದಕ್ಕೆ ಅವರೀಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಇನ್ನು ಮೂರು ತಿಂಗಳುಗಳ ಕಾಲ ಅವರು ವಿಶ್ರಾಂತಿ ಪಡೆಯಬೇಕಿದೆ. ಅಲ್ಲಿಯವರೆಗೂ ಅವರು ಡ್ಯಾನ್ಸ್​ ಮತ್ತು ಫೈಟ್​ ಮಾಡುವುದು ಕಷ್ಟ ಎಂಬ ಮಾಹಿತಿ ಲಭ್ಯವಾಗಿದೆ. ಆದಷ್ಟು ಬೇಗ ಶ್ರೀಮುರಳಿ ಅವರು ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶ್ರೀಮುರಳಿಗೆ ಸರ್ಜರಿ:

ಬಹುನಿರೀಕ್ಷಿತ ‘ಬಘೀರ’ ಸಿನಿಮಾಗೆ ಶ್ರೀಮುರಳಿ ಹೀರೋ. ದೊಡ್ಡ ಬಜೆಟ್​ನಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಈ ಸಿನಿಮಾಗೆ ಬಿರುಸಿನ ಶೂಟಿಂಗ್​ ನಡೆಯುತ್ತಿತ್ತು. ಆದರೆ ಈಗ ಶ್ರೀಮುರಳಿ ಅವರು ಪೆಟ್ಟು ಮಾಡಿಕೊಂಡಿರುವುದರಿಂದ ಕೆಲಸಗಳು ವಿಳಂಬ ಆಗುತ್ತಿವೆ. ಫೈಟಿಂಗ್​ ದೃಶ್ಯದ ವೇಳೆ ಪೆಟ್ಟು ಮಾಡಿಕೊಂಡಿದ್ದ ಶ್ರೀಮುರಳಿ ಅವರು ಬೆಂಗಳೂರಿನ ವಿಕ್ರಮ್​ ಆಸ್ಪತ್ರೆಗೆ ದಾಖಲಾದರು. ಡಾ. ಶಂಕರ್​ ಅವರು ಇಂದು (ಜ.16) ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ.

ಎರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ:

ಶ್ರೀಮುರಳಿ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವುದರಿಂದ ಆಸ್ಪತ್ರೆಯಲ್ಲೇ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಆನಂತರ ವಾಕಿಂಗ್​ ಮತ್ತು ರನ್ನಿಂಗ್​ ಮಾಡಲು ಸಲಹೆ ನೀಡಿದ್ದಾರೆ. ಆದರೆ ಮೂರು ತಿಂಗಳವರೆಗೆ ಡ್ಯಾನ್ಸ್​ ಮತ್ತು ಫೈಟಿಂಗ್​ ದೃಶ್ಯಗಳಲ್ಲಿ ನಟಿಸದೇ ಇರುವುದು ಉತ್ತಮ ಎಂದು ವೈದ್ಯರು ತಿಳಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಇದನ್ನೂ ಓದಿ
Image
Samyuktha Hegde: ‘ಕ್ರೀಮ್​’ ಸಿನಿಮಾ ಶೂಟಿಂಗ್​ ವೇಳೆ ಅವಘಡ; ನಟಿ ಸಂಯುಕ್ತಾ ಹೆಗಡೆಗೆ ಗಂಭೀರ ಪೆಟ್ಟು
Image
‘ಲವ್ ಯೂ ರಚ್ಚು’ ಶೂಟಿಂಗ್​ ಅವಘಡ ಪ್ರಕರಣ; ಮೂವರು ಆರೋಪಿಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ
Image
Shanvi Srivastava: ಸಿನಿಮಾ ಶೂಟಿಂಗ್ ವೇಳೆ ಅವಘಡ; ನಟಿ ಶಾನ್ವಿ ಕೈಗೆ ಪೆಟ್ಟು
Image
Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ

ಇದನ್ನೂ ಓದಿ: ವಿಜಯ್ ರಾಘವೇಂದ್ರ ಹೊಸ ಸಿನಿಮಾಗೆ ಸಹೋದರ ಶ್ರೀಮುರಳಿ ಸಾಥ್

ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ಶ್ರೀಮುರಳಿ ಹಿಂದೇಟು ಹಾಕುವವರಲ್ಲ. ದೃಶ್ಯಗಳು ಸಾಧ್ಯವಾದಷ್ಟು ರಿಯಲ್​ ಆಗಿ ಮೂಡಿಬರಬೇಕು ಎಂಬ ಉದ್ದೇಶದಿಂದ ಅವರು ಪರಿಶ್ರಮ ಪಡುತ್ತಾರೆ. ಆದರೆ ಇಂಥ ಸನ್ನಿವೇಶಗಳ ಚಿತ್ರೀಕರಣದಲ್ಲಿ ಎಷ್ಟು ಜಾಗರೂಕತೆ ವಹಿಸಿದರೂ ಸಾಲದು. ಎಷ್ಟೇ ಹುಷಾರಾಗಿದ್ದರೂ ಕೂಡ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಈಗ ‘ಬಘೀರ’ ಚಿತ್ರದ ಸೆಟ್​ನಲ್ಲಿ ಶ್ರೀಮುರಳಿ ಅವರ ಮೊಣಕಾಲಿಗೆ ಪೆಟ್ಟಾಗಿರುವುದು ಬೇಸರದ ಸಂಗತಿ.

ಇದನ್ನೂ ಓದಿ: Sri Murali: ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಸಿಂಹ ಗರ್ಜನೆ ತೋರಿಸಿದ ಪುಟಾಣಿ ಪೋರ!

ಹಲವು ಕಾರಣಗಳಿಂದಾಗಿ ‘ಬಘೀರ’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸ್ಟಾರ್​ ಡೈರೆಕ್ಟರ್​ ಪ್ರಶಾಂತ್​ ನೀಲ್​ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ಗಳು ಮಾಸ್​ ಆಗಿವೆ. ಶೀರ್ಷಿಕೆ ಕೂಡ ಡಿಫರೆಂಟ್​ ಆಗಿದೆ. ಹಾಗಾಗಿ ಶ್ರೀಮುರಳಿ ಅಭಿಮಾನಿಗಳು ಈ ಚಿತ್ರದ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು